Latest

ಮಹದೇವಪುರದಲ್ಲಿ 11 ಸಾವಿರಕ್ಕೂ ಹೆಚ್ಚು ನಕಲಿ ಮತದಾನ: ದಾಖಲೆ ಸಮೇತ ಪಟ್ಟಿ ಬಿಡುಗಡೆ ಮಾಡಿದ ರಾಹುಲ್ ಗಾಂಧಿ”

ನವದೆಹಲಿ, ಆ.7: ಕರ್ನಾಟಕದಲ್ಲಿ ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆ ವೇಳೆ ಮಹದೇವಪುರದಲ್ಲಿ ಅಕ್ರಮ ಮತದಾನ ನಡೆದಿರುವುದಾಗಿ ಕಾಂಗ್ರೆಸ್ ಸಂಸದೀಯ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ಇಂದು ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಕಲಿ ಮತದಾರರ ಪಟ್ಟಿ, ವಿಳಾಸಗಳ ಸಮಸ್ಯೆ, ಮತದಾನ ಕಳ್ಳತನಕ್ಕೆ ಸಂಬಂಧಿಸಿದ ವಿವರಗಳೊಂದಿಗೆ ಪೂರ್ಣ ದಾಖಲೆಗಳನ್ನು ಬಿಡುಗಡೆ ಮಾಡಿದರು.

ನಕಲಿ ವಿಳಾಸ, ನಕಲಿ ಮತದಾರರು:
ಮಹದೇವಪುರ ಕ್ಷೇತ್ರದಲ್ಲಿ 40,009ಕ್ಕೂ ಹೆಚ್ಚು ಮತದಾರರು ನಕಲಿ ವಿಳಾಸದೊಂದಿಗೆ ನೋಂದಾಯಿಸಲಾಗಿದ್ದು, ಮನೆ ಸಂಖ್ಯೆ ‘0’ ಎಂದು ನಮೂದಿಸಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಲ್ಲದೆ, ಸುಮಾರು 11,565 ಮಂದಿ ನಕಲಿ ಮತದಾನ ಮಾಡಿದ್ದಾರೆ ಎಂಬ ಭಾರೀ ಆರೋಪವನ್ನೂ ಅವರು ಹೊರಹಾಕಿದ್ದಾರೆ.

ವಿಚಿತ್ರ ದಾಖಲೆಗಳು:
ಒಂದೇ ವಿಳಾಸದಲ್ಲಿ 10,452ಕ್ಕೂ ಅಧಿಕ ಮತದಾರರನ್ನು ಸೇರಿಸಲಾಗಿದೆ. ಕೆಲವರ ಪೋಟೋಗಳು ವೋಟರ್ ಐಡಿಯಲ್ಲಿ ಲಭ್ಯವಿಲ್ಲ, 4,312 ಮಂದಿಗೆ ಫೋಟೋಗಳಿಲ್ಲದೆ ಐಡಿ ನೀಡಲಾಗಿದೆ. ಹಲವು ವಿಳಾಸಗಳು ಸಂಪೂರ್ಣವಾಗಿ ಖಾಲಿಯಾಗಿದ್ದು, ತಂದೆಯ ಹೆಸರುಗಳಿಲ್ಲದ ಮತದಾರರು ಪಟ್ಟಿಯಲ್ಲಿ ದಾಖಲಾಗಿದ್ದಾರೆ.

ನಕಲಿ ಮತದಾನದ ಜೀವಂತ ಉದಾಹರಣೆ:
ಒಬ್ಬ ಆದಿತ್ಯ ಶ್ರೀವಾಸ್ತವ್ ಎಂಬ ವ್ಯಕ್ತಿಯ ಹೆಸರು ವಿವಿಧ ಮತಗಟ್ಟೆಗಳಲ್ಲಿ ಕಾಣಿಸಿಕೊಂಡಿದ್ದು, ಅವನು ಹಲವೆಡೆ ಮತ ಚಲಾಯಿಸಿದ್ದಾನೆ ಎಂಬ ದಾಖಲೆಗಳನ್ನು ರಾಹುಲ್ ಗಾಂಧಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಚುನಾವಣೆ ಆಯೋಗದ ವಿರುದ್ಧ ತೀವ್ರ ಟೀಕೆ:
ಈ ಎಲ್ಲ ಅಕ್ರಮಗಳಿಗೆ ಚುನಾವಣಾ ಆಯೋಗವೇ ಹೊಣೆದಾರವಾಗಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹಾಳುಮಾಡುವ ಈ ತಂತ್ರಗಳನ್ನು ಕಾಂಗ್ರೆಸ್ ಖಂಡಿಸುತ್ತಿದೆ ಎಂದರು.

ಸತ್ಯ ಬಯಲಾಗಬೇಕು:
ಈ ಕುರಿತು ಸೂಕ್ತ ತನಿಖೆ ನಡೆಯಬೇಕು ಹಾಗೂ ನಿಜಾಸತ್ಯವನ್ನು ಸಾರ್ವಜನಿಕರಿಗೆ ತಲುಪಿಸಬೇಕು ಎಂದು ಅವರು ಆಗ್ರಹಿಸಿದರು.

 

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

14 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

14 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

14 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

14 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago