Latest

ಪಾಟ್ನಾ ದಾರುಣ ಘಟನೆ: ಪ್ರೇಮ ಸಂಬಂಧಕ್ಕೆ ಅಡಚಣೆಯಾದ ಮಗನನ್ನೇ ತಾಯಿ ಹತ್ಯೆ ಮಾಡಿದ ಕೃತ್ಯ

ಪಾಟ್ನಾ (ಬಿಹಾರ) – ತಾಯಿಯೊಬ್ಬಳು ತನ್ನದೇ ಪುತ್ರನನ್ನು ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಬಿಹಾರದ ಪಾಟ್ನಾ ಗ್ರಾಮೀಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮೃತ ಬಾಲಕನನ್ನು ಶ್ರೇಯಾಂಸ್ (12) ಎಂದು ಗುರುತಿಸಲಾಗಿದ್ದು, ಆರೋಪಿ ತಾಯಿಯ ಹೆಸರು ರೋಮಾ ಕುಮಾರಿ (32) ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಶಾಲಾ ಶಿಕ್ಷಕಿಯಾಗಿರುವ ರೋಮಾ ಕುಮಾರಿ, ತನ್ನ ಶಾಲೆಯ ಪ್ರಿನ್ಸಿಪಾಲ್ ನಿರ್ಮಲ್ ಪಾಸ್ವಾನ್ ಜೊತೆಗೆ ಅನೈತಿಕ ಸಂಬಂಧ ಬೆಳೆಸಿಕೊಂಡಿದ್ದಳು. ಗಂಡನೊಂದಿಗೆ ವೈವಾಹಿಕ ಸಂಬಂಧಗಳು ಸರಿಯಾಗಿರದೆ ಪ್ರಿನ್ಸಿಪಾಲ್‌ನತ್ತ ಆಕರ್ಷಿತಳಾಗಿದ್ದ ಈಕೆ, ನಿರಂತರವಾಗಿ ತನ್ನ ಮನೆಗೆ ಅವನಿಗೆ ಬರುವ ಅವಕಾಶ ಕಲ್ಪಿಸುತ್ತಿದ್ದಳು.

ಈ ಸಂಬಂಧವನ್ನು ಶ್ರೇಯಾಂಸ್ ವಿರೋಧಿಸುತ್ತಿದ್ದ. ತಾಯಿಯ ನಡೆಗೆ ಅಸಂತೋಷ ವ್ಯಕ್ತಪಡಿಸುತ್ತಿದ್ದ ಮಗ, ಈ ಸಂಬಂಧವನ್ನು ನಿಲ್ಲಿಸುವಂತೆ ಹಲವು ಬಾರಿ ಬೇಡಿಕೆ ಇಟ್ಟಿದ್ದಾನೆ. ಮಗನ ಈ ವಿರೋಧವೇ ಕೊನೆಗೂ ಆಕೆಯ ಕ್ರೂರತೆಯ ಹೊರಹೋಗುವಂತೆ ಮಾಡಿದೆ.

ಮಗನನ್ನು ಹಲ್ಲೆ ಮಾಡಿ ಹತ್ಯೆಗೈದ ರೋಮಾ ಕುಮಾರಿ, ಬಳಿಕ ಶವವನ್ನು ಕೋನಹಾರ್ ಸೇತುವೆ ಬಳಿ ಎಸೆದು ಬೆಂಕಿ ಹಚ್ಚಿದ್ದಾಳೆ. ಶವವು ಅರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶಂಕಾಸ್ಪದ ಸ್ಥಿತಿಯಲ್ಲಿ ಶವ ಪತ್ತೆಯಾಗುತ್ತಿದ್ದಂತೆ ಪೊಲೀಸರು ತನಿಖೆ ಕೈಗೊಂಡು, ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಪಾಪಿ ತಾಯಿಯ ಈ ಕೃತ್ಯ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

14 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

19 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

19 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

19 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

19 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

24 hours ago