Latest

ಶಾಸಕರಿಗೇ ಹೊಡೆದು ಬಟ್ಟೆ ಹರಿದು ಹಾಕಿದ ಜನ

ಕಾಡಾನೆಯಿಂದ ಮಹಿಳೆ ಸಾವಿಗೀಡಾದ ಪ್ರದೇಶಕ್ಕೆ ತೆರಳಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಅವರ ಬಟ್ಟೆಯನ್ನೂ ಹರಿದು ಹಾಕಿದೆ. ಅಲ್ಲಿಂದ ಕೊನೆಗೂ ಅವರನ್ನು ಹರಸಾಹಸಪಟ್ಟು ಪೊಲೀಸರು ರಕ್ಷಿಸಿ ಕರೆದೊಯ್ದಿದ್ದಾರೆ.

ನಡೆದ ಘಟನೆ ಬಗ್ಗೆ ಶಾಸಕ ಕುಮಾರಸ್ವಾಮಿ ಹರಿದ ಬಟ್ಟೆಯಲ್ಲಿ ಹೇಳಿಕೆ ನೀಡಿದ್ದಾರೆ. ಬೇಕು ಅಂತ ಗುಂಪುಗೂಡಿ ಹಲ್ಲೆ ಮಾಡಿದ್ದಾರೆ. ನಾನು ಅಲ್ಲೇ ಇರುತ್ತಿದ್ದೆ, ನನ್ನನ್ನು ಪೊಲೀಸರು ಮಿಸ್​ಗೈಡ್ ಮಾಡಿ ಹೊರಗೆ ಕಳಿಸಿದ್ದರು ಎಂದಿರುವ ಶಾಸಕರು, ಪೊಲೀಸರ ವೈಫಲ್ಯ ಎಂದೂ ಹೇಳಿದ್ದಾರೆ. ಶಾಸಕರು ಆನೆ ಸಾಕಿದ್ದಾರೆ ಎಂದು ಜನರು ಹೊಡೆದು ಕಳುಹಿಸಿದ್ದಾರೆ. ಕೋರ್ಟ್, ಸರ್ಕಾರ ಏನು ಹೇಳುತ್ತದೆ ಎನ್ನುವುದು ರಾಜ್ಯಕ್ಕೆ-ದೇಶಕ್ಕೆ ಗೊತ್ತಿದೆ. ಅದಾಗ್ಯೂ ಸಂಚು ಮಾಡಿ ಹಲ್ಲೆ ಮಾಡಲಾಗಿದೆ. ಸಾರ್ವಜನಿಕರ ಸೇವೆ ಮಾಡುವವರು ಎಲ್ಲ ತಾಗ್ಯಕ್ಕೂ ಸಜ್ಜಾಗಿರ್ತೀವಿ ಎಂದೂ ಅವರು ಹೇಳಿದ್ದಾರೆ.

ಮೂಡಿಗೆರೆ ತಾಲೂಕಿನ ಹುಲ್ಲೇಮನೆಯಲ್ಲಿ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದಾರೆ. ಈ ಹಿಂದೆಯೂ ಜನರು ಕಾಡಾನೆ ದಾಳಿಗೆ ಬಲಿಯಾಗಿದ್ದು, ಆಗ ಉದ್ರಿಕ್ತ ಸಾರ್ವಜನಿಕರು ಪೊಲೀಸ್ ಜೀಪ್ ಅಲುಗಿಸಿದ್ದರು. ಈ ಸಲ ಶಾಸಕರ ಮೇಲೇ ಹಲ್ಲೆ ಮಾಡಿದ್ದಾರೆ. ಶಾಸಕರನ್ನು ವಾಪಸ್ ಕರೆದೊಯ್ಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ತಲೆ ಮೇಲೆ ಕೈ ಇಟ್ಟುಕೊಂಡು ಪೊಲೀಸ್​​ ಜೀಪ್​ನಲ್ಲಿ ಶಾಸಕರು ಹೋಗುವಂತಾಗಿತ್ತು.

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

49 seconds ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 minutes ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

3 minutes ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

4 minutes ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

15 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

15 hours ago