Latest

ಕಛೇರಿಗೇ ಬಾರದ ಪಿಡಿಓ ಮುತ್ತಣ್ಣ ಡೋಣಿಗೆ ಎರಡೆರಡು ಪಂಚಾಯತಿ ಬೇಕಿತ್ತಾ?

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ನಾಯನೆಗಲಿ ಗ್ರಾಮ ಪಂಚಾಯತಿಯಲ್ಲಿನ ಭ್ರಷ್ಟಾಚಾರದ ಪುರಾಣ ಕಥೆ. ಗ್ರಾಮ ಪಂಚಾಯಿತಿ 15 ನೇಯ ಹಣಕಾಸಿನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಪಂಚಾಯತಿಯ ವೆಬ್ಸೈಟ್ ನಲ್ಲಿ ಹಾಕಿರುವಂತಹ ಬಿಲ್ಲುಗಳು ಸಾಕ್ಷಿಯಾಗಿವೆ.
ದಿನಾಂಕ 26/06/2023 ರಂದು ತೆಗೆದ ಬಿಲ್ ವೋಚರಗಳು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದಾವೆ.
ಏಕೆಂದರೆ ಆ ದಿನ ಅಮೋಘ ಏಜೆನ್ಸಿ ಇಳಕಲ್ ರವರಿಗೆ 1)43,669 2)69,258 3)48,095 4)64,758 5)46,386 ಈ ಐದು ಬಿಲ್ಲುಗಳನ್ನು ಹಾಕಿದ್ದು,
ಅದರಲ್ಲಿ ಸರಿಯಾದ ಮಾಹಿತಿ ಇಲ್ಲದೇ ಪ್ರಶ್ನಾರ್ಥಕ(?) ಚಿನ್ಹೆಗಳು ಎದ್ದು ಕಾಣುತ್ತಿವೆ.
ಪ್ರಶ್ನಾರ್ಥಕ ಚಿಹ್ನೆಗಳು ಹಣ ಹೊಡೆಯಲು ಹಾಕುತಿದ್ದಾರೋ?ಅಥವಾ ತಾಂತ್ರಿಕ ದೋಷದಿಂದ ಈ ರೀತಿ ಆಗುತ್ತಿದೆಯೋ?
ಇದಕ್ಕೆ ಉತ್ತರ ಪಿಡಿಓ ರವರೆ ನೀಡಬೇಕಿದೆ.
ಮಾಹಿತಿ ಕೇಳಲು ಸಂಪರ್ಕಿಸಿದಾಗ ಸ್ಪಷ್ಟ ಮಾಹಿತಿ ನೀಡದೆ ತಪ್ಪಿಸಿಕೊಳ್ಳುತಿದ್ದಾರೆ. ಇವರ ಈ ನಡೆ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ದಿನಾಂಕ 21/08/2023 ರಂದು ಬಸವರಾಜ ತಿಪ್ಪಣ್ಣ ಬುದನೂರು ಎಂಬುವವರಿಗೆ 50,000 ರೂ ಗಳ ಮತ್ತೊಂದು ಬಿಲ್ಲನ್ನು ಹಾಕಿದ್ದು ಆ ಬಿಲ್ಲಿನ ವಿವರಣೆಯಲ್ಲಿಯು ಸಹ ಪ್ರಶ್ನಾರ್ಥಕ ಚಿನ್ಹೆಗಳು ಕಂಡು ಬಂದಿವೆ. ಪಿಡಿಓ ಮುತ್ತಣ್ಣ ಡೋಣಿ ಸರಿಯಾಗಿ ಪಂಚಾಯತಿಗೆ ಬರುವುದಿಲ್ಲ ಎಂಬ ಆರೋಪವು ಸಹ ಕೇಳಿಬರುತ್ತಿದೆ. ಗ್ರಾಮ ಅಭಿವೃದ್ದಿ ಆಗದ ಕಾರಣ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿರಬಹುದು ಎಂದು ಜನರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಈ ವ್ಯಕ್ತಿ ಕಾರ್ಯ ನಿರ್ವಹಿಸುತ್ತಿರುವ ಒಂದು ಪಂಚಾಯತಿ ಯಲ್ಲಿ ಇಷ್ಟೊಂದು ಆರೋಪಗಳು ಕೇಳಿಬರುತ್ತಿದ್ದು.ಇಂತವರನ್ನೆ ಎರೆಡೆರಡು ಪಂಚಾಯತಿಗೆ ನೇಮಕ ಮಾಡಿರುತ್ತಾರೆ.
ಒಂದೇ ಕೆಲಸ ಮಾಡದ ಸೊಂಬೇರಿಗೆ ಎರಡೆರಡು ಕೆಲಸವನ್ನು ವಹಿಸಿದಂತಾಗಿದೆ ಇಲ್ಲಿನ ಗ್ರಾಮ ಪಂಚಾಯಿತಿ ಪರಿಸ್ಥಿತಿ. ಈತನಿಗೆ ವಹಿಸಿದ ಒಂದು ಪಂಚಾಯತಿ ನಾಯನೆಗಲಿ ಆದರೆ ಮತ್ತೊಂದು ಚಿಕ್ಕ ಮ್ಯಾಗೇರಿ.
ಈ ಎರಡು ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಅಭಿವೃದ್ದಿ ಕುಂಠಿತಗೊಂಡಲ್ಲಿ ಅದಕ್ಕೆ ಮೂಲ ಕಾರಣ ಈತನೇ ಎಂದರು ತಪ್ಪಾಗಲಾರದು.
ಸರ್ಕಾರದಲ್ಲಿ ಸಿಬ್ಬಂದಿಗಳ ಕೊರತೆ ಇದ್ದಲ್ಲಿ ಯೋಗ್ಯತೆ ಇರುವವರನ್ನು ಬಳಸಿಕೊಂಡು ಎರಡೆರಡು ಪಂಚಾಯತಿಗೆ ನೇಮಕ ಮಾಡಿಕೊಳ್ಳಬೇಕು, ಅದನ್ನು ಬಿಟ್ಟು ಇಂತವರಿಗೆ ಕೆಲಸ ವಹಿಸಿದರೆ ಗ್ರಾಮದ ಅಭಿವೃದ್ಧಿ ಹೇಗೆ ತಾನೇ ಆಗುತ್ತದೆ.
ಸರಿಯಾಗಿ ಕಾರ್ಯ ನಿರ್ವಹಿಸದ ವ್ಯಕ್ತಿಗೆ ಎರಡೆರಡು ಪಂಚಾಯತಿಗೆ ನೇಮಕ ಮಾಡುವ ಮೂಲಕ ಇ.ಓ ರವರು ಎಡವಿದ್ದಾರಾ? ಅಥವಾ ಇದರ ಹಿಂದೆ ಯಾವುದಾದರೂ ದುರುದ್ದೇಶವಿದೆಯಾ?
ಜಿಲ್ಲಾ ಪಂಚಾಯತಿ ಸಿ.ಇ.ಓ ರವರು ಈ ವಿಚಾರದ ಬಗ್ಗೆ ಆದಷ್ಟು ಬೇಗ ಗಮನ ಹರಿಸಿ ಸೂಕ್ತ ಕ್ರಮಕ್ಕೆ ಮುಂದಾಗುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಒತ್ತು ಕೊಡಬೇಕಿದೆ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಮದುವೆ ಹೆಸರಿನಲ್ಲಿ ₹10 ಕೋಟಿ ವಂಚನೆ ಆರೋಪ: ಬಿಗ್‌ಬಾಸ್ ಖ್ಯಾತಿಯ ಆಶು ರೆಡ್ಡಿ ವಿರುದ್ಧ ಪ್ರಕರಣ

ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್‌ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…

19 hours ago

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪೊಲೀಸರಿಂದ ‘ಹಣದ ಬೇಡಿಕೆ, ಕಿರುಕುಳ’ ಆರೋಪ..!

ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ…

19 hours ago

ಶೇಕ್‌ಪೇಟ್‌ನಲ್ಲಿ ಪಶು ಆಸ್ಪತ್ರೆಯ ಹೆಸರಿನಲ್ಲಿ ಕ್ರೂರ ದಂಧೆ: ಬೀದಿ ನಾಯಿಗಳ ರಕ್ತ ಮಾರಾಟ, ಭಾರೀ ಹಣ ವಸೂಲಿ!

ಶೇಕ್‌ಪೇಟ್: ಪಶುಗಳ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದ್ದ ಅಮಾನವೀಯ ದಂಧೆಯೊಂದು ಬೆಳಕಿಗೆ ಬಂದು ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಖಾಸಗಿ ಪಶು ವೈದ್ಯಕೀಯ…

19 hours ago

ಧಾರವಾಡದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ‘ಕೇಸ್ ಹಾಕುತ್ತೇವೆ’ ಎನ್ನುವ ಭಯದಿಂದ ಜೀವತ್ಯಾಗ? ಪೊಲೀಸರ ವಿರುದ್ಧ ಆರೋಪ

ಧಾರವಾಡ: ಗಾಂಜಾ ಪ್ರಕರಣದಲ್ಲಿ ಹೆಸರು ಸೇರಿಸಲಾಗುತ್ತದೆ ಎಂಬ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ…

20 hours ago

ಕೋರಮಂಗಲದಲ್ಲಿ ಸಿಸಿಬಿ ದಾಳಿ: ಸಾರ್ವಜನಿಕವಾಗಿ ವೇಶ್ಯಾವಾಟಿಕೆ, ರಸ್ತೆಯಲ್ಲಿ ನಿಂತ ಪುರುಷರನ್ನು ಕರೆಯುತ್ತಿದ್ದ ಆರು ವಿದೇಶಿ ಮಹಿಳೆಯರು ವಶಕ್ಕೆ

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಆರು ವಿದೇಶಿ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ…

20 hours ago

ಕಾಂಗ್ರೆಸ್ಗೆ ಅಹಿಂದ ಎಚ್ಚರಿಕೆ: ‘2028ಕ್ಕೆ ಹೊಸ ಪಕ್ಷ’ ಬೆದರಿಕೆ, ದಲಿತ ಸಿಎಂ ಆಗ್ರಹ

ಬೆಂಗಳೂರು: ರಾಜ್ಯ ಕಾಂಗ್ರೆಸ್ನೊಳಗಿನ ನಾಯಕತ್ವದ ಗೊಂದಲ ಮತ್ತು ಅಸಮಾಧಾನದ ನಡುವೆಯೇ ಅಹಿಂದ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಅಹಿಂದ…

20 hours ago