Latest

ಕಛೇರಿಗೇ ಬಾರದ ಪಿಡಿಓ ಮುತ್ತಣ್ಣ ಡೋಣಿಗೆ ಎರಡೆರಡು ಪಂಚಾಯತಿ ಬೇಕಿತ್ತಾ?

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ನಾಯನೆಗಲಿ ಗ್ರಾಮ ಪಂಚಾಯತಿಯಲ್ಲಿನ ಭ್ರಷ್ಟಾಚಾರದ ಪುರಾಣ ಕಥೆ. ಗ್ರಾಮ ಪಂಚಾಯಿತಿ 15 ನೇಯ ಹಣಕಾಸಿನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಪಂಚಾಯತಿಯ ವೆಬ್ಸೈಟ್ ನಲ್ಲಿ ಹಾಕಿರುವಂತಹ ಬಿಲ್ಲುಗಳು ಸಾಕ್ಷಿಯಾಗಿವೆ.
ದಿನಾಂಕ 26/06/2023 ರಂದು ತೆಗೆದ ಬಿಲ್ ವೋಚರಗಳು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದಾವೆ.
ಏಕೆಂದರೆ ಆ ದಿನ ಅಮೋಘ ಏಜೆನ್ಸಿ ಇಳಕಲ್ ರವರಿಗೆ 1)43,669 2)69,258 3)48,095 4)64,758 5)46,386 ಈ ಐದು ಬಿಲ್ಲುಗಳನ್ನು ಹಾಕಿದ್ದು,
ಅದರಲ್ಲಿ ಸರಿಯಾದ ಮಾಹಿತಿ ಇಲ್ಲದೇ ಪ್ರಶ್ನಾರ್ಥಕ(?) ಚಿನ್ಹೆಗಳು ಎದ್ದು ಕಾಣುತ್ತಿವೆ.
ಪ್ರಶ್ನಾರ್ಥಕ ಚಿಹ್ನೆಗಳು ಹಣ ಹೊಡೆಯಲು ಹಾಕುತಿದ್ದಾರೋ?ಅಥವಾ ತಾಂತ್ರಿಕ ದೋಷದಿಂದ ಈ ರೀತಿ ಆಗುತ್ತಿದೆಯೋ?
ಇದಕ್ಕೆ ಉತ್ತರ ಪಿಡಿಓ ರವರೆ ನೀಡಬೇಕಿದೆ.
ಮಾಹಿತಿ ಕೇಳಲು ಸಂಪರ್ಕಿಸಿದಾಗ ಸ್ಪಷ್ಟ ಮಾಹಿತಿ ನೀಡದೆ ತಪ್ಪಿಸಿಕೊಳ್ಳುತಿದ್ದಾರೆ. ಇವರ ಈ ನಡೆ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ದಿನಾಂಕ 21/08/2023 ರಂದು ಬಸವರಾಜ ತಿಪ್ಪಣ್ಣ ಬುದನೂರು ಎಂಬುವವರಿಗೆ 50,000 ರೂ ಗಳ ಮತ್ತೊಂದು ಬಿಲ್ಲನ್ನು ಹಾಕಿದ್ದು ಆ ಬಿಲ್ಲಿನ ವಿವರಣೆಯಲ್ಲಿಯು ಸಹ ಪ್ರಶ್ನಾರ್ಥಕ ಚಿನ್ಹೆಗಳು ಕಂಡು ಬಂದಿವೆ. ಪಿಡಿಓ ಮುತ್ತಣ್ಣ ಡೋಣಿ ಸರಿಯಾಗಿ ಪಂಚಾಯತಿಗೆ ಬರುವುದಿಲ್ಲ ಎಂಬ ಆರೋಪವು ಸಹ ಕೇಳಿಬರುತ್ತಿದೆ. ಗ್ರಾಮ ಅಭಿವೃದ್ದಿ ಆಗದ ಕಾರಣ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿರಬಹುದು ಎಂದು ಜನರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಈ ವ್ಯಕ್ತಿ ಕಾರ್ಯ ನಿರ್ವಹಿಸುತ್ತಿರುವ ಒಂದು ಪಂಚಾಯತಿ ಯಲ್ಲಿ ಇಷ್ಟೊಂದು ಆರೋಪಗಳು ಕೇಳಿಬರುತ್ತಿದ್ದು.ಇಂತವರನ್ನೆ ಎರೆಡೆರಡು ಪಂಚಾಯತಿಗೆ ನೇಮಕ ಮಾಡಿರುತ್ತಾರೆ.
ಒಂದೇ ಕೆಲಸ ಮಾಡದ ಸೊಂಬೇರಿಗೆ ಎರಡೆರಡು ಕೆಲಸವನ್ನು ವಹಿಸಿದಂತಾಗಿದೆ ಇಲ್ಲಿನ ಗ್ರಾಮ ಪಂಚಾಯಿತಿ ಪರಿಸ್ಥಿತಿ. ಈತನಿಗೆ ವಹಿಸಿದ ಒಂದು ಪಂಚಾಯತಿ ನಾಯನೆಗಲಿ ಆದರೆ ಮತ್ತೊಂದು ಚಿಕ್ಕ ಮ್ಯಾಗೇರಿ.
ಈ ಎರಡು ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಅಭಿವೃದ್ದಿ ಕುಂಠಿತಗೊಂಡಲ್ಲಿ ಅದಕ್ಕೆ ಮೂಲ ಕಾರಣ ಈತನೇ ಎಂದರು ತಪ್ಪಾಗಲಾರದು.
ಸರ್ಕಾರದಲ್ಲಿ ಸಿಬ್ಬಂದಿಗಳ ಕೊರತೆ ಇದ್ದಲ್ಲಿ ಯೋಗ್ಯತೆ ಇರುವವರನ್ನು ಬಳಸಿಕೊಂಡು ಎರಡೆರಡು ಪಂಚಾಯತಿಗೆ ನೇಮಕ ಮಾಡಿಕೊಳ್ಳಬೇಕು, ಅದನ್ನು ಬಿಟ್ಟು ಇಂತವರಿಗೆ ಕೆಲಸ ವಹಿಸಿದರೆ ಗ್ರಾಮದ ಅಭಿವೃದ್ಧಿ ಹೇಗೆ ತಾನೇ ಆಗುತ್ತದೆ.
ಸರಿಯಾಗಿ ಕಾರ್ಯ ನಿರ್ವಹಿಸದ ವ್ಯಕ್ತಿಗೆ ಎರಡೆರಡು ಪಂಚಾಯತಿಗೆ ನೇಮಕ ಮಾಡುವ ಮೂಲಕ ಇ.ಓ ರವರು ಎಡವಿದ್ದಾರಾ? ಅಥವಾ ಇದರ ಹಿಂದೆ ಯಾವುದಾದರೂ ದುರುದ್ದೇಶವಿದೆಯಾ?
ಜಿಲ್ಲಾ ಪಂಚಾಯತಿ ಸಿ.ಇ.ಓ ರವರು ಈ ವಿಚಾರದ ಬಗ್ಗೆ ಆದಷ್ಟು ಬೇಗ ಗಮನ ಹರಿಸಿ ಸೂಕ್ತ ಕ್ರಮಕ್ಕೆ ಮುಂದಾಗುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಒತ್ತು ಕೊಡಬೇಕಿದೆ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

19 minutes ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 day ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 day ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

1 day ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago