ನವದೆಹಲಿ, ಆ.7: ಕರ್ನಾಟಕದಲ್ಲಿ ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆ ವೇಳೆ ಮಹದೇವಪುರದಲ್ಲಿ ಅಕ್ರಮ ಮತದಾನ ನಡೆದಿರುವುದಾಗಿ ಕಾಂಗ್ರೆಸ್ ಸಂಸದೀಯ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ಇಂದು ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಕಲಿ ಮತದಾರರ ಪಟ್ಟಿ, ವಿಳಾಸಗಳ ಸಮಸ್ಯೆ, ಮತದಾನ ಕಳ್ಳತನಕ್ಕೆ ಸಂಬಂಧಿಸಿದ ವಿವರಗಳೊಂದಿಗೆ ಪೂರ್ಣ ದಾಖಲೆಗಳನ್ನು ಬಿಡುಗಡೆ ಮಾಡಿದರು.
ನಕಲಿ ವಿಳಾಸ, ನಕಲಿ ಮತದಾರರು:
ಮಹದೇವಪುರ ಕ್ಷೇತ್ರದಲ್ಲಿ 40,009ಕ್ಕೂ ಹೆಚ್ಚು ಮತದಾರರು ನಕಲಿ ವಿಳಾಸದೊಂದಿಗೆ ನೋಂದಾಯಿಸಲಾಗಿದ್ದು, ಮನೆ ಸಂಖ್ಯೆ ‘0’ ಎಂದು ನಮೂದಿಸಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಲ್ಲದೆ, ಸುಮಾರು 11,565 ಮಂದಿ ನಕಲಿ ಮತದಾನ ಮಾಡಿದ್ದಾರೆ ಎಂಬ ಭಾರೀ ಆರೋಪವನ್ನೂ ಅವರು ಹೊರಹಾಕಿದ್ದಾರೆ.
ವಿಚಿತ್ರ ದಾಖಲೆಗಳು:
ಒಂದೇ ವಿಳಾಸದಲ್ಲಿ 10,452ಕ್ಕೂ ಅಧಿಕ ಮತದಾರರನ್ನು ಸೇರಿಸಲಾಗಿದೆ. ಕೆಲವರ ಪೋಟೋಗಳು ವೋಟರ್ ಐಡಿಯಲ್ಲಿ ಲಭ್ಯವಿಲ್ಲ, 4,312 ಮಂದಿಗೆ ಫೋಟೋಗಳಿಲ್ಲದೆ ಐಡಿ ನೀಡಲಾಗಿದೆ. ಹಲವು ವಿಳಾಸಗಳು ಸಂಪೂರ್ಣವಾಗಿ ಖಾಲಿಯಾಗಿದ್ದು, ತಂದೆಯ ಹೆಸರುಗಳಿಲ್ಲದ ಮತದಾರರು ಪಟ್ಟಿಯಲ್ಲಿ ದಾಖಲಾಗಿದ್ದಾರೆ.
ನಕಲಿ ಮತದಾನದ ಜೀವಂತ ಉದಾಹರಣೆ:
ಒಬ್ಬ ಆದಿತ್ಯ ಶ್ರೀವಾಸ್ತವ್ ಎಂಬ ವ್ಯಕ್ತಿಯ ಹೆಸರು ವಿವಿಧ ಮತಗಟ್ಟೆಗಳಲ್ಲಿ ಕಾಣಿಸಿಕೊಂಡಿದ್ದು, ಅವನು ಹಲವೆಡೆ ಮತ ಚಲಾಯಿಸಿದ್ದಾನೆ ಎಂಬ ದಾಖಲೆಗಳನ್ನು ರಾಹುಲ್ ಗಾಂಧಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.
ಚುನಾವಣೆ ಆಯೋಗದ ವಿರುದ್ಧ ತೀವ್ರ ಟೀಕೆ:
ಈ ಎಲ್ಲ ಅಕ್ರಮಗಳಿಗೆ ಚುನಾವಣಾ ಆಯೋಗವೇ ಹೊಣೆದಾರವಾಗಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹಾಳುಮಾಡುವ ಈ ತಂತ್ರಗಳನ್ನು ಕಾಂಗ್ರೆಸ್ ಖಂಡಿಸುತ್ತಿದೆ ಎಂದರು.
ಸತ್ಯ ಬಯಲಾಗಬೇಕು:
ಈ ಕುರಿತು ಸೂಕ್ತ ತನಿಖೆ ನಡೆಯಬೇಕು ಹಾಗೂ ನಿಜಾಸತ್ಯವನ್ನು ಸಾರ್ವಜನಿಕರಿಗೆ ತಲುಪಿಸಬೇಕು ಎಂದು ಅವರು ಆಗ್ರಹಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…