ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಪಕ್ಷವು ದಿಗ್ವಿಜಯ ಸಾಧಿಸಿದೆ.
ಚುನಾವಣೆಯ ಹೊಸ್ತಿಲಲ್ಲಿ ಟಿಕೆಟ್ ಕೈತಪ್ಪಿದ ಕಾರಣ ಪಕ್ಷದಿಂದ ಪಕ್ಷಕ್ಕೆ ಜಿಗಿದಿದ್ದ ಅನೇಕರಿಗೆ ತೀವ್ರ ಮುಖಭಂಗವಾಗಿದ್ದು ಪಕ್ಷಾಂತರಿಗಳಿಗೆ ಜನ ಮಣೆ ಹಾಕಿಲ್ಲ.
ಸೋತ ಪ್ರಮುಖರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ವಿ. ಸೋಮಣ್ಣ, ಗೋವಿಂದ್ ಕಾರಜೋಳ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ. ರವಿ, ಹಾಸನದಲ್ಲಿ ಪ್ರೀತಂ ಗೌಡ, ವಿರಾಜಪೇಟೆಯಲ್ಲಿ ಕೆ.ಜಿ. ಬೋಪಯ್ಯ, ಮಡಿಕೇರಿಯಲ್ಲಿ ಅಪ್ಪಚ್ಚು ರಂಜನ್, ಹೊನ್ನಾಳಿಯಲ್ಲಿ ಎಂ.ಪಿ. ರೇಣುಕಾಚಾರ್ಯ ಸೋತ ಪ್ರಮುಖರು.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೆ.ಆರ್. ನಗರ ಜೆಡಿಎಸ್ ಅಭ್ಯರ್ಥಿ ಸಾರಾ ಮಹೇಶ್, ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ, ಬೀದರ್ ದಕ್ಷಿಣದಲ್ಲಿ ಬಂಡೆಪ್ಪ ಕಾಶೆಂಪೂರ್ ಸೋತಿದ್ದಾರೆ.
ಪ್ರಭಾವಿಗಳಿಗೆ ಮಣೆ ಹಾಕದ ಜನತೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜನತೆ ಬಿಜೆಪಿ ಸರ್ಕಾರದಲ್ಲಿದ್ದ ಪ್ರಭಾವಿ ಸಚಿವರಿಗೂ ಸಹ ಮಣೆ ಹಾಕಿಲ್ಲ. ಚುನಾವಣೆಯಲ್ಲಿ ಸಚಿವರಾದ ಶ್ರೀರಾಮುಲು, ಸೋಮಣ್ಣ, ಬಿ.ಸಿ. ಪಾಟೀಲ್, ಗೋವಿಂದ ಕಾರಜೋಳ ಹಾಗೂ ನಾರಾಯಣಗೌಡಾಗೆ ಜನತೆ ಸೋಲಿನ ರುಚಿ ತೋರಿಸಿದ್ದಾರೆ.
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…