ಕಲಬುರಗಿ: ನಗರದ ಜಗತ್ ವೃತ್ತದಲ್ಲಿ ಪಾಕಿಸ್ತಾನ ಧ್ವಜ ಅಂಟಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಜರಂಗದಳದ ಆರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಜಗತ್ ವೃತ್ತ ಹಾಗೂ ಇನ್ನಿತರ ಪ್ರಮುಖ ಪ್ರದೇಶಗಳಲ್ಲಿ ಪಾಕಿಸ್ತಾನ ಧ್ವಜಗಳನ್ನು ರಸ್ತೆಪಕ್ಕ, ಸಾರ್ವಜನಿಕ ಶೌಚಾಲಯಗಳ ಬಳಿ ಅಂಟಿಸಲಾಗಿದೆ. ಈ ಕುರಿತು ಮಾಹಿತಿ ಪಡೆದ ಗುಪ್ತಚರ ಇಲಾಖೆ ಮತ್ತು ಬ್ರಹ್ಮಪುರ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಧ್ವಜಗಳನ್ನು ತೆರವುಗೊಳಿಸಿದರು.
ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಈ ಕುರಿತು ಪ್ರತಿಕ್ರಿಯಿಸಿ, “ಇತ್ತೀಚೆಗೆ ದೇಶಾದ್ಯಂತ ವಿವಿಧ ಸಂಘಟನೆಗಳು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಲು ವಿಭಿನ್ನ ರೀತಿಯ ಪ್ರತಿಭಟನೆಗಳಿಗೆ ಮೊರೆಹೊಡೆದಿವೆ. ಕೆಲವರು ಯಾವುದೇ ಅಧಿಕಾರಿಗಳ ಅನುಮತಿ ಪಡೆಯದೇ ಪಾಕಿಸ್ತಾನ ಧ್ವಜ ಅಂಟಿಸಿರುವುದು ಬೆಳಕಿಗೆ ಬಂದಿದೆ. ಇದು ಭಯೋತ್ಪಾದನೆಗೆ ಸೇರುವಂತ ಕೃತ್ಯವಾಗದಿದ್ದರೂ, ಸಾರ್ವಜನಿಕ ಶಾಂತಿಯ ವಿರುದ್ಧವಾಗಿದೆ,” ಎಂದು ಹೇಳಿದರು. ಈ ವೇಳೆ ಆರು ಬಜರಂಗದಳದ ಕಾರ್ಯಕರ್ತರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಘಟನೆ ಸಂಬಂಧ ಮುಂದಿನ ತನಿಖೆ ಜಾರಿಯಲ್ಲಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…