Latest

ಪಿ ಡಿ ಓ ಮಂಜುನಾಥನ ಕಮಿಷನ್ ದಂಧೆ; ಸರ್ಕಾರಿ ಹಣ ಕೊಳ್ಳೆ ಹೊಡೆದು ಟ್ರಿಪ್ ಹೊಡೆಯಲು ಪಿಡಿಒ ಹಾಕಿದ್ದ ಸ್ಕೆಚ್!

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಅಣೆಗೆರೆ ಗ್ರಾಮ ಪಂಚಾಯಿತಿಯ ಪಿಡಿಒ ಮಂಜುನಾಥ್ ಸರ್ಕಾರದ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಾ ಕಾಮಗಾರಿ ಕಳಪೆ ಮಾಡಿಸಿ ಕಮಿಷನ್ ಹೊಡೆಯುತ್ತಿರುವ ಬಗ್ಗೆ ಆಡಿಯೋ ಒಂದು ಹೊರ ಬಿದ್ದಿದೆ.
ಆಡಿಯೋದಲ್ಲಿ ಪಿಡಿಒ ಮಂಜುನಾಥ್ ಬಿಜೆಪಿ ಕಾರ್ಯಕರ್ತ ರವಿಯ ಬಳಿ ಕಾಮಗಾರಿಗಳಲ್ಲಿ ಹಾಗೂ ಕೆಲವು ಯೋಜನೆಗಳಲ್ಲಿ ಹಣ ಹೊಡೆಯುವುದರ ಬಗ್ಗೆ ಚರ್ಚಿಸಿರುವುದು ಹಾಗೂ ಸದಸ್ಯರುಗಳಿಗೆ ಹಣ ಕೊಟ್ಟು ತಮ್ಮತ ಸೆಳೆಯಬೇಕೆಂಬುದರ ಬಗ್ಗೆ ಮಾತನಾಡಿರುವುದು ಕಂಡುಬಂದಿರುತ್ತದೆ.
ಹಾಗೂ ನಡೆಯುತ್ತಿರುವಂತಹ ಎಲ್ಲಾ ಅಕ್ರಮಗಳು ಸಹ ತಾಲೂಕು ಪಂಚಾಯಿತಿ ಇ ಒ ರವರಿಗೆ ತಿಳಿದಿದ್ದು ಅವರು ಸಹ ಇವರಿಗೆ ಬೆಂಬಲಿಸುತ್ತಿದ್ದಾರೆ ಎಂಬ ರೀತಿಯಲ್ಲಿ ಆಡಿಯೋದಲ್ಲಿ ಇದೆ.
ಕೆಲವು ತಿಂಗಳ ಹಿಂದೆ ಅಣೆಗೆರೆ ಗ್ರಾಮ ಪಂಚಾಯಿತಿಗೆ ನುಗ್ಗಿ ಡಾಟಾ ಎಂಟ್ರಿ ಆಪರೇಟರ್ ಚಂದ್ರಪ್ಪನಿಗೆ ಬಿಜೆಪಿ ಕಾರ್ಯಕರ್ತ ರವಿ ಹೊಡೆದಿದ್ದರೂ ಸಹ ಪಿಡಿಒ ಯಾವುದೇ ರೀತಿಯ ದೂರನ್ನು ನೀಡದೆ ರವಿಯ ಪರವಾಗಿ ನಿಂತು ಪ್ರಕರಣವನ್ನು ಮುಚ್ಚಿ ಹಾಕಿದ್ದಾನೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಇವರಿಬ್ಬರೂ ಚರ್ಚಿಸುವಂತಹ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜನರು ಪಿಡಿಓಗೆ ಚಿಮಾರಿ ಹಾಕುತ್ತಿದ್ದಾರೆ.

ಈ ಆಡಿಯೋದಲ್ಲಿ ಪಿಡಿಒ ಸದಸ್ಯರುಗಳನ್ನು ಹಣ ಕೊಟ್ಟು ತಮ್ಮತ ಸೆಳೆದುಕೊಳ್ಳೋಣ ಹಾಗೂ ಸರ್ಕಾರದ ಯಾವುದಾದರೂ ಯೋಜನೆಯಲ್ಲಿ ತಕ್ಕಮಟ್ಟಿಗೆ ಹಣ ಹೊಡೆಯುತ್ತೇನೆ ಅದರಲ್ಲಿ ಟ್ರಿಪ್ ಗೆ ಹೋಗೋಣ ಎಂದು ಸಹ ಹೇಳಿಕೊಂಡಿದ್ದಾನೆ.
ಕೆಲವು ದಿನಗಳಿಂದ ಈ ಆಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದರು ಸಹ ತಾಲೂಕು ಪಂಚಾಯಿತಿ ಇಒ ಯಾವುದೇ ರೀತಿ ಪ್ರತಿಕ್ರಿಯೆ ನೀಡಿರುವುದಿಲ್ಲ.
ತಾಲೂಕು ಪಂಚಾಯಿತಿ ಇ ಒ ರವರು ಮೌನವಾಗಿ ಇರುವುದಕ್ಕೆ ಕಾರಣ ಏನು?
ಆಡಿಯೋದಲ್ಲಿ ಮಾತನಾಡಿಕೊಳ್ಳುವ ಹಾಗೆ ಇ ಒ ರವರು ಸಹ ಅವರ ಜೊತೆ ಏನಾದರೂ ಕೈ ಜೋಡಿಸಿದ್ದಾರಾ?
ಜಿಲ್ಲಾಡಳಿತ ಈ ಕೂಡಲೇ ಎಚ್ಚೆತ್ತು ಇಂಥವರ ವಿರುದ್ಧ ತನಿಖೆ ನಡೆಸಬೇಕು ಹಾಗೂ ರಾಜಾರೋಷವಾಗಿ ಭ್ರಷ್ಟಾಚಾರ ನಡೆಸುತ್ತಿರುವ ಇಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗ ಬೇಕಿದೆ.

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago