ಮುಂಡಗೋಡ : ತಾಲೂಕಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ ಸುಬ್ರಾಯ ಪಟಗಾರ (ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಸಮಗ್ರ ಶಿಕ್ಷಣ ಕರ್ನಾಟಕ, ಶಿರಸಿ) ಅವರಿಗೆ ಉಪನಿರ್ದೇಶಕರು (ಯೋಜನೆ) ಹುದ್ದೆಗೆ ಬಡ್ತಿ ನೀಡಲಾಗಿದೆ.ಕಳೆದ 8 ತಿಂಗಳುಗಳಿಂದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಉಪ ನಿರ್ದೇಶಕರು(ಯೋಜನೆ) ಅಪರ ಆಯುಕ್ತರ ಕಚೇರಿ,ಕಲಬುರ್ಗಿಗೆ ಸ್ಥಳ ನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ( ಆಡಳಿತ).ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಆದೇಶ ಹೊರಡಿಸಿದೆ.
ತಾಲೂಕಿಗೆ ಕಾಯಂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬರುವುದು ಯಾವಾಗ ?
ಮುಂಡಗೋಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳೆ ಅತಿ ಹೆಚ್ಚು ಆಡಳಿತ ನಡೆಸಿದ್ದುಂಟು ಹೀಗಾಗಿ ತಾಲೂಕಿನ ಶೈಕ್ಷಣಿಕ ವ್ಯವಸ್ಥೆ ಕುಂಠಿತಗೊಳ್ಳುವುದು ಸಹಜ ಆದ್ದರಿಂದ ಕ್ಷೇತ್ರದ ಶಾಸಕರು ಹಾಗೂ ಸಚಿವರು ಆದ ಶಿವರಾಮ ಹೆಬ್ಬಾರ್ ಅವರು ಈ ಬಗ್ಗೆ ಸ್ವಲ್ಪ ಗಮನ ಹರಿಸಿ ತಾಲೂಕಿಗೆ ಕಾಯಂ ಕ್ಷೇತ್ರ ಶಿಕ್ಷಣಾಧಿಕಾರಿ ಇರುವಂತೆ ನೋಡಿಕೊಳ್ಳಬೇಕಾಗಿದೆ.
ವರದಿ: ಮಂಜುನಾಥ ಹರಿಜನ
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…