ಚಿಕ್ಕಬಳ್ಳಾಪುರ ಜಿಲ್ಲೆಯ ರಾಶ್ಚೆರುವು ಗ್ರಾಮದಲ್ಲಿ ಪಿಡಿಓ ಹಾಗೂ ಇತರ ಸದಸ್ಯರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯತಿ ಅಧ್ಯಕ್ಷೆಯೊಬ್ಬರಿಗೆ ಪಿಡಿಓ ಅಶೋಕ್ ಅಶ್ಲೀಲ ಮೆಸೇಜ್ ಕಳುಹಿಸಿ “ನಾನು ನಿನ್ನ ಪ್ರೀತಿಸುತ್ತೇನೆ” ಎಂದು ಸಂದೇಶ ರವಾನಿಸಿರುವುದಾಗಿ ಆರೋಪ ಕೇಳಿ ಬಂದಿದೆ.
ಅಧ್ಯಕ್ಷೆಯೂ ಪಿಡಿಓ ಅಶೋಕ್ಗೂ ವಿವಾಹಿತರಾಗಿದ್ದು, ಇದರ ನಡುವೆಯೂ ಈ ರೀತಿಯ ಸಂದೇಶ ಕಳುಹಿಸಿದ್ದು ಅಧ್ಯಕ್ಷೆಯಲ್ಲಿ ಆಕ್ರೋಶ ಉಂಟುಮಾಡಿದೆ. ಅಶ್ಲೀಲ ಮೆಸೇಜ್ ಪ್ರಕರಣದ ಜೊತೆಗೆ ಇನ್ನೂ ಹಲವು ಆರೋಪಗಳು ಲಗ್ಗೆ ಇಟ್ಟಿವೆ.
ಅಧ್ಯಕ್ಷೆ ನೀಡಿರುವ ದೂರಿನಲ್ಲಿ, ಪಿಡಿಓ ಅಶೋಕ್ ಮತ್ತು ಮಾಜಿ ಅಧ್ಯಕ್ಷೆಯ ಪತಿ ಎ.ಎನ್. ಬಾಬು ರೆಡ್ಡಿ, ಹಾಲಿ ಸದಸ್ಯ ನಾಗೇಶ್ ಮತ್ತು ಮತ್ತೊಬ್ಬ ಭಾನು ಪ್ರಕಾಶ್ ಎಂಬವರು ಖಾಲಿ ಚೆಕ್ಗಳಿಗೆ ಸಹಿ ಹಾಕುವಂತೆ ಬಲವಂತ ಮಾಡಿರುವುದು, ಅವರ ವಿರುದ್ಧ ಜಾತಿ ನಿಂದನೆ ಮಾಡಿರುವುದೂ ಸೇರಿದೆ ಎಂದು ದೂರಲಾಗಿದೆ.
ಈ ಸಂಬಂಧ ಚೇಳೂರು ಪೊಲೀಸ್ ಠಾಣೆಯಲ್ಲಿ ಪಿಡಿಓ ಸೇರಿದಂತೆ ನಾಲ್ವರು ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.
ಮಂಗಳೂರು ನಗರದಲ್ಲಿ ಮರಳು ಕಳ್ಳ ಸಾಗಾಟದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣೆ ಪೊಲೀಸರು ನಡೆಸಿದ ತಪಾಸಣೆಯ ವೇಳೆ…
ಭಟ್ಕಳ, ಜುಲೈ 30 – ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಸಮೀಪದ ಸಮುದ್ರದಲ್ಲಿ ಭೀಕರ ದುರಂತ ಸಂಭವಿಸಿದ್ದು,…
ಸಕಲೇಶಪುರ (ಹಾಸನ ಜಿಲ್ಲೆ), ಜುಲೈ 30 – ಬೆಳಗೋಡು ಹೋಬಳಿಯ ಲಕ್ಮೀಪುರ ಗ್ರಾಮದಲ್ಲಿ ಪತ್ನಿಯ ಅಕ್ರಮ ಸಂಬಂಧ ಪತ್ತೆಹಚ್ಚಿದ ಪತಿಯ…
ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಶಾಲಾ ಶಿಕ್ಷಕಿಯೊಬ್ಬಳು ತನ್ನ ಅಪ್ರಾಪ್ತ ವಿದ್ಯಾರ್ಥಿಗೆ ಅರೆನಗ್ನವಾಗಿ ವಿಡಿಯೋ ಕಾಲ್ ಮಾಡಿರುವ ತೀವ್ರ ಆರೋಪದ ಮೇಲೆ…
ರಾಣೆಬೆನ್ನೂರು ತಾಲೂಕು ಮಾಕನೂರು ಗ್ರಾಮದ ಸಮೀಪದ ಲಾಟೇರ್ ಜಮೀನಿನ ಬಳಿ ನಿರ್ಮಾಣದಲ್ಲಿರುವ ಮನೆಯೊಂದರಲ್ಲಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರು ಸೋಮವಾರ ರಾತ್ರಿ…
ಬೆಂಗಳೂರು, ಜುಲೈ 30: ಹಿರಿಯ ನಟ ಹಾಗೂ ನಿರ್ದೇಶಕ ಎಸ್. ನಾರಾಯಣ ಅವರು ತಮ್ಮ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ…