ಧರ್ಮಸ್ಥಳ ಗ್ರಾಮವು ಇತ್ತೀಚೆಗೆ ಸರಣಿ ಕೊಲೆ, ಅತ್ಯಾಚಾರ ಆರೋಪಗಳ ಹಿನ್ನೆಲೆ ತೀವ್ರ ಚರ್ಚೆಗೆ ಒಳಗಾಗಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಸರಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ತನಿಖೆ ಆರಂಭಿಸಿದೆ. ಹೂತಿಟ್ಟ ಶವಗಳ ಅಸ್ತಿಪಂಜರ ಕಂಡುಬಂದಿರುವ ಆರೋಪಗಳು ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಸಿವೆ.
ಇದೀಗ ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ಇನ್ಸ್ಟಾಗ್ರಾಂ ನಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಹಿಂಬಾಲಕರನ್ನು ಹೊಂದಿರುವ “ಕಬ್ಜ ಶರಣ್” ಎಂಬ ಸಾಮಾಜಿಕ ಜಾಲತಾಣದ ಸಕ್ರಿಯ ಯುವಕ ಸೌಜನ್ಯ ಪ್ರಕರಣಕ್ಕೆ ನ್ಯಾಯ ಸಿಗಲಿ ಎಂಬ ಮನಸ್ಸಿನಿಂದ ಧರ್ಮಸ್ಥಳದತ್ತ ಪಾದಯಾತ್ರೆ ಕೈಗೊಂಡಿದ್ದಾರೆ. ಬೆಂಗಳೂರಿನ ನಾಗರಭಾವಿಯಿಂದ ಆರಂಭಗೊಂಡ ಈ ಪಾದಯಾತ್ರೆ ಜುಲೈ 21 ರಂದು ಧರ್ಮಸ್ಥಳ ತಲುಪಿದೆ. ಮಾರ್ಗಮಧ್ಯದಲ್ಲಿ ಹಲವಾರು ಯುವಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಧರ್ಮಸ್ಥಳದ ಪ್ರವೇಶದ್ವಾರದ ಬಳಿ ಶರಣ್ ಹಾಗೂ ಅವರ ತಂಡವನ್ನು ಕೆಲ ಭಕ್ತರು ತಡೆದು ನಿಲ್ಲಿಸಿದರು. ಪಾದಯಾತ್ರೆ ಸಂದರ್ಭದಲ್ಲಿ “ನಕಲಿ ದೇವಮಾನವ” ಎಂಬ ಘೋಷಣೆ ಕೇಳಿಬಂದ ಹಿನ್ನೆಲೆಯಲ್ಲಿ ಭಕ್ತರಲ್ಲಿ ಅಸಮಾಧಾನ ಮೂಡಿತು. ಈ ಕಾರಣದಿಂದ ಪಾದಯಾತ್ರಿಕರು ಮತ್ತು ಸ್ಥಳೀಯ ಭಕ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ಈ ಕುರಿತು ಪ್ರತಿಕ್ರಿಯಿಸಿದ ಕಬ್ಜ ಶರಣ್, “ನಾವು ಯಾರನ್ನೂ ಅಪಮಾನಿಸುವ ಉದ್ದೇಶದಿಂದ ಇಲ್ಲ. ನಾವೆಲ್ಲಾ ನ್ಯಾಯಕ್ಕಾಗಿ ಧರ್ಮಸ್ಥಳ ಮಂಜುನಾಥ ಸ್ವಾಮಿಯನ್ನು ಪ್ರಾರ್ಥಿಸಲು ಬಂದಿದ್ದೇವೆ. ನಮ್ಮ ಹೋರಾಟ ಅನ್ಯಾಯದ ವಿರುದ್ಧ, ನಮ್ಮನ್ನು ತಪ್ಪಾಗಿ ಬಿಂಬಿಸುತ್ತಿದ್ದಾರೆ,” ಎಂದು ಸ್ಪಷ್ಟಪಡಿಸಿದರು.
ಈ ಘಟನೆಯಿಂದ ಧರ್ಮಸ್ಥಳ ಪರಿಸರ ಮತ್ತಷ್ಟು ಕುತೂಹಲದ ಕೇಂದ್ರವಾಗಿದೆ. ಸರಣಿ ಕೊಲೆ ಪ್ರಕರಣ ಹಾಗೂ ಸೌಜನ್ಯ ಆತ್ಮಹತ್ಯೆ ಪ್ರಕರಣಗಳಿಗೆ ಸಂಬಂಧಪಟ್ಟ ಬೆಳವಣಿಗೆಗಳು ಮುನ್ನೆಚ್ಚರಿಕೆಯಿಂದ ಗಮನಿಸಲ್ಪಡುತ್ತಿವೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…