Latest

ಕಛೇರಿಗೇ ಬಾರದ ಪಿಡಿಓ ಮುತ್ತಣ್ಣ ಡೋಣಿಗೆ ಎರಡೆರಡು ಪಂಚಾಯತಿ ಬೇಕಿತ್ತಾ?

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ನಾಯನೆಗಲಿ ಗ್ರಾಮ ಪಂಚಾಯತಿಯಲ್ಲಿನ ಭ್ರಷ್ಟಾಚಾರದ ಪುರಾಣ ಕಥೆ. ಗ್ರಾಮ ಪಂಚಾಯಿತಿ 15 ನೇಯ ಹಣಕಾಸಿನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಪಂಚಾಯತಿಯ ವೆಬ್ಸೈಟ್ ನಲ್ಲಿ ಹಾಕಿರುವಂತಹ ಬಿಲ್ಲುಗಳು ಸಾಕ್ಷಿಯಾಗಿವೆ.
ದಿನಾಂಕ 26/06/2023 ರಂದು ತೆಗೆದ ಬಿಲ್ ವೋಚರಗಳು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದಾವೆ.
ಏಕೆಂದರೆ ಆ ದಿನ ಅಮೋಘ ಏಜೆನ್ಸಿ ಇಳಕಲ್ ರವರಿಗೆ 1)43,669 2)69,258 3)48,095 4)64,758 5)46,386 ಈ ಐದು ಬಿಲ್ಲುಗಳನ್ನು ಹಾಕಿದ್ದು,
ಅದರಲ್ಲಿ ಸರಿಯಾದ ಮಾಹಿತಿ ಇಲ್ಲದೇ ಪ್ರಶ್ನಾರ್ಥಕ(?) ಚಿನ್ಹೆಗಳು ಎದ್ದು ಕಾಣುತ್ತಿವೆ.
ಪ್ರಶ್ನಾರ್ಥಕ ಚಿಹ್ನೆಗಳು ಹಣ ಹೊಡೆಯಲು ಹಾಕುತಿದ್ದಾರೋ?ಅಥವಾ ತಾಂತ್ರಿಕ ದೋಷದಿಂದ ಈ ರೀತಿ ಆಗುತ್ತಿದೆಯೋ?
ಇದಕ್ಕೆ ಉತ್ತರ ಪಿಡಿಓ ರವರೆ ನೀಡಬೇಕಿದೆ.
ಮಾಹಿತಿ ಕೇಳಲು ಸಂಪರ್ಕಿಸಿದಾಗ ಸ್ಪಷ್ಟ ಮಾಹಿತಿ ನೀಡದೆ ತಪ್ಪಿಸಿಕೊಳ್ಳುತಿದ್ದಾರೆ. ಇವರ ಈ ನಡೆ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ದಿನಾಂಕ 21/08/2023 ರಂದು ಬಸವರಾಜ ತಿಪ್ಪಣ್ಣ ಬುದನೂರು ಎಂಬುವವರಿಗೆ 50,000 ರೂ ಗಳ ಮತ್ತೊಂದು ಬಿಲ್ಲನ್ನು ಹಾಕಿದ್ದು ಆ ಬಿಲ್ಲಿನ ವಿವರಣೆಯಲ್ಲಿಯು ಸಹ ಪ್ರಶ್ನಾರ್ಥಕ ಚಿನ್ಹೆಗಳು ಕಂಡು ಬಂದಿವೆ. ಪಿಡಿಓ ಮುತ್ತಣ್ಣ ಡೋಣಿ ಸರಿಯಾಗಿ ಪಂಚಾಯತಿಗೆ ಬರುವುದಿಲ್ಲ ಎಂಬ ಆರೋಪವು ಸಹ ಕೇಳಿಬರುತ್ತಿದೆ. ಗ್ರಾಮ ಅಭಿವೃದ್ದಿ ಆಗದ ಕಾರಣ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿರಬಹುದು ಎಂದು ಜನರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಈ ವ್ಯಕ್ತಿ ಕಾರ್ಯ ನಿರ್ವಹಿಸುತ್ತಿರುವ ಒಂದು ಪಂಚಾಯತಿ ಯಲ್ಲಿ ಇಷ್ಟೊಂದು ಆರೋಪಗಳು ಕೇಳಿಬರುತ್ತಿದ್ದು.ಇಂತವರನ್ನೆ ಎರೆಡೆರಡು ಪಂಚಾಯತಿಗೆ ನೇಮಕ ಮಾಡಿರುತ್ತಾರೆ.
ಒಂದೇ ಕೆಲಸ ಮಾಡದ ಸೊಂಬೇರಿಗೆ ಎರಡೆರಡು ಕೆಲಸವನ್ನು ವಹಿಸಿದಂತಾಗಿದೆ ಇಲ್ಲಿನ ಗ್ರಾಮ ಪಂಚಾಯಿತಿ ಪರಿಸ್ಥಿತಿ. ಈತನಿಗೆ ವಹಿಸಿದ ಒಂದು ಪಂಚಾಯತಿ ನಾಯನೆಗಲಿ ಆದರೆ ಮತ್ತೊಂದು ಚಿಕ್ಕ ಮ್ಯಾಗೇರಿ.
ಈ ಎರಡು ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಅಭಿವೃದ್ದಿ ಕುಂಠಿತಗೊಂಡಲ್ಲಿ ಅದಕ್ಕೆ ಮೂಲ ಕಾರಣ ಈತನೇ ಎಂದರು ತಪ್ಪಾಗಲಾರದು.
ಸರ್ಕಾರದಲ್ಲಿ ಸಿಬ್ಬಂದಿಗಳ ಕೊರತೆ ಇದ್ದಲ್ಲಿ ಯೋಗ್ಯತೆ ಇರುವವರನ್ನು ಬಳಸಿಕೊಂಡು ಎರಡೆರಡು ಪಂಚಾಯತಿಗೆ ನೇಮಕ ಮಾಡಿಕೊಳ್ಳಬೇಕು, ಅದನ್ನು ಬಿಟ್ಟು ಇಂತವರಿಗೆ ಕೆಲಸ ವಹಿಸಿದರೆ ಗ್ರಾಮದ ಅಭಿವೃದ್ಧಿ ಹೇಗೆ ತಾನೇ ಆಗುತ್ತದೆ.
ಸರಿಯಾಗಿ ಕಾರ್ಯ ನಿರ್ವಹಿಸದ ವ್ಯಕ್ತಿಗೆ ಎರಡೆರಡು ಪಂಚಾಯತಿಗೆ ನೇಮಕ ಮಾಡುವ ಮೂಲಕ ಇ.ಓ ರವರು ಎಡವಿದ್ದಾರಾ? ಅಥವಾ ಇದರ ಹಿಂದೆ ಯಾವುದಾದರೂ ದುರುದ್ದೇಶವಿದೆಯಾ?
ಜಿಲ್ಲಾ ಪಂಚಾಯತಿ ಸಿ.ಇ.ಓ ರವರು ಈ ವಿಚಾರದ ಬಗ್ಗೆ ಆದಷ್ಟು ಬೇಗ ಗಮನ ಹರಿಸಿ ಸೂಕ್ತ ಕ್ರಮಕ್ಕೆ ಮುಂದಾಗುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಒತ್ತು ಕೊಡಬೇಕಿದೆ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

1 day ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

1 day ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

1 day ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

1 day ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

2 days ago