Latest

ಜಗನ್‌ ಬೆಂಗಾವಲು ಕಾರಿನಡಿಗೆ ಸಿಲುಕಿ ಪಕ್ಷದ ಕಾರ್ಯಕರ್ತ ಸಾವು: ವಿಜಯವಾಡದಲ್ಲಿ ದಾರುಣ ಘಟನೆ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷದ ನಾಯಕ ವೈಎಸ್ ಜಗನ್‌ ಮೋಹನ್‌ ರೆಡ್ಡಿ ಅವರ ಭೇಟಿ ವೇಳೆ ನಡೆದ ಭೀಕರ ಘಟನೆೆಯಲ್ಲಿ ಪಕ್ಷದ ಹಿರಿಯ ಕಾರ್ಯಕರ್ತನೊಬ್ಬ ದಾರುಣ ಅಂತ್ಯ ಕಂಡಿದ್ದಾರೆ. ವಿಜಯವಾಡದ ತಾಡೆಪಲ್ಲಿ ಬಳಿ ಸಾವಿರಾರು ಅಭಿಮಾನಿಗಳು ಜಗನ್ ರನ್ನು ನೋಡಲು ಕೂಡಿದ್ದ ವೇಳೆ ನಡೆದ ಈ ದುರಂತದಲ್ಲಿ, ಚೀಲಿ ಸಿಂಗಯ್ಯ (65) ಎಂಬ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ.

ಇತ್ತೀಚೆಗಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದ ಮತ್ತೊಬ್ಬ ಕಾರ್ಯಕರ್ತನ ಕುಟುಂಬಕ್ಕೆ ಸಾಂತ್ವನ ನೀಡಲು ಜಗನ್‌ ರೆಂಟಪಲ್ಲಿಗೆ ತೆರಳಿದ್ದರು. ಈ ವೇಳೆ ಜಗನ್‌ ಆಗಮನದ ಸುದ್ದಿಯೊಂದಿಗೆ ಭಕ್ತರು ಹಾಗೂ ಪಕ್ಷದ ನೂರಾರು ಕಾರ್ಯಕರ್ತರು ತಡರಾತ್ರಿಯೇ ತಾಡೆಪಲ್ಲಿಯಿಂದ ರೆಂಟಪಲ್ಲಿಗೆ ಜಮಾಯಿಸಿದ್ದರು.

ಸರಕಾರದಿಂದ ಕೇವಲ ನೂರು ಮಂದಿ ಮಾತ್ರ ಹಾಜರಾಗುವಂತೆ ಹಾಗೂ ಮೂರು ಕಾರುಗಳಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗಿತ್ತು. ಆದರೆ ಭಾರೀ ಜನಸಂದಣಿಯಲ್ಲಿ ಸಿಂಗಯ್ಯ ಅವರು ಜಗನ್‌ ಕಾರಿಗೆ ಹೂವಿನ ಹಾರ ಹಾಕಲು ಮುಂದಾದಾಗ, ಅವರು ಅಕ್ಷರಶಃ ಬೆಂಗಾವಲು ವಾಹನದ ತಳದಲ್ಲಿ ಸಿಲುಕಿ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಯಾರಿಗೂ ಇದು ಗಮನಿಸದ ಕಾರಣ, ಮೆರವಣಿಗೆ ವಾಹನಗಳು ಅವರ ಮೇಲೆ ಹರಿದು ಹೋಗಿದ್ದು, ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಈ ಘಟನೆಯಿಂದ ವೈಎಸ್‌ಆರ್‌ಸಿಪಿ ಶಿಬಿರದಲ್ಲಿ ಆಘಾತದ ಮೂಡಿದ್ದು, ಪೊಲೀಸರು ಘಟನೆಯ ಬಗ್ಗೆ ತನಿಖೆ ಪ್ರಾರಂಭಿಸಿದ್ದಾರೆ. ಸಹಜವಾಗಿಯೇ ಭದ್ರತಾ ಲೋಪ, ಜನಸಂದಣಿಯ ನಿರ್ವಹಣೆಯಲ್ಲಿ ವಿಫಲತೆ ಎಂಬ ಪ್ರಶ್ನೆಗಳು ಸಹ ಎದ್ದುಕೊಂಡಿವೆ.

nazeer ahamad

Recent Posts

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

6 hours ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

22 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

1 day ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

1 day ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago