Latest

ಸರ್ವರ್ ಸಮಸ್ಯೆಗೆ ಹೈರಾಣಾದ ಜನರು, ಸರಕಾರಕ್ಕೆ ಹಿಡಿಶಾಪ..!

ಮುಂಡಗೋಡ: ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ (BPL ಕಾರ್ಡುದಾರರಿಗೆ)ಮತ್ತು ಅಂತ್ಯೋದಯ ಕಾರ್ಡುಗಳು ಇರುವ ಜನರಿಗೆ ಪ್ರತಿ ತಿಂಗಳು ಉಚಿತ ಪಡಿತರವನ್ನು ನೀಡುತ್ತಿದೆ ಆದರೆ ಈ ಪಡಿತರವನ್ನು ಪಡೆಯಲು ಎರಡ್ಮೂರು ದಿನಗಳ ಕಾಲ ಸರದಿಯಲ್ಲಿ ನಿಂತರೂ ಪಡಿತರ ದೊರೆಯುತ್ತಿಲ್ಲ ಹಾಗಾಗಿ ಜನರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.ಇಲಾಖೆ ದಿನಕ್ಕೊಂದು ನಿಯಮಗಳನ್ನು ಜಾರಿಗೆ ತರುವುತ್ತಿರುವುದರಿಂದ ಈ ಸಮಸ್ಯೆ ಉಂಟಾಗುತ್ತಿದೆ.ಪಡಿತರವನ್ನು ಪಡೆಯಲು ಈ ಮೊದಲು ಕೇವಲ ಒಂದು OTP ಅಥವಾ ಒಂದು ಸಾರಿ ಹೆಬ್ಬೆಟ್ಟು ಗುರುತನ್ನು ಕೊಟ್ಟಿದ್ದರೆ ಸಾಕಿತ್ತು ಈಗ ಎರಡು ಬಾರಿ OTP ನೀಡಬೇಕಾಗಿದೆ..ಜೊತೆಗೆ ಈ OTP ಯನ್ನು ಹಾಕುತ್ತಿರುವಾಗ ಸರ್ವರ್ ಸಮಸ್ಯೆ ಕಾಡುತ್ತಿದೆ ಕೆಲವೊಂದು ಸಾರಿ ಸರ್ವರ್ ಹೋದರೆ ಗಂಟೆಗಟ್ಟಲೆ/ದಿನಗಟ್ಟಲೆ ಬರುವುದೇ ಇಲ್ಲಾ.

ಹಾಗಾಗಿ ದಿನಕ್ಕೆ 20 ರಿಂದ 25 ಜನರಿಗೆ ಮಾತ್ರ ಪಡಿತರ ಸಿಗುತ್ತಿದೆ.ಇಷ್ಟಾದರೂ ಸಂಬಂಧಿಸಿದ ಅಧಿಕಾರಿಗಳಾಗಲಿ, ಇಲಾಖೆಯವರಾಗಲಿ ಇದೂವರೆಗೂ ಸಮಸ್ಯೆಯನ್ನು ಬಗೆಹರಿಸುವ ಕೆಲಸವನ್ನು ಮಾಡದೇ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಡಗೋಡ ತಾಲೂಕಿನ ಮೈನಳ್ಳಿ ಗ್ರಾಮದ ಪಡಿತರ ವಿತರಣಾ ಕೇಂದ್ರದಲ್ಲಿ ರಾತ್ರಿ 8 ಗಂಟೆಯಾದರೂ ಸುಮಾರು 300ಕ್ಕೂ ಹೆಚ್ಚು ಜನರು ಪಡಿತರ ಪಡೆಯಲು ಕಾಯುತ್ತಿದ್ದಾರೆ.ಇಂದು ತಿಂಗಳ ಕೊನೆಯ ದಿನಾಂಕ ವಾಗಿರುವುದರಿಂದ ನಾಳೆ ಪಡಿತರ ಸಿಗುತ್ತದೆಯೋ ಇಲ್ಲವೋ ಎಂಬ ಚಿಂತೆ ಜನರನ್ನು ಕಾಡುತ್ತಿದೆ.
ವರದಿ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago