Latest

ಮಹದೇವಪುರದಲ್ಲಿ 11 ಸಾವಿರಕ್ಕೂ ಹೆಚ್ಚು ನಕಲಿ ಮತದಾನ: ದಾಖಲೆ ಸಮೇತ ಪಟ್ಟಿ ಬಿಡುಗಡೆ ಮಾಡಿದ ರಾಹುಲ್ ಗಾಂಧಿ”

ನವದೆಹಲಿ, ಆ.7: ಕರ್ನಾಟಕದಲ್ಲಿ ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆ ವೇಳೆ ಮಹದೇವಪುರದಲ್ಲಿ ಅಕ್ರಮ ಮತದಾನ ನಡೆದಿರುವುದಾಗಿ ಕಾಂಗ್ರೆಸ್ ಸಂಸದೀಯ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ಇಂದು ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಕಲಿ ಮತದಾರರ ಪಟ್ಟಿ, ವಿಳಾಸಗಳ ಸಮಸ್ಯೆ, ಮತದಾನ ಕಳ್ಳತನಕ್ಕೆ ಸಂಬಂಧಿಸಿದ ವಿವರಗಳೊಂದಿಗೆ ಪೂರ್ಣ ದಾಖಲೆಗಳನ್ನು ಬಿಡುಗಡೆ ಮಾಡಿದರು.

ನಕಲಿ ವಿಳಾಸ, ನಕಲಿ ಮತದಾರರು:
ಮಹದೇವಪುರ ಕ್ಷೇತ್ರದಲ್ಲಿ 40,009ಕ್ಕೂ ಹೆಚ್ಚು ಮತದಾರರು ನಕಲಿ ವಿಳಾಸದೊಂದಿಗೆ ನೋಂದಾಯಿಸಲಾಗಿದ್ದು, ಮನೆ ಸಂಖ್ಯೆ ‘0’ ಎಂದು ನಮೂದಿಸಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಲ್ಲದೆ, ಸುಮಾರು 11,565 ಮಂದಿ ನಕಲಿ ಮತದಾನ ಮಾಡಿದ್ದಾರೆ ಎಂಬ ಭಾರೀ ಆರೋಪವನ್ನೂ ಅವರು ಹೊರಹಾಕಿದ್ದಾರೆ.

ವಿಚಿತ್ರ ದಾಖಲೆಗಳು:
ಒಂದೇ ವಿಳಾಸದಲ್ಲಿ 10,452ಕ್ಕೂ ಅಧಿಕ ಮತದಾರರನ್ನು ಸೇರಿಸಲಾಗಿದೆ. ಕೆಲವರ ಪೋಟೋಗಳು ವೋಟರ್ ಐಡಿಯಲ್ಲಿ ಲಭ್ಯವಿಲ್ಲ, 4,312 ಮಂದಿಗೆ ಫೋಟೋಗಳಿಲ್ಲದೆ ಐಡಿ ನೀಡಲಾಗಿದೆ. ಹಲವು ವಿಳಾಸಗಳು ಸಂಪೂರ್ಣವಾಗಿ ಖಾಲಿಯಾಗಿದ್ದು, ತಂದೆಯ ಹೆಸರುಗಳಿಲ್ಲದ ಮತದಾರರು ಪಟ್ಟಿಯಲ್ಲಿ ದಾಖಲಾಗಿದ್ದಾರೆ.

ನಕಲಿ ಮತದಾನದ ಜೀವಂತ ಉದಾಹರಣೆ:
ಒಬ್ಬ ಆದಿತ್ಯ ಶ್ರೀವಾಸ್ತವ್ ಎಂಬ ವ್ಯಕ್ತಿಯ ಹೆಸರು ವಿವಿಧ ಮತಗಟ್ಟೆಗಳಲ್ಲಿ ಕಾಣಿಸಿಕೊಂಡಿದ್ದು, ಅವನು ಹಲವೆಡೆ ಮತ ಚಲಾಯಿಸಿದ್ದಾನೆ ಎಂಬ ದಾಖಲೆಗಳನ್ನು ರಾಹುಲ್ ಗಾಂಧಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಚುನಾವಣೆ ಆಯೋಗದ ವಿರುದ್ಧ ತೀವ್ರ ಟೀಕೆ:
ಈ ಎಲ್ಲ ಅಕ್ರಮಗಳಿಗೆ ಚುನಾವಣಾ ಆಯೋಗವೇ ಹೊಣೆದಾರವಾಗಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹಾಳುಮಾಡುವ ಈ ತಂತ್ರಗಳನ್ನು ಕಾಂಗ್ರೆಸ್ ಖಂಡಿಸುತ್ತಿದೆ ಎಂದರು.

ಸತ್ಯ ಬಯಲಾಗಬೇಕು:
ಈ ಕುರಿತು ಸೂಕ್ತ ತನಿಖೆ ನಡೆಯಬೇಕು ಹಾಗೂ ನಿಜಾಸತ್ಯವನ್ನು ಸಾರ್ವಜನಿಕರಿಗೆ ತಲುಪಿಸಬೇಕು ಎಂದು ಅವರು ಆಗ್ರಹಿಸಿದರು.

 

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

7 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

7 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

10 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

12 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

12 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

12 hours ago