Latest

ಪಿ ಡಿ ಓ ಮಂಜುನಾಥನ ಕಮಿಷನ್ ದಂಧೆ; ಸರ್ಕಾರಿ ಹಣ ಕೊಳ್ಳೆ ಹೊಡೆದು ಟ್ರಿಪ್ ಹೊಡೆಯಲು ಪಿಡಿಒ ಹಾಕಿದ್ದ ಸ್ಕೆಚ್!

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಅಣೆಗೆರೆ ಗ್ರಾಮ ಪಂಚಾಯಿತಿಯ ಪಿಡಿಒ ಮಂಜುನಾಥ್ ಸರ್ಕಾರದ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಾ ಕಾಮಗಾರಿ ಕಳಪೆ ಮಾಡಿಸಿ ಕಮಿಷನ್ ಹೊಡೆಯುತ್ತಿರುವ ಬಗ್ಗೆ ಆಡಿಯೋ ಒಂದು ಹೊರ ಬಿದ್ದಿದೆ.
ಆಡಿಯೋದಲ್ಲಿ ಪಿಡಿಒ ಮಂಜುನಾಥ್ ಬಿಜೆಪಿ ಕಾರ್ಯಕರ್ತ ರವಿಯ ಬಳಿ ಕಾಮಗಾರಿಗಳಲ್ಲಿ ಹಾಗೂ ಕೆಲವು ಯೋಜನೆಗಳಲ್ಲಿ ಹಣ ಹೊಡೆಯುವುದರ ಬಗ್ಗೆ ಚರ್ಚಿಸಿರುವುದು ಹಾಗೂ ಸದಸ್ಯರುಗಳಿಗೆ ಹಣ ಕೊಟ್ಟು ತಮ್ಮತ ಸೆಳೆಯಬೇಕೆಂಬುದರ ಬಗ್ಗೆ ಮಾತನಾಡಿರುವುದು ಕಂಡುಬಂದಿರುತ್ತದೆ.
ಹಾಗೂ ನಡೆಯುತ್ತಿರುವಂತಹ ಎಲ್ಲಾ ಅಕ್ರಮಗಳು ಸಹ ತಾಲೂಕು ಪಂಚಾಯಿತಿ ಇ ಒ ರವರಿಗೆ ತಿಳಿದಿದ್ದು ಅವರು ಸಹ ಇವರಿಗೆ ಬೆಂಬಲಿಸುತ್ತಿದ್ದಾರೆ ಎಂಬ ರೀತಿಯಲ್ಲಿ ಆಡಿಯೋದಲ್ಲಿ ಇದೆ.
ಕೆಲವು ತಿಂಗಳ ಹಿಂದೆ ಅಣೆಗೆರೆ ಗ್ರಾಮ ಪಂಚಾಯಿತಿಗೆ ನುಗ್ಗಿ ಡಾಟಾ ಎಂಟ್ರಿ ಆಪರೇಟರ್ ಚಂದ್ರಪ್ಪನಿಗೆ ಬಿಜೆಪಿ ಕಾರ್ಯಕರ್ತ ರವಿ ಹೊಡೆದಿದ್ದರೂ ಸಹ ಪಿಡಿಒ ಯಾವುದೇ ರೀತಿಯ ದೂರನ್ನು ನೀಡದೆ ರವಿಯ ಪರವಾಗಿ ನಿಂತು ಪ್ರಕರಣವನ್ನು ಮುಚ್ಚಿ ಹಾಕಿದ್ದಾನೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಇವರಿಬ್ಬರೂ ಚರ್ಚಿಸುವಂತಹ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜನರು ಪಿಡಿಓಗೆ ಚಿಮಾರಿ ಹಾಕುತ್ತಿದ್ದಾರೆ.

ಈ ಆಡಿಯೋದಲ್ಲಿ ಪಿಡಿಒ ಸದಸ್ಯರುಗಳನ್ನು ಹಣ ಕೊಟ್ಟು ತಮ್ಮತ ಸೆಳೆದುಕೊಳ್ಳೋಣ ಹಾಗೂ ಸರ್ಕಾರದ ಯಾವುದಾದರೂ ಯೋಜನೆಯಲ್ಲಿ ತಕ್ಕಮಟ್ಟಿಗೆ ಹಣ ಹೊಡೆಯುತ್ತೇನೆ ಅದರಲ್ಲಿ ಟ್ರಿಪ್ ಗೆ ಹೋಗೋಣ ಎಂದು ಸಹ ಹೇಳಿಕೊಂಡಿದ್ದಾನೆ.
ಕೆಲವು ದಿನಗಳಿಂದ ಈ ಆಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದರು ಸಹ ತಾಲೂಕು ಪಂಚಾಯಿತಿ ಇಒ ಯಾವುದೇ ರೀತಿ ಪ್ರತಿಕ್ರಿಯೆ ನೀಡಿರುವುದಿಲ್ಲ.
ತಾಲೂಕು ಪಂಚಾಯಿತಿ ಇ ಒ ರವರು ಮೌನವಾಗಿ ಇರುವುದಕ್ಕೆ ಕಾರಣ ಏನು?
ಆಡಿಯೋದಲ್ಲಿ ಮಾತನಾಡಿಕೊಳ್ಳುವ ಹಾಗೆ ಇ ಒ ರವರು ಸಹ ಅವರ ಜೊತೆ ಏನಾದರೂ ಕೈ ಜೋಡಿಸಿದ್ದಾರಾ?
ಜಿಲ್ಲಾಡಳಿತ ಈ ಕೂಡಲೇ ಎಚ್ಚೆತ್ತು ಇಂಥವರ ವಿರುದ್ಧ ತನಿಖೆ ನಡೆಸಬೇಕು ಹಾಗೂ ರಾಜಾರೋಷವಾಗಿ ಭ್ರಷ್ಟಾಚಾರ ನಡೆಸುತ್ತಿರುವ ಇಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗ ಬೇಕಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago