Latest

ಮಹದೇವಪುರದಲ್ಲಿ 11 ಸಾವಿರಕ್ಕೂ ಹೆಚ್ಚು ನಕಲಿ ಮತದಾನ: ದಾಖಲೆ ಸಮೇತ ಪಟ್ಟಿ ಬಿಡುಗಡೆ ಮಾಡಿದ ರಾಹುಲ್ ಗಾಂಧಿ”

ನವದೆಹಲಿ, ಆ.7: ಕರ್ನಾಟಕದಲ್ಲಿ ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆ ವೇಳೆ ಮಹದೇವಪುರದಲ್ಲಿ ಅಕ್ರಮ ಮತದಾನ ನಡೆದಿರುವುದಾಗಿ ಕಾಂಗ್ರೆಸ್ ಸಂಸದೀಯ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ಇಂದು ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಕಲಿ ಮತದಾರರ ಪಟ್ಟಿ, ವಿಳಾಸಗಳ ಸಮಸ್ಯೆ, ಮತದಾನ ಕಳ್ಳತನಕ್ಕೆ ಸಂಬಂಧಿಸಿದ ವಿವರಗಳೊಂದಿಗೆ ಪೂರ್ಣ ದಾಖಲೆಗಳನ್ನು ಬಿಡುಗಡೆ ಮಾಡಿದರು.

ನಕಲಿ ವಿಳಾಸ, ನಕಲಿ ಮತದಾರರು:
ಮಹದೇವಪುರ ಕ್ಷೇತ್ರದಲ್ಲಿ 40,009ಕ್ಕೂ ಹೆಚ್ಚು ಮತದಾರರು ನಕಲಿ ವಿಳಾಸದೊಂದಿಗೆ ನೋಂದಾಯಿಸಲಾಗಿದ್ದು, ಮನೆ ಸಂಖ್ಯೆ ‘0’ ಎಂದು ನಮೂದಿಸಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಲ್ಲದೆ, ಸುಮಾರು 11,565 ಮಂದಿ ನಕಲಿ ಮತದಾನ ಮಾಡಿದ್ದಾರೆ ಎಂಬ ಭಾರೀ ಆರೋಪವನ್ನೂ ಅವರು ಹೊರಹಾಕಿದ್ದಾರೆ.

ವಿಚಿತ್ರ ದಾಖಲೆಗಳು:
ಒಂದೇ ವಿಳಾಸದಲ್ಲಿ 10,452ಕ್ಕೂ ಅಧಿಕ ಮತದಾರರನ್ನು ಸೇರಿಸಲಾಗಿದೆ. ಕೆಲವರ ಪೋಟೋಗಳು ವೋಟರ್ ಐಡಿಯಲ್ಲಿ ಲಭ್ಯವಿಲ್ಲ, 4,312 ಮಂದಿಗೆ ಫೋಟೋಗಳಿಲ್ಲದೆ ಐಡಿ ನೀಡಲಾಗಿದೆ. ಹಲವು ವಿಳಾಸಗಳು ಸಂಪೂರ್ಣವಾಗಿ ಖಾಲಿಯಾಗಿದ್ದು, ತಂದೆಯ ಹೆಸರುಗಳಿಲ್ಲದ ಮತದಾರರು ಪಟ್ಟಿಯಲ್ಲಿ ದಾಖಲಾಗಿದ್ದಾರೆ.

ನಕಲಿ ಮತದಾನದ ಜೀವಂತ ಉದಾಹರಣೆ:
ಒಬ್ಬ ಆದಿತ್ಯ ಶ್ರೀವಾಸ್ತವ್ ಎಂಬ ವ್ಯಕ್ತಿಯ ಹೆಸರು ವಿವಿಧ ಮತಗಟ್ಟೆಗಳಲ್ಲಿ ಕಾಣಿಸಿಕೊಂಡಿದ್ದು, ಅವನು ಹಲವೆಡೆ ಮತ ಚಲಾಯಿಸಿದ್ದಾನೆ ಎಂಬ ದಾಖಲೆಗಳನ್ನು ರಾಹುಲ್ ಗಾಂಧಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಚುನಾವಣೆ ಆಯೋಗದ ವಿರುದ್ಧ ತೀವ್ರ ಟೀಕೆ:
ಈ ಎಲ್ಲ ಅಕ್ರಮಗಳಿಗೆ ಚುನಾವಣಾ ಆಯೋಗವೇ ಹೊಣೆದಾರವಾಗಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹಾಳುಮಾಡುವ ಈ ತಂತ್ರಗಳನ್ನು ಕಾಂಗ್ರೆಸ್ ಖಂಡಿಸುತ್ತಿದೆ ಎಂದರು.

ಸತ್ಯ ಬಯಲಾಗಬೇಕು:
ಈ ಕುರಿತು ಸೂಕ್ತ ತನಿಖೆ ನಡೆಯಬೇಕು ಹಾಗೂ ನಿಜಾಸತ್ಯವನ್ನು ಸಾರ್ವಜನಿಕರಿಗೆ ತಲುಪಿಸಬೇಕು ಎಂದು ಅವರು ಆಗ್ರಹಿಸಿದರು.

 

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago