ಮುಂಡಗೋಡ: ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ (BPL ಕಾರ್ಡುದಾರರಿಗೆ)ಮತ್ತು ಅಂತ್ಯೋದಯ ಕಾರ್ಡುಗಳು ಇರುವ ಜನರಿಗೆ ಪ್ರತಿ ತಿಂಗಳು ಉಚಿತ ಪಡಿತರವನ್ನು ನೀಡುತ್ತಿದೆ ಆದರೆ ಈ ಪಡಿತರವನ್ನು ಪಡೆಯಲು ಎರಡ್ಮೂರು ದಿನಗಳ ಕಾಲ ಸರದಿಯಲ್ಲಿ ನಿಂತರೂ ಪಡಿತರ ದೊರೆಯುತ್ತಿಲ್ಲ ಹಾಗಾಗಿ ಜನರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.ಇಲಾಖೆ ದಿನಕ್ಕೊಂದು ನಿಯಮಗಳನ್ನು ಜಾರಿಗೆ ತರುವುತ್ತಿರುವುದರಿಂದ ಈ ಸಮಸ್ಯೆ ಉಂಟಾಗುತ್ತಿದೆ.ಪಡಿತರವನ್ನು ಪಡೆಯಲು ಈ ಮೊದಲು ಕೇವಲ ಒಂದು OTP ಅಥವಾ ಒಂದು ಸಾರಿ ಹೆಬ್ಬೆಟ್ಟು ಗುರುತನ್ನು ಕೊಟ್ಟಿದ್ದರೆ ಸಾಕಿತ್ತು ಈಗ ಎರಡು ಬಾರಿ OTP ನೀಡಬೇಕಾಗಿದೆ..ಜೊತೆಗೆ ಈ OTP ಯನ್ನು ಹಾಕುತ್ತಿರುವಾಗ ಸರ್ವರ್ ಸಮಸ್ಯೆ ಕಾಡುತ್ತಿದೆ ಕೆಲವೊಂದು ಸಾರಿ ಸರ್ವರ್ ಹೋದರೆ ಗಂಟೆಗಟ್ಟಲೆ/ದಿನಗಟ್ಟಲೆ ಬರುವುದೇ ಇಲ್ಲಾ.
ಹಾಗಾಗಿ ದಿನಕ್ಕೆ 20 ರಿಂದ 25 ಜನರಿಗೆ ಮಾತ್ರ ಪಡಿತರ ಸಿಗುತ್ತಿದೆ.ಇಷ್ಟಾದರೂ ಸಂಬಂಧಿಸಿದ ಅಧಿಕಾರಿಗಳಾಗಲಿ, ಇಲಾಖೆಯವರಾಗಲಿ ಇದೂವರೆಗೂ ಸಮಸ್ಯೆಯನ್ನು ಬಗೆಹರಿಸುವ ಕೆಲಸವನ್ನು ಮಾಡದೇ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಡಗೋಡ ತಾಲೂಕಿನ ಮೈನಳ್ಳಿ ಗ್ರಾಮದ ಪಡಿತರ ವಿತರಣಾ ಕೇಂದ್ರದಲ್ಲಿ ರಾತ್ರಿ 8 ಗಂಟೆಯಾದರೂ ಸುಮಾರು 300ಕ್ಕೂ ಹೆಚ್ಚು ಜನರು ಪಡಿತರ ಪಡೆಯಲು ಕಾಯುತ್ತಿದ್ದಾರೆ.ಇಂದು ತಿಂಗಳ ಕೊನೆಯ ದಿನಾಂಕ ವಾಗಿರುವುದರಿಂದ ನಾಳೆ ಪಡಿತರ ಸಿಗುತ್ತದೆಯೋ ಇಲ್ಲವೋ ಎಂಬ ಚಿಂತೆ ಜನರನ್ನು ಕಾಡುತ್ತಿದೆ.
ವರದಿ:ಮಂಜುನಾಥ ಹರಿಜನ.
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…