ಹೊಸ ವರ್ಷದ ಆರಂಭದಲ್ಲಿ ಪವಿತ್ರಾ ಲೋಕೇಶ್ ಮದುವೆಯಾಗುತ್ತಿದ್ದೇನೆ ಎಂದು ಲಿಪ್ ಲಾಕ್ ಫೋಟೋಗಳನ್ನು ಬಿಟ್ಟಿದ್ದರು. ಇತ್ತೀಚೆಗೆ ಮದುವೆಯ ವಿಡಿಯೋವನ್ನು ಬಿಟ್ಟು ಶಾಕಿಂಗ್ ಕೊಟ್ರು. ಆದ್ರೆ ಇದೀಗ ಇದು ಮದುವೆಯ ವಿಡಿಯೋ ಅಲ್ಲ, ಚಿತ್ರದ ಪ್ರಚಾರದ ವಿಡಿಯೋ ಎಂಬ ಅನುಮಾನ ಹುಟ್ಟಿಕೊಂಡಿದೆ. ಪವಿತ್ರಾ ಲೋಕೇಶ್ ಅವರು ನರೇಶ್ಗೆ 4ನೇ ಪತ್ನಿಯಾಗಿದ್ದಾರೆ. ಪವಿತ್ರಾ ಲೋಕೇಶ್ ಅವರನ್ನು ಕಾನೂನುಬದ್ಧವಾಗಿ ಮದುವೆಯಾಗಲು ನರೇಶ್ ತನ್ನ 3ನೇ ಪತ್ನಿ ರಮ್ಯಾ ರಘುಪತಿಗೆ ವಿಚ್ಛೇದನ ನೋಟಿಸ್ ಕಳುಹಿಸಿದ್ದಾರೆ. ಆದರೆ ಆಕೆ ವಿಚ್ಛೇದನಕ್ಕೆ ರಮ್ಯಾ ಒಪ್ಪುತ್ತಿಲ್ಲ.
ನರೇಶ್-ಪವಿತ್ರಾ ಲೋಕೇಶ್ ಮದುವೆ ಇದೀಗ ಸಖತ್ ಟಾಪಿಕ್ ಆಗುತ್ತಿದೆ. ಹೀಗಾಗಿ ಇವರಿಬ್ಬರು ಆಗಾಗ ಸುದ್ದಿಯಲ್ಲಿರುತ್ತಾರೆ. ಮದುವೆ ಬಳಿಕ ದುಬೈಗೆ ಹನಿಮೂನ್ಗೆ ಹಾರಿದ್ದಾರೆ ಎನ್ನುವ ಸುದ್ದಿ ಕೂಡ ವೈರಲ್ ಆಗಿದೆ. ಈ ನಡುವೆ ಪವಿತ್ರಾ ಲೋಕೇಶ್ ಅವರ ಮೊದಲ ಪತಿ ಮಾಡಿರುವ ಕಾಮೆಂಟ್ಗಳು ಸಂಚಲನ ಮೂಡಿಸುತ್ತಿವೆ. ಈ ಬಗ್ಗೆ ಪವಿತ್ರಾ ಲೋಕೇಶ್ ಅವರ ಪತಿ ಸುಚೇಂದ್ರ ಪ್ರಸಾದ್ ಪ್ರತಿಕ್ರಿಯಿಸಿದ್ದರು. ಇತ್ತೀಚೆಗೆ ಅವರು ಮತ್ತೊಮ್ಮೆ ಪ್ರತಿಕ್ರಿಯಿಸಿದ್ದಾರೆ. ಪವಿತ್ರಾ ಲೋಕೇಶ್ ಅವರ ವರ್ತನೆ ಬಗ್ಗೆ ಅವರು ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ.
ಪವಿತ್ರಾ ಐಷಾರಾಮಿ ಜೀವನವನ್ನು ಇಷ್ಟಪಡುತ್ತಾಳೆ, ಆ ಜೀವನಕ್ಕಾಗಿ ಏನು ಬೇಕಾದರೂ ಮಾಡುತ್ತಾಳೆ. ಆಕೆ ಅವಕಾಶವಾದಿ ಎಂದು ಸುಚೇಂದ್ರ ಪ್ರಸಾದ್ ಹೇಳಿದ್ದಾರೆ. ನರೇಶನ ವಿಚಾರದಲ್ಲಿ ಬೇರೆ ಪ್ಲಾನ್ ಮಾಡಿದ್ದಾಳೆ ಎಂದು ಹೊಸ ಬಾಂಬ್ ಸಿಡಿಸಿದ್ದಾಳೆ. 1500 ಕೋಟಿ ಆಸ್ತಿಯನ್ನು ಕಬಳಿಸಲು ನರೇಶ್ ಜೊತೆ ಲವ್ ಟ್ರ್ಯಾಕ್ ಆರಂಭಿಸಿದ್ದಾಳೆ ಎಂದು ಹೇಳಿದ್ದಾರೆ.
ಆಸ್ತಿ ಹಾಳು ಮಾಡುವ ದುರುದ್ದೇಶದಿಂದ ನರೇಶ್ ಜೊತೆ ತಿರುಗಾಡುತ್ತಿದ್ದಾಳೆ ಎಂದು ಸುಚೇಂದ್ರ ಪ್ರಸಾದ್ ಶಾಕಿಂಗ್ ಕಾಮೆಂಟ್ ಮಾಡಿದ್ದಾರೆ. ಹಣಕ್ಕಾಗಿ ಪವಿತ್ರಾ ಲೋಕೇಶ್ ನನಗೆ ವಿಚ್ಛೇದನ ನೀಡಿದ್ದಾಳೆ. ನರೇಶ್ ಗೆ ಇದು ಇನ್ನೂ ಅರ್ಥವಾಗಿಲ್ಲ. ಮುಂದೊಂದು ದಿನ ಗೊತ್ತಾಗುತ್ತದೆ ಎಂದು ಸುಚೇಂದ್ರ ಪ್ರಸಾದ್ ಹೇಳಿರುವುದು ಇದೀಗ ಭಾರೀ ಚರ್ಚೆ ಆಗ್ತಿದೆ.
ಪವಿತ್ರಾ ಲೋಕೇಶ್ ಒಳ್ಳೆಯವಳಲ್ಲ, ಹಣಕ್ಕಾಗಿ ಏನು ಬೇಕಾದರೂ ಮಾಡುತ್ತಾಳೆ ಎಂದು ಸುಚೇಂದ್ರ ಪ್ರಸಾದ್ ಹೇಳಿದ್ದರು. ಈ ವಿಚಾರವಾಗಿ ನರೇಶ್ ಮತ್ತು ಪವಿತ್ರಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…