ಚಿಂಚೋಳಿ ತಾಲ್ಲೂಕಿನ ಗಂಜಗೇರಾ–ವಜೀರಗಾಂವ ಸಂಪರ್ಕ ರಸ್ತೆಯ ದುಸ್ಥಿತಿ ಜನರನ್ನು ಕಂಗೆಡಿಸಿದೆ. ರಸ್ತೆ ಸಂಪೂರ್ಣವಾಗಿ ಹದಗೆಟ್ಟು, ದೊಡ್ಡ ದೊಡ್ಡ ಗುಂಡಿಗಳಿಂದ ತುಂಬಿಕೊಂಡಿರುವುದರಿಂದ ಸಂಚಾರವು ಅಪಾಯಕಾರಿಯಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಸ್ಥಳೀಯರು ತಕ್ಷಣ ರಸ್ತೆ ದುರಸ್ತಿ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಈ ಮಾರ್ಗದಲ್ಲಿ ಆಳವಾದ ಗುಂಡಿಗಳು ಉಂಟಾಗಿರುವುದರಿಂದ ದ್ವಿಚಕ್ರ ವಾಹನ ಸವಾರರು ಸ್ಕಿಡ್ ಆಗಿ ಬಿದ್ದು ಗಾಯಗೊಳ್ಳುತ್ತಿರುವ ಘಟನೆಗಳು ಹೆಚ್ಚಾಗಿವೆ. ವಿಶೇಷವಾಗಿ ರಾತ್ರಿ ವೇಳೆ ಈ ರಸ್ತೆಯಲ್ಲಿ ಸಂಚರಿಸುವುದು ಜೀವಪಣಕ್ಕಿಟ್ಟು ಹೋಗುವಂತಾಗಿದೆ. ಈಗಾಗಲೇ ಹಲವರು ಅಪಘಾತಕ್ಕೀಡಾಗಿ ಗಾಯಗೊಂಡಿರುವ ಉದಾಹರಣೆಗಳೂ ಕಂಡುಬಂದಿವೆ.
ನಿತ್ಯ ಈ ರಸ್ತೆಯನ್ನು ಬಳಸುವ ವಾಹನ ಸವಾರರು ಮತ್ತು ಪಾದಚಾರಿಗಳು ಭಾರೀ ತೊಂದರೆ ಅನುಭವಿಸುತ್ತಿದ್ದಾರೆ. ಹದಗೆಟ್ಟ ರಸ್ತೆಗಳನ್ನು ಕಂಡು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ರಸ್ತೆ ದುರಸ್ತಿಗೆ ಜವಾಬ್ದಾರಿಯಾಗಿರುವ ಲೋಕೋಪಯೋಗಿ ಇಲಾಖೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಕಾಲಮಿತಿಯಲ್ಲಿ ರಸ್ತೆಗಳನ್ನು ಸುಧಾರಿಸಬೇಕಿದ್ದರೂ, ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ಸ್ಥಳೀಯರು ಆಕ್ಷೇಪಿಸಿದ್ದಾರೆ.
ರಸ್ತೆಯ ದುಸ್ಥಿತಿ ದಿನೇದಿನೇ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ, ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಕ್ಷಣ ಗಮನಹರಿಸಿ ದುರಸ್ತಿ ಕಾರ್ಯ ಆರಂಭಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…