Latest

ಶಾಸಕರಿಗೇ ಹೊಡೆದು ಬಟ್ಟೆ ಹರಿದು ಹಾಕಿದ ಜನ

ಕಾಡಾನೆಯಿಂದ ಮಹಿಳೆ ಸಾವಿಗೀಡಾದ ಪ್ರದೇಶಕ್ಕೆ ತೆರಳಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಅವರ ಬಟ್ಟೆಯನ್ನೂ ಹರಿದು ಹಾಕಿದೆ. ಅಲ್ಲಿಂದ ಕೊನೆಗೂ ಅವರನ್ನು ಹರಸಾಹಸಪಟ್ಟು ಪೊಲೀಸರು ರಕ್ಷಿಸಿ ಕರೆದೊಯ್ದಿದ್ದಾರೆ.

ನಡೆದ ಘಟನೆ ಬಗ್ಗೆ ಶಾಸಕ ಕುಮಾರಸ್ವಾಮಿ ಹರಿದ ಬಟ್ಟೆಯಲ್ಲಿ ಹೇಳಿಕೆ ನೀಡಿದ್ದಾರೆ. ಬೇಕು ಅಂತ ಗುಂಪುಗೂಡಿ ಹಲ್ಲೆ ಮಾಡಿದ್ದಾರೆ. ನಾನು ಅಲ್ಲೇ ಇರುತ್ತಿದ್ದೆ, ನನ್ನನ್ನು ಪೊಲೀಸರು ಮಿಸ್​ಗೈಡ್ ಮಾಡಿ ಹೊರಗೆ ಕಳಿಸಿದ್ದರು ಎಂದಿರುವ ಶಾಸಕರು, ಪೊಲೀಸರ ವೈಫಲ್ಯ ಎಂದೂ ಹೇಳಿದ್ದಾರೆ. ಶಾಸಕರು ಆನೆ ಸಾಕಿದ್ದಾರೆ ಎಂದು ಜನರು ಹೊಡೆದು ಕಳುಹಿಸಿದ್ದಾರೆ. ಕೋರ್ಟ್, ಸರ್ಕಾರ ಏನು ಹೇಳುತ್ತದೆ ಎನ್ನುವುದು ರಾಜ್ಯಕ್ಕೆ-ದೇಶಕ್ಕೆ ಗೊತ್ತಿದೆ. ಅದಾಗ್ಯೂ ಸಂಚು ಮಾಡಿ ಹಲ್ಲೆ ಮಾಡಲಾಗಿದೆ. ಸಾರ್ವಜನಿಕರ ಸೇವೆ ಮಾಡುವವರು ಎಲ್ಲ ತಾಗ್ಯಕ್ಕೂ ಸಜ್ಜಾಗಿರ್ತೀವಿ ಎಂದೂ ಅವರು ಹೇಳಿದ್ದಾರೆ.

ಮೂಡಿಗೆರೆ ತಾಲೂಕಿನ ಹುಲ್ಲೇಮನೆಯಲ್ಲಿ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದಾರೆ. ಈ ಹಿಂದೆಯೂ ಜನರು ಕಾಡಾನೆ ದಾಳಿಗೆ ಬಲಿಯಾಗಿದ್ದು, ಆಗ ಉದ್ರಿಕ್ತ ಸಾರ್ವಜನಿಕರು ಪೊಲೀಸ್ ಜೀಪ್ ಅಲುಗಿಸಿದ್ದರು. ಈ ಸಲ ಶಾಸಕರ ಮೇಲೇ ಹಲ್ಲೆ ಮಾಡಿದ್ದಾರೆ. ಶಾಸಕರನ್ನು ವಾಪಸ್ ಕರೆದೊಯ್ಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ತಲೆ ಮೇಲೆ ಕೈ ಇಟ್ಟುಕೊಂಡು ಪೊಲೀಸ್​​ ಜೀಪ್​ನಲ್ಲಿ ಶಾಸಕರು ಹೋಗುವಂತಾಗಿತ್ತು.

ಭ್ರಷ್ಟರ ಬೇಟೆ

Recent Posts

SSC 2026 ಭರ್ಜರಿ ನೇಮಕಾತಿ: 3,734 ಹುದ್ದೆಗಳು – ಮೇ 4ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ…

1 hour ago

ನಿಶ್ಚಿತಾರ್ಥದ ದಿನವೇ ಯುವತಿ ನಾಪತ್ತೆ: ಮುಸ್ಲಿಂ ಯುವಕನೊಂದಿಗೆ ಪರಾರಿ? ಕುಟುಂಬಸ್ಥರ ಆಕ್ರೋಶ.

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24…

2 hours ago

ದೇವನಹಳ್ಳಿ: ಚಹಾ ಅಂಗಡಿ ಯುವಕನ ಮೇಲೆ ಪೊಲೀಸ್ ದೌರ್ಜನ್ಯ – ವೈರಲ್ ವಿಡಿಯೋಗೆ ಸಾರ್ವಜನಿಕರ ಆಕ್ರೋಶ

ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ‘ಹೈವೇ ನೆಸ್ಟ್’ ಚಹಾ ಅಂಗಡಿಯಲ್ಲಿ ನಡೆದ ದೌರ್ಜನ್ಯ ಪ್ರಕರಣ ಇದೀಗ…

4 hours ago

ಮೀಟರ್ ಬಡ್ಡಿ ದಂದೆಕೋರನ ಮೇಲೆ ಡೆಡ್ಲಿ ಅಟ್ಯಾಕ್, ಮರ್ಡರ್ : ಆರೋಪಿಗಳ ಬಂಧನ

ಮುಂಡಗೋಡ: ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೋಟೆಲ್‌ನಲ್ಲಿ ಊಟಕ್ಕೆ ಕುಳಿತಿದ್ದಾಗ ನಡೆದಿದ್ದ ರೌಡಿ ಶೀಟರ್ ಜಮೀರ್…

17 hours ago

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

1 day ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

1 day ago