Categories: CrimeLatest

ಪ್ರಿಯಕರನೊಂದಿಗೆ ಸೇರಿ ಮನೆಯಲ್ಲೇ ₹69 ಲಕ್ಷಕ್ಕೂ ಹೆಚ್ಚು ಕಳ್ಳತನ; ಸೊಸೆ ಸೇರಿ ಇಬ್ಬರನ್ನೂ ಒಂದೇ ದಿನದಲ್ಲಿ ಬಂಧಿಸಿದ ಹಾಸನ ಪೊಲೀಸರು

ಹಾಸನ: ಹಾಡುಹಗಲೇ ನಡೆದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣವನ್ನು ಹಾಸನ ಗ್ರಾಮಾಂತರ ಪೊಲೀಸರು ಕೇವಲ ಒಂದೇ ದಿನದಲ್ಲಿ ಭೇದಿಸಿ, ಅಚ್ಚರಿಯ ತಿರುವು ನೀಡಿದ್ದಾರೆ. ಮನೆಯವರೇ ನಂಬಿದ್ದ ಸೊಸೆ ತನ್ನ ಪ್ರಿಯಕರನೊಂದಿಗೆ ಸೇರಿ ಕಳ್ಳತನ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕಳುವಾಗಿದ್ದ ಸಂಪೂರ್ಣ ಚಿನ್ನಾಭರಣ ಮತ್ತು ನಗದನ್ನು ವಶಕ್ಕೆ ಪಡೆದಿದ್ದಾರೆ.

ಹಾಸನ ತಾಲೂಕಿನ ದೊಡ್ಡಹೊನ್ನೇನಹಳ್ಳಿ ಗ್ರಾಮದ ಕೇಶವೇಗೌಡ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಶನಿವಾರ ಬೆಳಿಗ್ಗೆ ಕೇಶವೇಗೌಡ, ಪತ್ನಿ ಜಯಲಕ್ಷ್ಮೀ ಹಾಗೂ ಪುತ್ರ ವೇಣುಗೋಪಾಲ್ ಜಮೀನಿಗೆ ಕೆಲಸಕ್ಕೆ ತೆರಳಿದ್ದರು. ಮಗನನ್ನು ಶಾಲಾ ಬಸ್‌ಗೆ ಕಳುಹಿಸಿದ ಬಳಿಕ ಮನೆಯಲ್ಲಿ ಒಬ್ಬಳೇ ಇದ್ದ ಸೊಸೆ ಅಮೃತಾ ತನ್ನ ಪ್ರಿಯಕರ ಪರಮೇಶ್ (ಅಲಿಯಾಸ್ ಚೇತನ್)ಗೆ ಕರೆ ಮಾಡಿ ಮನೆಗೆ ಕರೆಸಿಕೊಂಡಿದ್ದಾಳೆ.

ನಂತರ ಇಬ್ಬರೂ ಸೇರಿ ಮನೆಯ ಬೀರುವಿನಲ್ಲಿದ್ದ ಸುಮಾರು ₹56.16 ಲಕ್ಷ ಮೌಲ್ಯದ 441.5 ಗ್ರಾಂ ಚಿನ್ನಾಭರಣ ಹಾಗೂ ₹13.40 ಲಕ್ಷ ನಗದನ್ನು ದೋಚಿದ್ದಾರೆ. ಕಳುವಿನ ಬಳಿಕ ಪರಮೇಶ್ ಹಣ ಮತ್ತು ಚಿನ್ನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದರೆ, ಅಮೃತಾ ಯಾವುದೇ ಅನುಮಾನ ಬಾರದಂತೆ ಮನೆಯ ಮುಂಭಾಗಿಲನ್ನು ತೆರೆದೆಯೇ ಬಿಟ್ಟು ಜಮೀನಿಗೆ ತೆರಳಿದ್ದಾಳೆ.

ಸಂಜೆ ಮನೆಗೆ ಹಿಂದಿರುಗಿದ ಕೇಶವೇಗೌಡ ಅವರಿಗೆ ಬೀರು ತೆರೆದಿರುವುದು ಹಾಗೂ ಚಿನ್ನ-ಹಣ ಕಳುವಾಗಿರುವುದು ಗೊತ್ತಾಗಿದೆ. ಈ ವೇಳೆ ಅಮೃತಾ ತನಗೆ ಏನೂ ತಿಳಿದಿಲ್ಲ ಎಂಬಂತೆ ವರ್ತಿಸಿ ಕಳ್ಳತನ ನಡೆದಿದೆ ಎಂದು ನಾಟಕವಾಡಿದ್ದಾಳೆ.

ಪ್ರಕರಣ ದಾಖಲಿಸಿಕೊಂಡ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿದ್ದಾರೆ. ವಿಚಾರಣೆ ವೇಳೆ ಅಮೃತಾಳ ವರ್ತನೆ ಅನುಮಾನಕ್ಕೆ ಕಾರಣವಾಗಿದ್ದು, ತೀವ್ರ ವಿಚಾರಣೆ ನಡೆಸಿದಾಗ ಆಕೆ ತನ್ನ ಪ್ರಿಯಕರನೊಂದಿಗೆ ಸೇರಿ ಕಳ್ಳತನ ನಡೆಸಿರುವುದನ್ನು ಒಪ್ಪಿಕೊಂಡಿದ್ದಾಳೆ. ಕೆ. ಹಿರೀಹಳ್ಳಿ ಗ್ರಾಮದ ನಿವಾಸಿಗಳಾದ ಅಮೃತಾ ಮತ್ತು ಪರಮೇಶ್ ಹಲವು ವರ್ಷಗಳಿಂದ ಪರಿಚಯ ಹೊಂದಿದ್ದು, ಪೂರ್ವಯೋಜಿತವಾಗಿ ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.

ಪ್ರಕರಣ ನಡೆದ ಕೇವಲ ಒಂದೇ ದಿನದಲ್ಲಿ ಆರೋಪಿಗಳಿಬ್ಬರನ್ನೂ ಬಂಧಿಸಿರುವ ಹಾಸನ ಗ್ರಾಮಾಂತರ ಪೊಲೀಸರು ಕಳುವಾಗಿದ್ದ ಚಿನ್ನಾಭರಣ ಹಾಗೂ ನಗದನ್ನು ಸಂಪೂರ್ಣವಾಗಿ ವಶಕ್ಕೆ ಪಡೆದಿದ್ದಾರೆ. ಪೊಲೀಸರ ಈ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಭ್ರಷ್ಟರ ಬೇಟೆ

Recent Posts

ದಳಪತಿ ಹತ್ಯೆ; 17 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕನ್ಯಾಕೊಳೂರು ಗ್ರಾಮದಲ್ಲಿ 2014ರಲ್ಲಿ ನಡೆದಿದ್ದ ದಲಿತ ಮುಖಂಡ ದೇವೇಂದ್ರಪ್ಪ ಭೀಮಪ್ಪ ದಳಪತಿ ಹತ್ಯೆ ಪ್ರಕರಣಕ್ಕೆ…

3 hours ago

₹15 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಗದಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ

ಗದಗ: ಹೊರಗುತ್ತಿಗೆ ಆಧಾರದ ಉದ್ಯೋಗ ನೀಡುವ ನೆಪದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.…

3 hours ago

ಟ್ರೋಲ್‌ಗಳಿಂದ ಬೇಸತ್ತ ಬಿಗ್ ಬಾಸ್ ಖ್ಯಾತಿಯ ಧ್ರುವಂತ್; ಪೊಲೀಸರ ಮೊರೆ ಹೋದ ನಟ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಿರಂತರವಾಗಿ ಬರುತ್ತಿರುವ ನೆಗೆಟಿವ್ ಕಾಮೆಂಟ್‌ಗಳು ಹಾಗೂ ಅವಹೇಳನಕಾರಿ ಟ್ರೋಲ್‌ಗಳಿಂದ ಬೇಸತ್ತಿರುವ ಬಿಗ್ ಬಾಸ್…

3 hours ago

ಡ್ರೈವರ್ ಸಹವಾಸ, ಗಂಡು ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಪೋಕ್ಸೋ ಪ್ರಕರಣ ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ…

3 hours ago

ಮೊದಲ ಪತ್ನಿ ಇರುವಾಗಲೇ ಎರಡನೇ ಮದುವೆಗೆ ಸಿದ್ಧನಾದ ಭೂಪ, ಮಂಟಪಕ್ಕೆ ನುಗ್ಗಿ ಮೊದಲ ಪತ್ನಿ ಮಾಡಿದ ಕೆಲಸಕ್ಕೆ ಆಗಿದೆ ಬೇರೆ..?

ಉತ್ತರ ಪ್ರದೇಶ: ಕಾನೂನಾತ್ಮಕವಾಗಿ ವಿಚ್ಛೇದನ (ತಲಾಖ್) ನೀಡದೇ ರಹಸ್ಯವಾಗಿ ಎರಡನೇ ಮದುವೆಗೆ ಮುಂದಾಗಿದ್ದ ಪತಿಯ ಮದುವೆಯನ್ನು ಮೊದಲ ಪತ್ನಿಯೇ ಮಂಟಪಕ್ಕೆ…

3 hours ago

ಪತಿಯ ಅನೈತಿಕ ಸಂಬಂಧ ಬಯಲಾದ ಬೆನ್ನಲ್ಲೇ ಐತಿಹಾಸಿಕ ತೀರ್ಪು; ಮಾಜಿ ಪತ್ನಿಗೆ ₹6,245 ಕೋಟಿ ಜೀವನಾಂಶ!

ಸಿಯೋಲ್ (ದಕ್ಷಿಣ ಕೊರಿಯಾ): ದಕ್ಷಿಣ ಕೊರಿಯಾದಲ್ಲಿ ನಡೆದಿರುವ ಬಹುಕೋಟಿ ಮೌಲ್ಯದ ವಿಚ್ಛೇದನ ಪ್ರಕರಣವೊಂದು ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

3 hours ago