ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮೇಖಳಿ ಗ್ರಾಮ ಪಂಚಾಯತಿ ಯಲ್ಲಿ 30% ಪರ್ಸಂಟೇಜ್ ದಂಧೆ ನಡಿಯುತ್ತಿದು ಅಭಿವೃದ್ಧಿ ಅಧಿಕಾರಿ 10%, ಇಂಜಿನಿಯರ್ 10%, ತಾಲೂಕು ಪಂಚಾಯತ್ ಅಧಿಕಾರಿಗಳು 7%, ಟೆಕ್ನಿಕಲ್ 3% ಹೀಗೆ ಪಿಡಿಒ ಮಂಜುನಾಥ್ ದಳವಾಯಿ ನಿಂದ ಒಟ್ಟು 30% ಲಂಚದ ಬೇಡಿಕೆ ಇಡಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಸದಸ್ಯರೊಬ್ಬರು ವಿಡಿಯೋ ಹಂಚಿಕೊಂಡು ತೀವ್ರವಾಗಿ ಖಂಡಿಸಿ ತಮ್ಮ ಸದಸ್ಯೆತ್ವಕ್ಕೆ ಸುಧಾ ಸಿದ್ದಪ್ಪ ರವರು ರಾಜೀನಾಮೆ ಸಲ್ಲಿಸಿದ್ದಾರೆ.
ಕಚೇರಿಯಲ್ಲಿ ಈ ರೀತಿಯಾದಂತಹ ಪರ್ಸೆಂಟೇಜ್ ದಂಧೆ ನಡೆಯುತ್ತಿದ್ದು 14ನೇ ಹಣಕಾಸು, 15ನೇ ಹಣಕಾಸು ಮತ್ತು ಉದ್ಯೋಗ ಖಾತ್ರಿ ಯೋಜನೆಯ ಅನುದಾನಗಳನ್ನು ಪಡೆಯಬೇಕಾದಲ್ಲಿ ಪರ್ಸೆಂಟ್ ಕೊಡಬೇಕೆಂದು ಕೇಳುತ್ತಿದ್ದಾರೆ ಈ ರೀತಿ ಕೊಡಲು ನನಗೆ ಸಾಧ್ಯವಿಲ್ಲ. ಒಟ್ಟಾರೆಯಾಗಿ 30% ಕಮಿಷನ್ ಕೇಳುತ್ತಿದ್ದು ಅದನ್ನು ನನ್ನಿಂದ ಕೊಡಲು ಸಾಧ್ಯವಿಲ್ಲ ಅದೇ ಕಾರಣಕ್ಕಾಗಿ ನಾನು ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಹಾಗೂ ಪೂರಕವಾದ ದಾಖಲೆಗಳು ಬೇಕಿದ್ದಲ್ಲಿ ನನ್ನ ಹತ್ತಿರ ವಿಡಿಯೋ ಹಾಗೂ ಆಡಿಯೋ ರೆಕಾರ್ಡ್ಗಳು ಲಭ್ಯವಿದ್ದು ಒದಗಿಸಲು ಸಿದ್ಧನಿದ್ದೇನೆ ಎಂದು ರಾಜಿನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…