Latest

ನಿಯಮ ಉಲ್ಲಂಘನೆ ಆರೋಪ: ಪಿಡಿಒ ಅಮಾನತು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಪುರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಬಿ.ಎಸ್. ಶುಭಲಕ್ಷ್ಮಿಯವರನ್ನು ಕರ್ತವ್ಯ ಲೋಪ ಮತ್ತು ಹಣ ದುರುಪಯೋಗ ಆರೋಪದ ಮೇಲೆ ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಸಂಬಂಧ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಎಸ್. ಕೀರ್ತನಾ ಅವರು ಆದೇಶ ಹೊರಡಿಸಿದ್ದಾರೆ.

ಶುಭಲಕ್ಷ್ಮಿಯವರು ಪ್ರಸ್ತುತ ಕುಂಕಾನಾಡು ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ವಿರುದ್ಧ ಕುಂಕಾನಾಡು ಗ್ರಾಮದ ಆರ್. ಮಂಜುನಾಥ್ ಎಂಬುವವರು ನೀಡಿದ್ದ ದೂರು ಅನ್ವಯ ತನಿಖೆ ಕೈಗೊಳ್ಳಲಾಗಿತ್ತು.

ತಕ್ಷಣದ ಹಿಂದೆ ಅವರು ಪುರ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ, 2023–24ನೇ ಸಾಲಿನಲ್ಲಿ ವರ್ಗ-1 ನಡವಳಿ ಖಾತೆಯಿಂದ ₹4.62 ಲಕ್ಷ ಮೊತ್ತವನ್ನು ನೀರುಗಂಟಿಗಳ ಖರೀದಿಗೆ ನಿಯಮ ಉಲ್ಲಂಘನೆಯಿಂದ ಚೆಕ್‌ ಮೂಲಕ ಪಾವತಿಸಿದ್ದಾಗಿ ಆರೋಪವಾಗಿದೆ. ಅಲ್ಲದೆ, ಚುನಾವಣಾ ವೆಚ್ಚದ ಹಣ ಪಾವತಿಸಿದರೂ ಅದರ ರಶೀದಿಗೆ ಸಹಿ ಪಡೆಯದೆ, ಖರೀದಿ ದಾಖಲಾತಿ, ಸಾಮಗ್ರಿಗಳ ಸಂಗ್ರಹ ಮತ್ತು ವಿತರಣೆ ದಾಖಲೆಯನ್ನೂ ಸೂಕ್ತವಾಗಿ ನಿರ್ವಹಿಸಿಲ್ಲ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.

ಈ ಎಲ್ಲಾ ಅನಿಯಮಿತತೆಗಳನ್ನು ಗಮನಿಸಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗೆ ವರದಿ ಸಲ್ಲಿಸಿದ್ದು, ಮುಂದಿನ ತನಿಖೆಗೆ ಪಿಡಿಒ ವಿರುದ್ಧ ಇಲಾಖೆ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ಅನ್ವಯ, ಬಿ.ಎಸ್. ಶುಭಲಕ್ಷ್ಮಿಯವರನ್ನು ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಳಿಸಿ ಕ್ರಮ ಜರುಗಿಸಲಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

18 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

18 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

18 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

18 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago