Latest

ಪೀಣ್ಯ ಬಿಎಂಟಿಸಿ ಬಸ್ ಅಪಘಾತ: ಚಾಲಕ ಅಮಾನತು, ಕುಟುಂಬಕ್ಕೆ ತಾತ್ಕಾಲಿಕ ಪರಿಹಾರ

ಬೆಂಗಳೂರು, ಜುಲೈ 20: ಕಳೆದ ಶುಕ್ರವಾರ ಪೀಣ್ಯ 2ನೇ ಹಂತದಲ್ಲಿ ನಡೆದ ಭೀಕರ ಬಿಎಂಟಿಸಿ ಬಸ್ ಅಪಘಾತದಲ್ಲಿ ಯುವತಿ ಸುಮಾ (25) ಬಲಿಯಾದ ಪ್ರಕರಣವು ಇದೀಗ ಬಿಎಂಟಿಸಿ ಆಡಳಿತದ ಚುರುಕಿನಿಂದ ಮತ್ತೊಂದು ತಿರುವು ಪಡೆದಿದೆ. ಅಪಘಾತಕ್ಕೆ ಕಾರಣರಾದ ಬಸ್ ಚಾಲಕ ರಮೇಶ್ ಅವರನ್ನು ಬಿಎಂಟಿಸಿ ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ.

ಅಜಾಗರೂಕವಾಗಿ ವಾಹನ ಹಿಂಡಿದ ಆರೋಪದ ಹಿನ್ನೆಲೆಯಲ್ಲಿ ಬಿಎಂಟಿಸಿ ಈ ಕ್ರಮ ಕೈಗೊಂಡಿದ್ದು, ಸಂಬಳದ ಶೇಕಡಾ 50 ರಷ್ಟು ಮಾತ್ರ ಜೀವನಾಧಾರ ಭತ್ಯೆಯಾಗಿ ನೀಡಲಾಗುತ್ತಿದೆ. ರಮೇಶ್ ಅವರು ಪೀಣ್ಯದಲ್ಲಿರುವ ಇವಿ ಘಟಕ 22ರ ವಾಯುವ್ಯ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಘಟನೆಯ ಬಳಿಕ ಪೀಣ್ಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಅದಕ್ಕೂ ಅನುರೂಪವಾಗಿ ಅಮಾನತು ಕ್ರಮ ಜಾರಿಯಾಗಿದೆ.

ಘಟನೆಯಿಂದ ತೀವ್ರ ಆಘಾತಕ್ಕೆ ಒಳಗಾದ ಸುಮಾ ಅವರ ಕುಟುಂಬಕ್ಕೆ ಬಿಎಂಟಿಸಿ ತಾತ್ಕಾಲಿಕ ಪರಿಹಾರದ ರೀತಿಯಲ್ಲಿ ₹50,000 ನೆರವು ನೀಡಿದ್ದು, ಇನ್ನೂ ₹50,000 ಅನ್ನು ಮೂರು ದಿನಗಳೊಳಗೆ ನೀಡುವ ಭರವಸೆ ನೀಡಿದೆ. ಇದೇ ವೇಳೆ, ವಿಮೆ ಮೊತ್ತ ಪಡೆಯುವ ಪ್ರಕ್ರಿಯೆಗೂ ಸಂಬಂಧಪಟ್ಟ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಆದರೆ ಕುಟುಂಬದ ಸದಸ್ಯರು ಈ ನಿರ್ವಹಣೆಯ ಕುರಿತು ತೃಪ್ತಿ ವ್ಯಕ್ತಪಡಿಸಿಲ್ಲ.

ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಕಳವಳ ವ್ಯಕ್ತವಾಗಿದ್ದು, ಬಿಎಂಟಿಸಿ ಚಾಲಕರ ತರಬೇತಿ ಮತ್ತು ಸುರಕ್ಷತಾ ಕ್ರಮಗಳ ಕುರಿತು ಮರುಪರಿಶೀಲನೆ ಅಗತ್ಯವಿದೆ ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಯುತ್ತಿದ್ದು, ಬಿಎಂಟಿಸಿ ಹಾಗೂ ಪೊಲೀಸರು ಘಟನೆಯ ನಿಖರ ಹಿನ್ನೆಲೆಯಲ್ಲಿ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

15 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

15 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

15 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

16 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago