ಕಲಬುರಗಿ: ನಗರದ ಜಗತ್ ವೃತ್ತದಲ್ಲಿ ಪಾಕಿಸ್ತಾನ ಧ್ವಜ ಅಂಟಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಜರಂಗದಳದ ಆರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಜಗತ್ ವೃತ್ತ ಹಾಗೂ ಇನ್ನಿತರ ಪ್ರಮುಖ ಪ್ರದೇಶಗಳಲ್ಲಿ ಪಾಕಿಸ್ತಾನ ಧ್ವಜಗಳನ್ನು ರಸ್ತೆಪಕ್ಕ, ಸಾರ್ವಜನಿಕ ಶೌಚಾಲಯಗಳ ಬಳಿ ಅಂಟಿಸಲಾಗಿದೆ. ಈ ಕುರಿತು ಮಾಹಿತಿ ಪಡೆದ ಗುಪ್ತಚರ ಇಲಾಖೆ ಮತ್ತು ಬ್ರಹ್ಮಪುರ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಧ್ವಜಗಳನ್ನು ತೆರವುಗೊಳಿಸಿದರು.
ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಈ ಕುರಿತು ಪ್ರತಿಕ್ರಿಯಿಸಿ, “ಇತ್ತೀಚೆಗೆ ದೇಶಾದ್ಯಂತ ವಿವಿಧ ಸಂಘಟನೆಗಳು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಲು ವಿಭಿನ್ನ ರೀತಿಯ ಪ್ರತಿಭಟನೆಗಳಿಗೆ ಮೊರೆಹೊಡೆದಿವೆ. ಕೆಲವರು ಯಾವುದೇ ಅಧಿಕಾರಿಗಳ ಅನುಮತಿ ಪಡೆಯದೇ ಪಾಕಿಸ್ತಾನ ಧ್ವಜ ಅಂಟಿಸಿರುವುದು ಬೆಳಕಿಗೆ ಬಂದಿದೆ. ಇದು ಭಯೋತ್ಪಾದನೆಗೆ ಸೇರುವಂತ ಕೃತ್ಯವಾಗದಿದ್ದರೂ, ಸಾರ್ವಜನಿಕ ಶಾಂತಿಯ ವಿರುದ್ಧವಾಗಿದೆ,” ಎಂದು ಹೇಳಿದರು. ಈ ವೇಳೆ ಆರು ಬಜರಂಗದಳದ ಕಾರ್ಯಕರ್ತರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಘಟನೆ ಸಂಬಂಧ ಮುಂದಿನ ತನಿಖೆ ಜಾರಿಯಲ್ಲಿದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…