Latest

ಕಛೇರಿಗೇ ಬಾರದ ಪಿಡಿಓ ಮುತ್ತಣ್ಣ ಡೋಣಿಗೆ ಎರಡೆರಡು ಪಂಚಾಯತಿ ಬೇಕಿತ್ತಾ?

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ನಾಯನೆಗಲಿ ಗ್ರಾಮ ಪಂಚಾಯತಿಯಲ್ಲಿನ ಭ್ರಷ್ಟಾಚಾರದ ಪುರಾಣ ಕಥೆ. ಗ್ರಾಮ ಪಂಚಾಯಿತಿ 15 ನೇಯ ಹಣಕಾಸಿನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಪಂಚಾಯತಿಯ ವೆಬ್ಸೈಟ್ ನಲ್ಲಿ ಹಾಕಿರುವಂತಹ ಬಿಲ್ಲುಗಳು ಸಾಕ್ಷಿಯಾಗಿವೆ.
ದಿನಾಂಕ 26/06/2023 ರಂದು ತೆಗೆದ ಬಿಲ್ ವೋಚರಗಳು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದಾವೆ.
ಏಕೆಂದರೆ ಆ ದಿನ ಅಮೋಘ ಏಜೆನ್ಸಿ ಇಳಕಲ್ ರವರಿಗೆ 1)43,669 2)69,258 3)48,095 4)64,758 5)46,386 ಈ ಐದು ಬಿಲ್ಲುಗಳನ್ನು ಹಾಕಿದ್ದು,
ಅದರಲ್ಲಿ ಸರಿಯಾದ ಮಾಹಿತಿ ಇಲ್ಲದೇ ಪ್ರಶ್ನಾರ್ಥಕ(?) ಚಿನ್ಹೆಗಳು ಎದ್ದು ಕಾಣುತ್ತಿವೆ.
ಪ್ರಶ್ನಾರ್ಥಕ ಚಿಹ್ನೆಗಳು ಹಣ ಹೊಡೆಯಲು ಹಾಕುತಿದ್ದಾರೋ?ಅಥವಾ ತಾಂತ್ರಿಕ ದೋಷದಿಂದ ಈ ರೀತಿ ಆಗುತ್ತಿದೆಯೋ?
ಇದಕ್ಕೆ ಉತ್ತರ ಪಿಡಿಓ ರವರೆ ನೀಡಬೇಕಿದೆ.
ಮಾಹಿತಿ ಕೇಳಲು ಸಂಪರ್ಕಿಸಿದಾಗ ಸ್ಪಷ್ಟ ಮಾಹಿತಿ ನೀಡದೆ ತಪ್ಪಿಸಿಕೊಳ್ಳುತಿದ್ದಾರೆ. ಇವರ ಈ ನಡೆ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ದಿನಾಂಕ 21/08/2023 ರಂದು ಬಸವರಾಜ ತಿಪ್ಪಣ್ಣ ಬುದನೂರು ಎಂಬುವವರಿಗೆ 50,000 ರೂ ಗಳ ಮತ್ತೊಂದು ಬಿಲ್ಲನ್ನು ಹಾಕಿದ್ದು ಆ ಬಿಲ್ಲಿನ ವಿವರಣೆಯಲ್ಲಿಯು ಸಹ ಪ್ರಶ್ನಾರ್ಥಕ ಚಿನ್ಹೆಗಳು ಕಂಡು ಬಂದಿವೆ. ಪಿಡಿಓ ಮುತ್ತಣ್ಣ ಡೋಣಿ ಸರಿಯಾಗಿ ಪಂಚಾಯತಿಗೆ ಬರುವುದಿಲ್ಲ ಎಂಬ ಆರೋಪವು ಸಹ ಕೇಳಿಬರುತ್ತಿದೆ. ಗ್ರಾಮ ಅಭಿವೃದ್ದಿ ಆಗದ ಕಾರಣ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿರಬಹುದು ಎಂದು ಜನರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಈ ವ್ಯಕ್ತಿ ಕಾರ್ಯ ನಿರ್ವಹಿಸುತ್ತಿರುವ ಒಂದು ಪಂಚಾಯತಿ ಯಲ್ಲಿ ಇಷ್ಟೊಂದು ಆರೋಪಗಳು ಕೇಳಿಬರುತ್ತಿದ್ದು.ಇಂತವರನ್ನೆ ಎರೆಡೆರಡು ಪಂಚಾಯತಿಗೆ ನೇಮಕ ಮಾಡಿರುತ್ತಾರೆ.
ಒಂದೇ ಕೆಲಸ ಮಾಡದ ಸೊಂಬೇರಿಗೆ ಎರಡೆರಡು ಕೆಲಸವನ್ನು ವಹಿಸಿದಂತಾಗಿದೆ ಇಲ್ಲಿನ ಗ್ರಾಮ ಪಂಚಾಯಿತಿ ಪರಿಸ್ಥಿತಿ. ಈತನಿಗೆ ವಹಿಸಿದ ಒಂದು ಪಂಚಾಯತಿ ನಾಯನೆಗಲಿ ಆದರೆ ಮತ್ತೊಂದು ಚಿಕ್ಕ ಮ್ಯಾಗೇರಿ.
ಈ ಎರಡು ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಅಭಿವೃದ್ದಿ ಕುಂಠಿತಗೊಂಡಲ್ಲಿ ಅದಕ್ಕೆ ಮೂಲ ಕಾರಣ ಈತನೇ ಎಂದರು ತಪ್ಪಾಗಲಾರದು.
ಸರ್ಕಾರದಲ್ಲಿ ಸಿಬ್ಬಂದಿಗಳ ಕೊರತೆ ಇದ್ದಲ್ಲಿ ಯೋಗ್ಯತೆ ಇರುವವರನ್ನು ಬಳಸಿಕೊಂಡು ಎರಡೆರಡು ಪಂಚಾಯತಿಗೆ ನೇಮಕ ಮಾಡಿಕೊಳ್ಳಬೇಕು, ಅದನ್ನು ಬಿಟ್ಟು ಇಂತವರಿಗೆ ಕೆಲಸ ವಹಿಸಿದರೆ ಗ್ರಾಮದ ಅಭಿವೃದ್ಧಿ ಹೇಗೆ ತಾನೇ ಆಗುತ್ತದೆ.
ಸರಿಯಾಗಿ ಕಾರ್ಯ ನಿರ್ವಹಿಸದ ವ್ಯಕ್ತಿಗೆ ಎರಡೆರಡು ಪಂಚಾಯತಿಗೆ ನೇಮಕ ಮಾಡುವ ಮೂಲಕ ಇ.ಓ ರವರು ಎಡವಿದ್ದಾರಾ? ಅಥವಾ ಇದರ ಹಿಂದೆ ಯಾವುದಾದರೂ ದುರುದ್ದೇಶವಿದೆಯಾ?
ಜಿಲ್ಲಾ ಪಂಚಾಯತಿ ಸಿ.ಇ.ಓ ರವರು ಈ ವಿಚಾರದ ಬಗ್ಗೆ ಆದಷ್ಟು ಬೇಗ ಗಮನ ಹರಿಸಿ ಸೂಕ್ತ ಕ್ರಮಕ್ಕೆ ಮುಂದಾಗುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಒತ್ತು ಕೊಡಬೇಕಿದೆ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago