Latest

ಸ್ನಾನಗೃಹದಲ್ಲಿ ಇಣುಕಿ ನೋಡಿದ ಹಿನ್ನಲೆ: ಗ್ರಾಮದಲ್ಲಿ ಕುಟುಂಬಗಳ ಮಧ್ಯೆ ಗಲಾಟೆ, ಜಾತಿ ನಿಂದನೆ ಆರೋಪ

ರಾಯಚೂರು, ಜುಲೈ 16 – ಗ್ರಾಮೀಣ ಭಾಗದಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದ ವೇಳೆ, ಮನೆಯ ಹೊರಭಾಗದಲ್ಲಿದ್ದ ಸ್ನಾನದ ಕೋಣೆಗೆ ಇಣುಕಿ ನೋಡುವ ಮೂಲಕ ಅಸಭ್ಯತೆ ನಡೆಸಿದ ವ್ಯಕ್ತಿಯೊಬ್ಬನ ತೊಂದರೆ ಇದೀಗ ಹಳ್ಳಿ ಮಟ್ಟದ ಸಂಘರ್ಷಕ್ಕೆ ವಿಸ್ತರಿಸಿದೆ. ಘಟನೆಯು ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಮೂಡಲಗುಂಡಾ ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ಮೂಲಗಳ ಪ್ರಕಾರ, ಮಹಿಳೆಯೊಬ್ಬರು ತಮ್ಮ ಮನೆಯ ಬಳಿ ನಿರ್ಮಿಸಲಾಗಿದ್ದ ಸ್ನಾನದ ಕೋಣೆಯಲ್ಲಿ ಸ್ನಾನ ಮಾಡುತ್ತಿದ್ದಾಗ, ಅಚಾನಕ್‍ವಾಗಿ ಕಿಟಕಿಯ ಬಳಿ ಇಣುಕಿ ನೋಡುತ್ತಿದ್ದ ವ್ಯಕ್ತಿಯ ಸಂಚು ಗಮನಕ್ಕೆ ಬಂದಿದೆ. ತಕ್ಷಣ ಬಟ್ಟೆ ಸುತ್ತಿಕೊಂಡು ಹೊರಬಂದ ಮಹಿಳೆ, ಈ ಕೃತ್ಯ ಮಾಡಿದ ವ್ಯಕ್ತಿಯನ್ನು ಗುರುತಿಸಿ ವಾಗ್ವಾದಕ್ಕೆ ಇಳಿದಿದ್ದಾರೆ.

ಹೆಣೆಮಾಡಿದ ತಪ್ಪಿಗೆ ನಾಚಿಕೆ ಪಡುವ ಬದಲಿಗೆ, ಮಹಿಳೆಗೆ ಉತ್ತರ ಮಾತು ಮಾತನಾಡಿದ ವ್ಯಕ್ತಿಯ ವಿರುದ್ಧ ಕೋಪಗೊಂಡ ಅವರು ಲಾಠಿ ಎತ್ತಿ ಹೊಡೆದಿದ್ದಾರೆ. ಇದರಿಂದ ಮತ್ತಷ್ಟು ಗದರಿದ ವ್ಯಕ್ತಿಯೂ ಹಲ್ಲೆಗೆ ಮುಂದಾಗಿ ಇಬ್ಬರ ನಡುವೆ ತೀವ್ರ ಗಲಾಟೆ ಉಂಟಾಗಿದೆ. ಶಬ್ದ ಕೇಳಿ ಸ್ಥಳಕ್ಕೆ ಓಡಿಬಂದ ಮಹಿಳೆಯ ಕುಟುಂಬಸ್ಥರು, ಆತನ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ವಿರೋಧಿಸಿದ ಆರೋಪಿಯ ಕುಟುಂಬದವರು ಸಹ ಸ್ಥಳಕ್ಕೆ ಧಾವಿಸಿ, ಇಡೀ ಪ್ರಕರಣ ತೀವ್ರ ಹಲ್ಲೆ ಹಾಗೂ ಗಲಾಟೆಗೆ ತಿರುಗಿದೆ.

ಈ ಹಿನ್ನಲೆಯಲ್ಲಿ ಎರಡು ಕುಟುಂಬಗಳ ಗಂಡಸರು ಹಾಗೂ ಮಹಿಳೆಯರೂ ಕೈಗೆ ಸಿಕ್ಕ ದಂಡು, ಕಲ್ಲು ಹಿಡಿದು ಪರಸ್ಪರ ಹಲ್ಲೆ ನಡೆಸಿದ್ದಾರೆ. ನಂತರ ಪರಿಸ್ಥಿತಿ ನಿಯಂತ್ರಣ ತಪ್ಪಿದ ಹಿನ್ನಲೆಯಲ್ಲಿ ಗ್ರಾಮಸ್ಥರು ಮಧ್ಯಸ್ಥಿಕೆ ವಹಿಸಿ ಗಲಾಟೆ ನಿಲ್ಲಿಸಿದರು.

