ಕಲಬುರಗಿ: ಪಂಚಾಯತಿ ಅಭಿವೃದ್ದಿ ಅಧಿಕಾರಿ ಮೇಲೆ ಗ್ರಾಪಂ ಅಧ್ಯಕ್ಷೆ ಮತ್ತವರ ಕುಟುಂಬದಿಂದ ದಬ್ಬಾಳಿಕೆ ಆರೋಪ ಕೇಳಿಬರುತ್ತಿದೆ. ಅಫಜಲಪೂರ ತಾಲೂಕಿನ ಅತನೂರ ಗ್ರಾಪಂ ಪಿಡಿಒ ಅನಸೂಯಾ ಅಷ್ಟಗಿ ಮೇಲೆ ಅತನೂರ ಗ್ರಾಪಂ ಅಧ್ಯಕ್ಷೆ ಸಂಗೀತಾ ಕಾಂಬಳೆ, ಇವರ ಪತಿ ನಾಗೇಶ ಕಾಂಬಳೆ, ಸಂಬಂಧಿ ಸುಧಾಕರ ಕಾಂಬಳೆಯಿಂದ ದಬ್ಬಾಳಿಕೆ ನಡೆಸುತ್ತಿದ್ದಾರೆ. ಅದಲ್ಲದೆ ನಕಲಿ ಬಿಲ್ ಸೃಷ್ಟಿಗೆ ಸಹಕರಿಸಲು ಪಿಡಿಒ ಅನಸೂಯಾ ಅಷ್ಟಗಿ ಮೇಲೆ ಒತ್ತಡ ಹಾಕುತ್ತಿದ್ದಾರೆ.ಒತ್ತಡಕ್ಕೆ ಮಣಿಯದಿದ್ದಾಗ ಅವಾಚ್ಯ ಶಬ್ದಗಳಿಂದ ನಿಂಧಿಸಿ , ಹಲ್ಲೆಗೆ ಯತ್ನಿಸಿ ಗ್ರಾಪಂ ಕಚೇರಿಯಲ್ಲಿನ ಪಿಡಿಒ ಟೇಬಲ್ ಕುಟ್ಟಿ ಬೆದರಿಕೆವೊಡ್ಡಿ ಗುಂಡಾವರ್ತನೆ ತೋರಿಸುತ್ತಿದಾರೆ. ಅವರು ಹೇಳಿದಂತೆ ಕೇಳದಿದ್ರೆ ಸುಮ್ಮನೆ ಬಿಡುವದಿಲ್ಲ ಎಂದು ದಬ್ಬಾಳಿಕೆ ಮಾಡುತ್ತಿದ್ದಾರೆ. ಹೀಗಾಗಿ ಪಿಡಿಯೋ ಅನಸೂಯಾ ರೇವೂರ ಠಾಣೆಗೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದಾರೆ.
ವರದಿ : ಸಂಗಮೇಶ್ ಸರಡಗಿ
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…