Latest

ಸರ್ವರ್ ಸಮಸ್ಯೆಗೆ ಹೈರಾಣಾದ ಜನರು, ಸರಕಾರಕ್ಕೆ ಹಿಡಿಶಾಪ..!

ಮುಂಡಗೋಡ: ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ (BPL ಕಾರ್ಡುದಾರರಿಗೆ)ಮತ್ತು ಅಂತ್ಯೋದಯ ಕಾರ್ಡುಗಳು ಇರುವ ಜನರಿಗೆ ಪ್ರತಿ ತಿಂಗಳು ಉಚಿತ ಪಡಿತರವನ್ನು ನೀಡುತ್ತಿದೆ ಆದರೆ ಈ ಪಡಿತರವನ್ನು ಪಡೆಯಲು ಎರಡ್ಮೂರು ದಿನಗಳ ಕಾಲ ಸರದಿಯಲ್ಲಿ ನಿಂತರೂ ಪಡಿತರ ದೊರೆಯುತ್ತಿಲ್ಲ ಹಾಗಾಗಿ ಜನರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.ಇಲಾಖೆ ದಿನಕ್ಕೊಂದು ನಿಯಮಗಳನ್ನು ಜಾರಿಗೆ ತರುವುತ್ತಿರುವುದರಿಂದ ಈ ಸಮಸ್ಯೆ ಉಂಟಾಗುತ್ತಿದೆ.ಪಡಿತರವನ್ನು ಪಡೆಯಲು ಈ ಮೊದಲು ಕೇವಲ ಒಂದು OTP ಅಥವಾ ಒಂದು ಸಾರಿ ಹೆಬ್ಬೆಟ್ಟು ಗುರುತನ್ನು ಕೊಟ್ಟಿದ್ದರೆ ಸಾಕಿತ್ತು ಈಗ ಎರಡು ಬಾರಿ OTP ನೀಡಬೇಕಾಗಿದೆ..ಜೊತೆಗೆ ಈ OTP ಯನ್ನು ಹಾಕುತ್ತಿರುವಾಗ ಸರ್ವರ್ ಸಮಸ್ಯೆ ಕಾಡುತ್ತಿದೆ ಕೆಲವೊಂದು ಸಾರಿ ಸರ್ವರ್ ಹೋದರೆ ಗಂಟೆಗಟ್ಟಲೆ/ದಿನಗಟ್ಟಲೆ ಬರುವುದೇ ಇಲ್ಲಾ.

ಹಾಗಾಗಿ ದಿನಕ್ಕೆ 20 ರಿಂದ 25 ಜನರಿಗೆ ಮಾತ್ರ ಪಡಿತರ ಸಿಗುತ್ತಿದೆ.ಇಷ್ಟಾದರೂ ಸಂಬಂಧಿಸಿದ ಅಧಿಕಾರಿಗಳಾಗಲಿ, ಇಲಾಖೆಯವರಾಗಲಿ ಇದೂವರೆಗೂ ಸಮಸ್ಯೆಯನ್ನು ಬಗೆಹರಿಸುವ ಕೆಲಸವನ್ನು ಮಾಡದೇ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಡಗೋಡ ತಾಲೂಕಿನ ಮೈನಳ್ಳಿ ಗ್ರಾಮದ ಪಡಿತರ ವಿತರಣಾ ಕೇಂದ್ರದಲ್ಲಿ ರಾತ್ರಿ 8 ಗಂಟೆಯಾದರೂ ಸುಮಾರು 300ಕ್ಕೂ ಹೆಚ್ಚು ಜನರು ಪಡಿತರ ಪಡೆಯಲು ಕಾಯುತ್ತಿದ್ದಾರೆ.ಇಂದು ತಿಂಗಳ ಕೊನೆಯ ದಿನಾಂಕ ವಾಗಿರುವುದರಿಂದ ನಾಳೆ ಪಡಿತರ ಸಿಗುತ್ತದೆಯೋ ಇಲ್ಲವೋ ಎಂಬ ಚಿಂತೆ ಜನರನ್ನು ಕಾಡುತ್ತಿದೆ.
ವರದಿ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

₹15 ಲಕ್ಷ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಂದ ಅಣ್ಣ! ಅಪಘಾತದ ನಾಟಕ ಬಯಲು ಮಾಡಿದ ಪೊಲೀಸರ ಚಾಣಾಕ್ಷ ತನಿಖೆ

ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…

30 seconds ago

ವಿದ್ಯಾರ್ಥಿ ಸಾವಿನ ಪ್ರಕರಣ; ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲು

ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…

6 minutes ago

ರೌಡಿಶೀಟರ್‌ಗಳು ಮತ್ತು ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರ ಶಾಕ್; ಮನೆಗಳ ಮೇಲೆ ದಿಢೀರ್ ದಾಳಿ!

ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…

11 minutes ago

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

15 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

15 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

18 hours ago