Latest

ಪಹಲ್ಗಾಮ್‌ ಪ್ರಕರಣ: ಉಗ್ರರ ಫೋಟೋ ಬಿಡುಗಡೆ ಮಾಡಿದ ಕಾಶ್ಮೀರದ ಪೊಲೀಸರು.

ಜಮ್ಮು-ಕಾಶ್ಮೀರದ ಪ್ರವಾಸಿ ಪ್ರದೇಶವೊಂದರಲ್ಲಿ ಸಂಭವಿಸಿದ ಭೀಕರ ಉಗ್ರ ದಾಳಿ ರಾಷ್ಟ್ರವನ್ನೇ ಬೆಚ್ಚಿಬೀಳಿಸಿದೆ. ಈ ದಾಳಿಯಲ್ಲಿ ಕನಿಷ್ಠ 28 ಮಂದಿ ಜೀವಹಾನಿಗೆ ಒಳಗಾಗಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ದಾಳಿಗೆ ಸಂಬಂಧಪಟ್ಟ ಭಯೋತ್ಪಾದಕರ ಫೋಟೋಗಳನ್ನು ಜಮ್ಮು-ಕಾಶ್ಮೀರ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಭದ್ರತಾ ವಲಯದ ಮೂಲಗಳ ಪ್ರಕಾರ, ದಾಳಿ ನಡೆಸಿದ ಉಗ್ರರನ್ನು ಅಬು, ಆಸಿಫ್ ಮತ್ತು ಸುಲೇಮಾನ್ ಎಂದು ಗುರುತಿಸಲಾಗಿದೆ. ಈತನಿಖೆಯನ್ನು ಈಗ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನ್ನ ಹೆಗಲಿಗೆ ತೆಗೆದುಕೊಂಡಿದ್ದು, ವಿಶೇಷ ಅಧಿಕಾರಿಗಳ ತಂಡ ಈಗಾಗಲೇ ಕಾಶ್ಮೀರಕ್ಕೆ ಭೇಟಿ ನೀಡಿದೆ.

ದಾಳಿಯ ಬಳಿಕ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, “ಭಯೋತ್ಪಾದಕರಿಗೆ ಕ್ಷಮೆ ಎನ್ನುವುದು ಇರುವುದೇ ಇಲ್ಲ” ಎಂದು ಸ್ಪಷ್ಟನೆ ನೀಡಿದ್ದು, ಉಗ್ರರ ವಿರುದ್ಧ ಪ್ರತಿ ಕ್ರಮ ಕೈಗೊಳ್ಳಲಾಗುವುದು ಎಂಬುದಕ್ಕೆ ಬಲವಂತ ನೀಡಿದ್ದಾರೆ.

ಇದರ ಮಧ್ಯೆ ಸೇನೆ ನಡೆಸಿದ ತಕ್ಷಣದ ಪ್ರತಿಕ್ರಿಯಾತ್ಮಕ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಇಡೀ ಕಣಿವೆ ಪ್ರದೇಶದಲ್ಲಿ ಭದ್ರತಾ ಕ್ರಮವನ್ನು ತೀವ್ರಗೊಳಿಸಲಾಗಿದ್ದು, ಶಂಕಾಸ್ಪದ ಪ್ರದೇಶಗಳಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ.

ಈ ಹೃದಯವಿದ್ರಾವಕ ದಾಳಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು,  35 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲು ಭಯೋತ್ಪಾದನೆ ವಿರುದ್ಧವಾಗಿ ಕಣಿವೆಯಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ವ್ಯಾಪಾರ, ಸಾರಿಗೆ ಮತ್ತು ಶಾಲಾ-ಕಾಲೇಜುಗಳು ಬಂದ್ ಆಗಿರುವುದು ಶೋಕದ ವಾತಾವರಣವನ್ನು ಇನ್ನೂ ಗಂಭೀರಗೊಳಿಸಿದೆ.

ರಾಷ್ಟ್ರೀಯ ಮಟ್ಟದಲ್ಲಿ ಈ ಘಟನೆಯ ವಿರುದ್ಧ ಕಿಡಿಕಾರಿರುವ ಜನತೆ, ಉಗ್ರರ ವಿರುದ್ಧ ತೀವ್ರ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago