ಬಾಗಲಕೋಟೆ: ಜನರ ಆರೋಗ್ಯ ಕಾಪಾಡಬೇಕಾದ ಆಸ್ಪತ್ರೆಯೇ ಮಹಿಳೆಯರಿಗೆ ಅಸುರಕ್ಷಿತ ತಾಣವಾಗುತ್ತಿರುವ ಆತಂಕಕಾರಿ ಘಟನೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಚಿಕಿತ್ಸೆ ಪಡೆಯುತ್ತಿದ್ದ ತನ್ನ ಸಹೋದರನ ಆರೈಕೆಗೆ ಬಂದಿದ್ದ ಮಹಿಳೆಯ ಮೇಲೆ ಆಸ್ಪತ್ರೆಯ ಹೊರಗುತ್ತಿಗೆ ನೌಕರನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯ ಸಹೋದರ ಕಳೆದ ಒಂದು ತಿಂಗಳಿನಿಂದ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ 34 ವರ್ಷದ ಮಹಿಳೆ ಸಹೋದರನ ಆರೈಕೆಗೆ ಆಸ್ಪತ್ರೆಯಲ್ಲೇ ತಂಗಿದ್ದರು. ಇದೇ ವೇಳೆ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಫರೀದ್ ಸಾಬ್ ಡಾಂಗೆ ಎಂಬಾತ ಮಹಿಳೆಯ ಪರಿಚಯ ಬೆಳೆಸಿಕೊಂಡಿದ್ದಾನೆ ಎನ್ನಲಾಗಿದೆ.
ಮೇ 4ರ ತಡರಾತ್ರಿ 12ರಿಂದ 2 ಗಂಟೆಯ ನಡುವಿನ ಅವಧಿಯಲ್ಲಿ, ಆಸ್ಪತ್ರೆಯಲ್ಲಿ ಜನ ಸಂಚಾರ ಕಡಿಮೆ ಇದ್ದ ಸಮಯವನ್ನು ಆರೋಪಿ ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಹಿಳೆಗೆ ಪ್ರಾಣ ಬೆದರಿಕೆ ಹಾಕಿ ಬಾತ್ರೂಮ್ಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಕೃತ್ಯದ ಬಳಿಕ ಮಹಿಳೆ ಹೊರಬರದಂತೆ ಬಾಗಿಲು ಲಾಕ್ ಮಾಡಿ ಆರೋಪಿ ತನ್ನ ಕೆಲಸಕ್ಕೆ ತೆರಳಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಘಟನೆಯ ವಿಚಾರ ತಿಳಿದ ಕೂಡಲೇ ಮಹಿಳೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ಸಂಬಂಧ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ್ ಕೋಣಿ ಅವರು ಆರೋಪಿಯನ್ನು ತಕ್ಷಣದಿಂದಲೇ ಕೆಲಸದಿಂದ ವಜಾಗೊಳಿಸಿ ಆದೇಶಿಸಿದ್ದಾರೆ.
ಆಸ್ಪತ್ರೆಯಂತಹ ಸಾರ್ವಜನಿಕ ಸ್ಥಳಗಳಲ್ಲಿಯೂ ಮಹಿಳೆಯರ ಸುರಕ್ಷತೆ ಪ್ರಶ್ನಾರ್ಥಕವಾಗುತ್ತಿರುವ ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…