ಚಿತ್ತಾಪುರ ತಾಲ್ಲೂಕಿನ ಅಳ್ಳೊಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ದೇವೇಂದ್ರಪ್ಪ ಭಾಲ್ಕಿ ಅವರನ್ನು ಕರ್ತವ್ಯ ಲೋಪ ಮತ್ತು ಪತ್ರಕರ್ತನಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ.
ನಾಗಯ್ಯ ಸ್ವಾಮಿ ಅಲ್ಲೂರು ಎಂಬ ಪತ್ರಕರ್ತರು 15ನೇ ಹಣಕಾಸು ಯೋಜನೆಯಡಿ ಖರ್ಚಾದ ವಿವರಗಳನ್ನು ನೀಡುವಂತೆ ಅಳ್ಳೊಳ್ಳಿ ಗ್ರಾಮ ಪಂಚಾಯಿತಿಗೆ ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅಡಿ ಅರ್ಜಿ ಸಲ್ಲಿಸಿದ್ದರು. ಆದರೆ, ಬೇಡಿಕೆಯ ಮಾಹಿತಿಯನ್ನು ನೀಡದೆ ದೇವೇಂದ್ರಪ್ಪ ಭಾಲ್ಕಿ ಅವರು ಪತ್ರಕರ್ತನಿಗೆ ಫೋನ್ ಕರೆ ಮಾಡಿ, ‘ಬ್ಲಾಕ್ಮೇಲ್ ಮಾಡಲು ಅರ್ಜಿ ಹಾಕಿದ್ದೀಯಾ? ಪೊಲೀಸರಿಗೆ ದೂರು ನೀಡಿ ಒಳ ಮಾಡಿಸುತ್ತೇನೆ’ ಎಂದು ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಈ ಕುರಿತು ನಾಗಯ್ಯ ಸ್ವಾಮಿ ಅವರು ಚಿತ್ತಾಪುರದ ಕಾರ್ಯನಿರ್ವಾಹಕ ಅಧಿಕಾರಿಗೆ (ಇಒ) ದೂರು ನೀಡಿದ್ದು, ಇದನ್ನು ಪರಿಗಣಿಸಿದ ಅಧಿಕಾರಿಗಳು ದೇವೇಂದ್ರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಆದರೆ, ಅವರು ಸಮರ್ಪಕ ಉತ್ತರ ನೀಡದೆ, ಆರ್ಟಿಐ ಅಡಿ ಮಾಹಿತಿಯನ್ನೂ ನೀಡಲು ವಿಫಲರಾದ ಹಿನ್ನೆಲೆಯಲ್ಲಿ, ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಪ್ರಾಥಮಿಕ ಆಧಾರದ ಮೇಲೆ ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಅವರು ಅವರನ್ನು ಅಮಾನತು ಮಾಡುವ ಆದೇಶ ನೀಡಿದ್ದಾರೆ.
ಈ ಘಟನೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸುವವರ ಮೇಲೆ ಆಗುವ ಒತ್ತಡ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದ ತಾಂತ್ರಿಕತೆಯನ್ನು ಮತ್ತೊಮ್ಮೆ ಹತ್ತಿಕ್ಕುವಂತೆ ಮಾಡಿದೆ.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…