Categories: Latest

ಭಟ್ಕಳದಲ್ಲಿ ಪಾಕಿಸ್ತಾನ ಮೂಲದ ಮಹಿಳೆಯರ ನೆಲೆ: ಗಡೀಪಾರು ಆದೇಶದಿಂದ ಹೊರತಾದ ಸ್ಥಿತಿ”

ಪಹಲ್ಗಾಮ್‌ನಲ್ಲಿ ನಡೆದ ಹಿಂದೂ ಯಾತ್ರಿಕರ ಮೇಲಿನ ಭೀಕರ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನ ಪ್ರಜೆಗಳ ಕುರಿತು ಕೇಂದ್ರ ಸರ್ಕಾರ ತೀವ್ರ ನಿರ್ಧಾರ ತೆಗೆದುಕೊಂಡಿದ್ದು, 48 ಗಂಟೆಗಳಲ್ಲಿ ದೇಶ ತೊರೆಯುವಂತೆ ಆದೇಶ ನೀಡಲಾಗಿದೆ. ಈ ಆದೇಶದ ಬೆನ್ನಲ್ಲೇ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪಾಕಿಸ್ತಾನ ಮೂಲದ ಮಹಿಳೆಯರು ವಾಸಿಸುತ್ತಿರುವುದು ಬೆಳಕಿಗೆ ಬಂದಿದೆ.

ಭಟ್ಕಳದಲ್ಲಿ 14 ಪಾಕಿಸ್ತಾನ ಮೂಲದ ಮಹಿಳೆಯರು ದೀರ್ಘಾವಧಿ ವೀಸೆಯಡಿಯಲ್ಲಿ ನೆಲೆಸಿದ್ದಾರೆ. ಈ ಮಹಿಳೆಯರು ಶಾಂತಿಪೂರ್ಣವಾಗಿ ಭಟ್ಕಳದಲ್ಲಿ ತಮ್ಮ ಕುಟುಂಬದೊಂದಿಗೆ ಜೀವನ ಸಾಗಿಸುತ್ತಿದ್ದು, ಕೇಂದ್ರದ ಗಡೀಪಾರು ಆದೇಶ ಇವರಿಗೆ ಅನ್ವಯಿಸುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಈ ವಿಚಾರ ತಿಳಿದು ಜಿಲ್ಲಾಧಿಕಾರಿ ಎಂ. ನಾರಾಯಣ್ ಭಟ್ಕಳಕ್ಕೆ ಭೇಟಿ ನೀಡಿ, ಸ್ಥಳೀಯ ಪೊಲೀಸರಿಂದ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಹೆಚ್ಚಿನ ಪಾಕಿಸ್ತಾನ ಮೂಲದ ಮಹಿಳೆಯರು ಇಲ್ಲಿ ನೆಲೆಸಿರುವ ಸಾಧ್ಯತೆ ಇದ್ದು, ಇನ್ನುಳಿದ ಮಾಹಿತಿಗಳಿಗೂ ತನಿಖೆ ನಡೆಯುತ್ತಿದೆ.

ಇದು ಹೊಸದ್ದಲ್ಲ. ಸ್ವಾತಂತ್ರ್ಯಪೂರ್ವ ಕಾಲದಿಂದಲೇ ಭಟ್ಕಳ ಮತ್ತು ಪಾಕಿಸ್ತಾನ ನಡುವೆ ವೈವಾಹಿಕ ಸಂಬಂಧಗಳ ಸಂಪ್ರದಾಯ ನಡೆಯುತ್ತಿದ್ದು, ಪರಸ್ಪರವಾಗಿ ವರ-ವಧು ವಿನಿಮಯವಾಗುತ್ತಿತ್ತು. ಇದರಿಂದಾಗಿ ಪಾಕಿಸ್ತಾನ ಮೂಲದ ಹಲವಾರು ಮಹಿಳೆಯರು ಭಾರತೀಯ ನಾಗರಿಕರೊಂದಿಗೆ ವಿವಾಹವಾದ ನಂತರ ಭಟ್ಕಳದಲ್ಲಿ ನೆಲೆಸಿದ್ದಾರೆ.

ಈ ನಡುವೆ, ಭಟ್ಕಳದಲ್ಲಿ ವಾಸವಿರುವ ಸುಮಾರು 10 ಪಾಕಿಸ್ತಾನ ಮೂಲದ ಮಹಿಳೆಯರು ಬಹುಕಾಲದಿಂದ ಇಲ್ಲಿ ನೆಲೆಸಿದ್ದು, ಅವರಲ್ಲಿ ನಾಲ್ವರಿಗೆ ಭಾರತದಲ್ಲಿಯೇ ಮಕ್ಕಳು ಹುಟ್ಟಿದ್ದಾರೆ. ಈ ಮಹಿಳೆಯರ ವೀಸಾ ಪ್ರತಿ ಎರಡು ವರ್ಷಕ್ಕೆ ನವೀಕರಿಸಲಾಗುತ್ತಿದ್ದು, ಎಲ್ಲವೂ ಕಾನೂನುಬದ್ಧವಾಗಿದೆ.

ಪ್ರಸ್ತುತ ಭದ್ರತಾ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ, ಭಟ್ಕಳದಲ್ಲಿ ಇರುವ ಪಾಕಿಸ್ತಾನ ಮೂಲದ ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆಯು ತಾಳಲಾಗುತ್ತಿದೆ. ಎಲ್ಲರ ದಾಖಲೆಗಳನ್ನು ಪರಿಶೀಲಿಸಿ ಕಾನೂನುಬದ್ಧತೆ ನಿರ್ಧರಿಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

11 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

11 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

11 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

11 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago