Latest

ಕಛೇರಿಗೇ ಬಾರದ ಪಿಡಿಓ ಮುತ್ತಣ್ಣ ಡೋಣಿಗೆ ಎರಡೆರಡು ಪಂಚಾಯತಿ ಬೇಕಿತ್ತಾ?

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ನಾಯನೆಗಲಿ ಗ್ರಾಮ ಪಂಚಾಯತಿಯಲ್ಲಿನ ಭ್ರಷ್ಟಾಚಾರದ ಪುರಾಣ ಕಥೆ. ಗ್ರಾಮ ಪಂಚಾಯಿತಿ 15 ನೇಯ ಹಣಕಾಸಿನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಪಂಚಾಯತಿಯ ವೆಬ್ಸೈಟ್ ನಲ್ಲಿ ಹಾಕಿರುವಂತಹ ಬಿಲ್ಲುಗಳು ಸಾಕ್ಷಿಯಾಗಿವೆ.
ದಿನಾಂಕ 26/06/2023 ರಂದು ತೆಗೆದ ಬಿಲ್ ವೋಚರಗಳು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದಾವೆ.
ಏಕೆಂದರೆ ಆ ದಿನ ಅಮೋಘ ಏಜೆನ್ಸಿ ಇಳಕಲ್ ರವರಿಗೆ 1)43,669 2)69,258 3)48,095 4)64,758 5)46,386 ಈ ಐದು ಬಿಲ್ಲುಗಳನ್ನು ಹಾಕಿದ್ದು,
ಅದರಲ್ಲಿ ಸರಿಯಾದ ಮಾಹಿತಿ ಇಲ್ಲದೇ ಪ್ರಶ್ನಾರ್ಥಕ(?) ಚಿನ್ಹೆಗಳು ಎದ್ದು ಕಾಣುತ್ತಿವೆ.
ಪ್ರಶ್ನಾರ್ಥಕ ಚಿಹ್ನೆಗಳು ಹಣ ಹೊಡೆಯಲು ಹಾಕುತಿದ್ದಾರೋ?ಅಥವಾ ತಾಂತ್ರಿಕ ದೋಷದಿಂದ ಈ ರೀತಿ ಆಗುತ್ತಿದೆಯೋ?
ಇದಕ್ಕೆ ಉತ್ತರ ಪಿಡಿಓ ರವರೆ ನೀಡಬೇಕಿದೆ.
ಮಾಹಿತಿ ಕೇಳಲು ಸಂಪರ್ಕಿಸಿದಾಗ ಸ್ಪಷ್ಟ ಮಾಹಿತಿ ನೀಡದೆ ತಪ್ಪಿಸಿಕೊಳ್ಳುತಿದ್ದಾರೆ. ಇವರ ಈ ನಡೆ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ದಿನಾಂಕ 21/08/2023 ರಂದು ಬಸವರಾಜ ತಿಪ್ಪಣ್ಣ ಬುದನೂರು ಎಂಬುವವರಿಗೆ 50,000 ರೂ ಗಳ ಮತ್ತೊಂದು ಬಿಲ್ಲನ್ನು ಹಾಕಿದ್ದು ಆ ಬಿಲ್ಲಿನ ವಿವರಣೆಯಲ್ಲಿಯು ಸಹ ಪ್ರಶ್ನಾರ್ಥಕ ಚಿನ್ಹೆಗಳು ಕಂಡು ಬಂದಿವೆ. ಪಿಡಿಓ ಮುತ್ತಣ್ಣ ಡೋಣಿ ಸರಿಯಾಗಿ ಪಂಚಾಯತಿಗೆ ಬರುವುದಿಲ್ಲ ಎಂಬ ಆರೋಪವು ಸಹ ಕೇಳಿಬರುತ್ತಿದೆ. ಗ್ರಾಮ ಅಭಿವೃದ್ದಿ ಆಗದ ಕಾರಣ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿರಬಹುದು ಎಂದು ಜನರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಈ ವ್ಯಕ್ತಿ ಕಾರ್ಯ ನಿರ್ವಹಿಸುತ್ತಿರುವ ಒಂದು ಪಂಚಾಯತಿ ಯಲ್ಲಿ ಇಷ್ಟೊಂದು ಆರೋಪಗಳು ಕೇಳಿಬರುತ್ತಿದ್ದು.ಇಂತವರನ್ನೆ ಎರೆಡೆರಡು ಪಂಚಾಯತಿಗೆ ನೇಮಕ ಮಾಡಿರುತ್ತಾರೆ.
ಒಂದೇ ಕೆಲಸ ಮಾಡದ ಸೊಂಬೇರಿಗೆ ಎರಡೆರಡು ಕೆಲಸವನ್ನು ವಹಿಸಿದಂತಾಗಿದೆ ಇಲ್ಲಿನ ಗ್ರಾಮ ಪಂಚಾಯಿತಿ ಪರಿಸ್ಥಿತಿ. ಈತನಿಗೆ ವಹಿಸಿದ ಒಂದು ಪಂಚಾಯತಿ ನಾಯನೆಗಲಿ ಆದರೆ ಮತ್ತೊಂದು ಚಿಕ್ಕ ಮ್ಯಾಗೇರಿ.
ಈ ಎರಡು ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಅಭಿವೃದ್ದಿ ಕುಂಠಿತಗೊಂಡಲ್ಲಿ ಅದಕ್ಕೆ ಮೂಲ ಕಾರಣ ಈತನೇ ಎಂದರು ತಪ್ಪಾಗಲಾರದು.
ಸರ್ಕಾರದಲ್ಲಿ ಸಿಬ್ಬಂದಿಗಳ ಕೊರತೆ ಇದ್ದಲ್ಲಿ ಯೋಗ್ಯತೆ ಇರುವವರನ್ನು ಬಳಸಿಕೊಂಡು ಎರಡೆರಡು ಪಂಚಾಯತಿಗೆ ನೇಮಕ ಮಾಡಿಕೊಳ್ಳಬೇಕು, ಅದನ್ನು ಬಿಟ್ಟು ಇಂತವರಿಗೆ ಕೆಲಸ ವಹಿಸಿದರೆ ಗ್ರಾಮದ ಅಭಿವೃದ್ಧಿ ಹೇಗೆ ತಾನೇ ಆಗುತ್ತದೆ.
ಸರಿಯಾಗಿ ಕಾರ್ಯ ನಿರ್ವಹಿಸದ ವ್ಯಕ್ತಿಗೆ ಎರಡೆರಡು ಪಂಚಾಯತಿಗೆ ನೇಮಕ ಮಾಡುವ ಮೂಲಕ ಇ.ಓ ರವರು ಎಡವಿದ್ದಾರಾ? ಅಥವಾ ಇದರ ಹಿಂದೆ ಯಾವುದಾದರೂ ದುರುದ್ದೇಶವಿದೆಯಾ?
ಜಿಲ್ಲಾ ಪಂಚಾಯತಿ ಸಿ.ಇ.ಓ ರವರು ಈ ವಿಚಾರದ ಬಗ್ಗೆ ಆದಷ್ಟು ಬೇಗ ಗಮನ ಹರಿಸಿ ಸೂಕ್ತ ಕ್ರಮಕ್ಕೆ ಮುಂದಾಗುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಒತ್ತು ಕೊಡಬೇಕಿದೆ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

15 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

20 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

20 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

20 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

20 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

20 hours ago