Latest

ಪ್ರಭಾವಿಗಳಿಗೆ ಸೋಲಿನ ರುಚಿ ತೋರಿಸಿದ ಜನತೆ

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ದಿಗ್ವಿಜಯ ಸಾಧಿಸಿದೆ.
ಚುನಾವಣೆಯ ಹೊಸ್ತಿಲಲ್ಲಿ ಟಿಕೆಟ್​ ಕೈತಪ್ಪಿದ ಕಾರಣ ಪಕ್ಷದಿಂದ ಪಕ್ಷಕ್ಕೆ ಜಿಗಿದಿದ್ದ ಅನೇಕರಿಗೆ ತೀವ್ರ ಮುಖಭಂಗವಾಗಿದ್ದು ಪಕ್ಷಾಂತರಿಗಳಿಗೆ ಜನ ಮಣೆ ಹಾಕಿಲ್ಲ.
ಸೋತ ಪ್ರಮುಖರು ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ವಿ. ಸೋಮಣ್ಣ, ಗೋವಿಂದ್ ಕಾರಜೋಳ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ. ರವಿ, ಹಾಸನದಲ್ಲಿ ಪ್ರೀತಂ ಗೌಡ, ವಿರಾಜಪೇಟೆಯಲ್ಲಿ ಕೆ.ಜಿ. ಬೋಪಯ್ಯ, ಮಡಿಕೇರಿಯಲ್ಲಿ ಅಪ್ಪಚ್ಚು ರಂಜನ್​, ಹೊನ್ನಾಳಿಯಲ್ಲಿ ಎಂ.ಪಿ. ರೇಣುಕಾಚಾರ್ಯ ಸೋತ ಪ್ರಮುಖರು.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಜಗದೀಶ್​ ಶೆಟ್ಟರ್​, ಮಾಜಿ ಸ್ಪೀಕರ್​ ರಮೇಶ್​ ಕುಮಾರ್​, ಕೆ.ಆರ್​. ನಗರ ಜೆಡಿಎಸ್​ ಅಭ್ಯರ್ಥಿ ಸಾರಾ ಮಹೇಶ್​​, ರಾಮನಗರದಲ್ಲಿ ನಿಖಿಲ್​ ಕುಮಾರಸ್ವಾಮಿ, ಬೀದರ್​ ದಕ್ಷಿಣದಲ್ಲಿ ಬಂಡೆಪ್ಪ ಕಾಶೆಂಪೂರ್​ ಸೋತಿದ್ದಾರೆ.
ಪ್ರಭಾವಿಗಳಿಗೆ ಮಣೆ ಹಾಕದ ಜನತೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜನತೆ ಬಿಜೆಪಿ ಸರ್ಕಾರದಲ್ಲಿದ್ದ ಪ್ರಭಾವಿ ಸಚಿವರಿಗೂ ಸಹ ಮಣೆ ಹಾಕಿಲ್ಲ. ಚುನಾವಣೆಯಲ್ಲಿ ಸಚಿವರಾದ ಶ್ರೀರಾಮುಲು, ಸೋಮಣ್ಣ, ಬಿ.ಸಿ. ಪಾಟೀಲ್​, ಗೋವಿಂದ ಕಾರಜೋಳ ಹಾಗೂ ನಾರಾಯಣಗೌಡಾಗೆ ಜನತೆ ಸೋಲಿನ ರುಚಿ ತೋರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

10 hours ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

12 hours ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

2 days ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

2 days ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

2 days ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

2 days ago