ಈ ಸಂಬಂಧ ಇಣುಕಿ ನೋಡಿದ ವ್ಯಕ್ತಿಯ ವಿರುದ್ಧ ಮಹಿಳೆ ಹಾಗೂ ಅವರ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಇತ್ತ ಆರೋಪಿತ ವ್ಯಕ್ತಿಯ ಕುಟುಂಬದವರು ಮಾತ್ರ ಮಹಿಳೆಯ ಕುಟುಂಬದವರ ವಿರುದ್ಧ ಜಾತಿ ನಿಂದನೆಯ ಆರೋಪ ಮಾಡಿದ್ದು, ಅವರಿಗೂ ವಿರುದ್ಧ ದೂರು ಸಲ್ಲಿಸಲಾಗಿದೆ.

ಈ ಘಟನೆಯ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿದ್ದು, ಮಹಿಳಾ ಹಕ್ಕು ಸಂಘಟನೆಗಳು ಪ್ರಕರಣದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮಹಿಳೆಗೆ ನ್ಯಾಯ ಸಿಗಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿವೆ. ಪೊಲೀಸರು ಎರಡೂ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

nazeer ahamad

Recent Posts

ಬೆಂಗಳೂರು ರಸ್ತೆ ಅಪಘಾತದಲ್ಲಿ ಭಟ್ಕಳದ ಯುವತಿ ದುರ್ಮರಣ; ಮದುವೆ ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ದುರಂತ

ಭಟ್ಕಳ: ಉದ್ಯೋಗ ನಿಮಿತ್ತ ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದ ಭಟ್ಕಳ ಮೂಲದ ಯುವತಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ…

10 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಮನೆಗಳ್ಳರ ಬಂಧನ, ₹9 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳ ಜಪ್ತಿ

ಕಿತ್ತೂರು: ಕಿತ್ತೂರು ಹಾಗೂ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಮನೆಗಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿರುವ ಕಿತ್ತೂರು ಪೊಲೀಸರು,…

10 hours ago

ಶಿರಸಿಯಲ್ಲಿ ಹಾವು ಕಚ್ಚಿ ಬಾಲಕ ಸಾವು – ವೈದ್ಯರ ನಿರ್ಲಕ್ಷ್ಯದ ಆರೋಪ

ಶಿರಸಿ: ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಹಳ್ಳಿಯಲ್ಲಿ ಹಾವು ಕಚ್ಚಿದ ಪರಿಣಾಮ ಬಾಲಕ ಮೃತಪಟ್ಟ ಘಟನೆ ದುಃಖಕ್ಕೆ ಕಾರಣವಾಗಿದ್ದು, ಸರ್ಕಾರಿ ಆಸ್ಪತ್ರೆಯ…

13 hours ago

ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಬೈಕ್ ಡಿಕ್ಕಿ – ಯುವಕ ಸಾವು, ಸವಾರನ ಸ್ಥಿತಿ ಗಂಭೀರ

ಭಟ್ಕಳ: ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ…

13 hours ago

ತುಮಕೂರು ಹೆದ್ದಾರಿಯಲ್ಲಿ ದಾರುಣ ಘಟನೆ: ಯುವತಿಗೆ ಚಾಕು ಇರಿದು ಪೆಟ್ರೋಲ್ ಬಾಂಬ್ ಸಿಡಿಸಿಕೊಂಡ ಪ್ರೇಮಿ ಸಾವು

ತುಮಕೂರು: ಪ್ರೇಮಿಗಳ ನಡುವಿನ ಮನಸ್ತಾಪ ಭೀಕರ ತಿರುವು ಪಡೆದುಕೊಂಡ ಪರಿಣಾಮ, ಯುವಕನೊಬ್ಬ ಯುವತಿಗೆ ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ಕಾರಿನಲ್ಲೇ…

14 hours ago

ಶೀಲಾ ಶಂಕಿಸಿ ಮಕ್ಕಳ ಎದುರೇ ತಾಯಿಯ ಹತ್ಯೆ: ಪತ್ನಿಯನ್ನು ಕೊಡಲಿಯಿಂದ ಕೊಂದ ಪತಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಪತ್ನಿಯ ಶೀಲದ ಮೇಲೆ ಅನುಮಾನ ವ್ಯಕ್ತಪಡಿಸಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದ ಪತಿಗೆ ಧಾರವಾಡದ ನಾಲ್ಕನೇ…

14 hours ago