Latest

ಪವಿತ್ರಾ ಗೌಡ ಜಾಮೀನು ರದ್ದು: ಬಂಧನ ವೇಳೆ ಪೊಲೀಸರಿಗೆ ಅವಾಜ್”

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಸುಪ್ರೀಂ ಕೋರ್ಟ್ ಆದೇಶದಂತೆ ರದ್ದುಗೊಂಡಿದ್ದು, ಇಂದು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನ ಸಮಯದಲ್ಲಿ ಪವಿತ್ರಾ ಗೌಡ ಅವರು ಪೊಲೀಸರಿಗೆ ಆಕ್ರೋಶ ವ್ಯಕ್ತಪಡಿಸಿರುವುದು ಬೆಳಕಿಗೆ ಬಂದಿದೆ.

ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಮಾಡಿ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಆದೇಶ ನೀಡಿತ್ತು. ಇದರಂತೆ, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮೆಮೊ ಸಹಿತವಾಗಿ ಪವಿತ್ರಾ ಗೌಡ ಅವರ ಮನೆಯಲ್ಲಿ ಹಾಜರಾಗಿ ಬಂಧಿಸಿದರು.

ಬಂಧನದ ಸಮಯದಲ್ಲಿ ಪವಿತ್ರಾ ಗೌಡ ಆರಂಭದಲ್ಲಿ ಮೌನವಾಗಿ ಕುಳಿತಿದ್ದರು. ಅವರ ಪರ ವಕೀಲರಾದ ಬಾಲನ್ ಮತ್ತು ನಾರಾಯಣಸ್ವಾಮಿ ಪೊಲೀಸರು ಅವರನ್ನು ಕೋರ್ಟ್‌ಗೆ ನೇರವಾಗಿ ಹಾಜರುಪಡಿಸಲು ವಿನಂತಿಸಿದರೂ, ಅಧಿಕಾರಿಗಳು “ಅರೆಸ್ಟ್ ಮಾಡಲೇಬೇಕು” ಎಂಬ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಅವರನ್ನು ಠಾಣೆಗೆ ಕರೆದುಕೊಂಡು ಹೋದರು.

ಈ ವೇಳೆ ಪವಿತ್ರಾ ಗೌಡ ಅವರನ್ನು ಕರೆದೊಯ್ಯುವಾಗ ಅವರೊಂದಿಗೆ ಇದ್ದ ವಕೀಲ ಎಡವಿದ ಘಟನೆ ನಡೆದಿದೆ. ಇದರಿಂದ ಕೋಪಗೊಂಡ ಪವಿತ್ರಾ, “ಯಾಕೆ ತಳ್ಳುತ್ತೀರಿ? ಮೊದಲು ಮೊಬೈಲ್ ಬಿಡಿ. ಸರಿಯಾಗಿ ಕರೆದುಕೊಂಡು ಹೋಗಿ” ಎಂದು ಪೊಲೀಸರಿಗೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಮಹಿಳಾ ಸಿಬ್ಬಂದಿಗಳ ಮೇಲೂ ಆಕ್ರೋಶ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.

ಬಂಧನದ ಕ್ಷಣದಲ್ಲಿ ವಕೀಲರು ಪವಿತ್ರಾ ಗೌಡ ಅವರಿಗೆ ಬೆಂಬಲದ ಭರವಸೆ ನೀಡಿದ್ದು, “ನಿಮ್ಮ ಪರವಾಗಿ ಹೋರಾಟ ಮಾಡುತ್ತೇವೆ” ಎಂದು ಧೈರ್ಯ ಹೇಳಿದ್ದಾರೆ. ಈ ಸಂದರ್ಭದಲ್ಲಿ ಪವಿತ್ರಾ ಗೌಡ ಅವರ ಕಣ್ಣಲ್ಲಿ ಕಣ್ಣೀರು ತುಂಬಿಕೊಂಡಿತ್ತು.

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

12 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

13 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

1 day ago