ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಸುಪ್ರೀಂ ಕೋರ್ಟ್ ಆದೇಶದಂತೆ ರದ್ದುಗೊಂಡಿದ್ದು, ಇಂದು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನ ಸಮಯದಲ್ಲಿ ಪವಿತ್ರಾ ಗೌಡ ಅವರು ಪೊಲೀಸರಿಗೆ ಆಕ್ರೋಶ ವ್ಯಕ್ತಪಡಿಸಿರುವುದು ಬೆಳಕಿಗೆ ಬಂದಿದೆ.
ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಮಾಡಿ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಆದೇಶ ನೀಡಿತ್ತು. ಇದರಂತೆ, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮೆಮೊ ಸಹಿತವಾಗಿ ಪವಿತ್ರಾ ಗೌಡ ಅವರ ಮನೆಯಲ್ಲಿ ಹಾಜರಾಗಿ ಬಂಧಿಸಿದರು.
ಬಂಧನದ ಸಮಯದಲ್ಲಿ ಪವಿತ್ರಾ ಗೌಡ ಆರಂಭದಲ್ಲಿ ಮೌನವಾಗಿ ಕುಳಿತಿದ್ದರು. ಅವರ ಪರ ವಕೀಲರಾದ ಬಾಲನ್ ಮತ್ತು ನಾರಾಯಣಸ್ವಾಮಿ ಪೊಲೀಸರು ಅವರನ್ನು ಕೋರ್ಟ್ಗೆ ನೇರವಾಗಿ ಹಾಜರುಪಡಿಸಲು ವಿನಂತಿಸಿದರೂ, ಅಧಿಕಾರಿಗಳು “ಅರೆಸ್ಟ್ ಮಾಡಲೇಬೇಕು” ಎಂಬ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಅವರನ್ನು ಠಾಣೆಗೆ ಕರೆದುಕೊಂಡು ಹೋದರು.
ಈ ವೇಳೆ ಪವಿತ್ರಾ ಗೌಡ ಅವರನ್ನು ಕರೆದೊಯ್ಯುವಾಗ ಅವರೊಂದಿಗೆ ಇದ್ದ ವಕೀಲ ಎಡವಿದ ಘಟನೆ ನಡೆದಿದೆ. ಇದರಿಂದ ಕೋಪಗೊಂಡ ಪವಿತ್ರಾ, “ಯಾಕೆ ತಳ್ಳುತ್ತೀರಿ? ಮೊದಲು ಮೊಬೈಲ್ ಬಿಡಿ. ಸರಿಯಾಗಿ ಕರೆದುಕೊಂಡು ಹೋಗಿ” ಎಂದು ಪೊಲೀಸರಿಗೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಮಹಿಳಾ ಸಿಬ್ಬಂದಿಗಳ ಮೇಲೂ ಆಕ್ರೋಶ ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ.
ಬಂಧನದ ಕ್ಷಣದಲ್ಲಿ ವಕೀಲರು ಪವಿತ್ರಾ ಗೌಡ ಅವರಿಗೆ ಬೆಂಬಲದ ಭರವಸೆ ನೀಡಿದ್ದು, “ನಿಮ್ಮ ಪರವಾಗಿ ಹೋರಾಟ ಮಾಡುತ್ತೇವೆ” ಎಂದು ಧೈರ್ಯ ಹೇಳಿದ್ದಾರೆ. ಈ ಸಂದರ್ಭದಲ್ಲಿ ಪವಿತ್ರಾ ಗೌಡ ಅವರ ಕಣ್ಣಲ್ಲಿ ಕಣ್ಣೀರು ತುಂಬಿಕೊಂಡಿತ್ತು.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…