Latest

ಪವಿತ್ರಾ ಲೋಕೇಶ್ ಲವ್ ಟ್ರ್ಯಾಕ್ ಶುರು ಮಾಡಿದ್ದೇ 1500 ಕೋಟಿ ಹೊಡೆಯಲು- ಮೊದಲ ಪತಿ ಸುಚೇಂದ್ರ ಪ್ರಸಾದ್

ಹೊಸ ವರ್ಷದ ಆರಂಭದಲ್ಲಿ ಪವಿತ್ರಾ ಲೋಕೇಶ್ ಮದುವೆಯಾಗುತ್ತಿದ್ದೇನೆ ಎಂದು ಲಿಪ್ ಲಾಕ್ ಫೋಟೋಗಳನ್ನು ಬಿಟ್ಟಿದ್ದರು. ಇತ್ತೀಚೆಗೆ ಮದುವೆಯ ವಿಡಿಯೋವನ್ನು ಬಿಟ್ಟು ಶಾಕಿಂಗ್ ಕೊಟ್ರು. ಆದ್ರೆ ಇದೀಗ ಇದು ಮದುವೆಯ ವಿಡಿಯೋ ಅಲ್ಲ, ಚಿತ್ರದ ಪ್ರಚಾರದ ವಿಡಿಯೋ ಎಂಬ ಅನುಮಾನ ಹುಟ್ಟಿಕೊಂಡಿದೆ. ಪವಿತ್ರಾ ಲೋಕೇಶ್ ಅವರು ನರೇಶ್​ಗೆ 4ನೇ ಪತ್ನಿಯಾಗಿದ್ದಾರೆ. ಪವಿತ್ರಾ ಲೋಕೇಶ್ ಅವರನ್ನು ಕಾನೂನುಬದ್ಧವಾಗಿ ಮದುವೆಯಾಗಲು ನರೇಶ್ ತನ್ನ 3ನೇ ಪತ್ನಿ ರಮ್ಯಾ ರಘುಪತಿಗೆ ವಿಚ್ಛೇದನ ನೋಟಿಸ್ ಕಳುಹಿಸಿದ್ದಾರೆ. ಆದರೆ ಆಕೆ ವಿಚ್ಛೇದನಕ್ಕೆ ರಮ್ಯಾ ಒಪ್ಪುತ್ತಿಲ್ಲ.
ನರೇಶ್-ಪವಿತ್ರಾ ಲೋಕೇಶ್ ಮದುವೆ ಇದೀಗ ಸಖತ್ ಟಾಪಿಕ್ ಆಗುತ್ತಿದೆ. ಹೀಗಾಗಿ ಇವರಿಬ್ಬರು ಆಗಾಗ ಸುದ್ದಿಯಲ್ಲಿರುತ್ತಾರೆ. ಮದುವೆ ಬಳಿಕ ದುಬೈಗೆ ಹನಿಮೂನ್​ಗೆ ಹಾರಿದ್ದಾರೆ ಎನ್ನುವ ಸುದ್ದಿ ಕೂಡ ವೈರಲ್ ಆಗಿದೆ. ಈ ನಡುವೆ ಪವಿತ್ರಾ ಲೋಕೇಶ್ ಅವರ ಮೊದಲ ಪತಿ ಮಾಡಿರುವ ಕಾಮೆಂಟ್​ಗಳು ಸಂಚಲನ ಮೂಡಿಸುತ್ತಿವೆ. ಈ ಬಗ್ಗೆ ಪವಿತ್ರಾ ಲೋಕೇಶ್ ಅವರ ಪತಿ ಸುಚೇಂದ್ರ ಪ್ರಸಾದ್ ಪ್ರತಿಕ್ರಿಯಿಸಿದ್ದರು. ಇತ್ತೀಚೆಗೆ ಅವರು ಮತ್ತೊಮ್ಮೆ ಪ್ರತಿಕ್ರಿಯಿಸಿದ್ದಾರೆ. ಪವಿತ್ರಾ ಲೋಕೇಶ್ ಅವರ ವರ್ತನೆ ಬಗ್ಗೆ ಅವರು ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ.
ಪವಿತ್ರಾ ಐಷಾರಾಮಿ ಜೀವನವನ್ನು ಇಷ್ಟಪಡುತ್ತಾಳೆ, ಆ ಜೀವನಕ್ಕಾಗಿ ಏನು ಬೇಕಾದರೂ ಮಾಡುತ್ತಾಳೆ. ಆಕೆ ಅವಕಾಶವಾದಿ ಎಂದು ಸುಚೇಂದ್ರ ಪ್ರಸಾದ್ ಹೇಳಿದ್ದಾರೆ. ನರೇಶನ ವಿಚಾರದಲ್ಲಿ ಬೇರೆ ಪ್ಲಾನ್ ಮಾಡಿದ್ದಾಳೆ ಎಂದು ಹೊಸ ಬಾಂಬ್ ಸಿಡಿಸಿದ್ದಾಳೆ. 1500 ಕೋಟಿ ಆಸ್ತಿಯನ್ನು ಕಬಳಿಸಲು ನರೇಶ್ ಜೊತೆ ಲವ್ ಟ್ರ್ಯಾಕ್ ಆರಂಭಿಸಿದ್ದಾಳೆ ಎಂದು ಹೇಳಿದ್ದಾರೆ.
ಆಸ್ತಿ ಹಾಳು ಮಾಡುವ ದುರುದ್ದೇಶದಿಂದ ನರೇಶ್ ಜೊತೆ ತಿರುಗಾಡುತ್ತಿದ್ದಾಳೆ ಎಂದು ಸುಚೇಂದ್ರ ಪ್ರಸಾದ್ ಶಾಕಿಂಗ್ ಕಾಮೆಂಟ್ ಮಾಡಿದ್ದಾರೆ. ಹಣಕ್ಕಾಗಿ ಪವಿತ್ರಾ ಲೋಕೇಶ್ ನನಗೆ ವಿಚ್ಛೇದನ ನೀಡಿದ್ದಾಳೆ. ನರೇಶ್ ಗೆ ಇದು ಇನ್ನೂ ಅರ್ಥವಾಗಿಲ್ಲ. ಮುಂದೊಂದು ದಿನ ಗೊತ್ತಾಗುತ್ತದೆ ಎಂದು ಸುಚೇಂದ್ರ ಪ್ರಸಾದ್ ಹೇಳಿರುವುದು ಇದೀಗ ಭಾರೀ ಚರ್ಚೆ ಆಗ್ತಿದೆ.
ಪವಿತ್ರಾ ಲೋಕೇಶ್ ಒಳ್ಳೆಯವಳಲ್ಲ, ಹಣಕ್ಕಾಗಿ ಏನು ಬೇಕಾದರೂ ಮಾಡುತ್ತಾಳೆ ಎಂದು ಸುಚೇಂದ್ರ ಪ್ರಸಾದ್ ಹೇಳಿದ್ದರು. ಈ ವಿಚಾರವಾಗಿ ನರೇಶ್ ಮತ್ತು ಪವಿತ್ರಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

19 hours ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

19 hours ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

19 hours ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

19 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

19 hours ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

19 hours ago