ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮೇಖಳಿ ಗ್ರಾಮ ಪಂಚಾಯತಿ ಯಲ್ಲಿ 30% ಪರ್ಸಂಟೇಜ್ ದಂಧೆ ನಡಿಯುತ್ತಿದು ಅಭಿವೃದ್ಧಿ ಅಧಿಕಾರಿ 10%, ಇಂಜಿನಿಯರ್ 10%, ತಾಲೂಕು ಪಂಚಾಯತ್ ಅಧಿಕಾರಿಗಳು 7%, ಟೆಕ್ನಿಕಲ್ 3% ಹೀಗೆ ಪಿಡಿಒ ಮಂಜುನಾಥ್ ದಳವಾಯಿ ನಿಂದ ಒಟ್ಟು 30% ಲಂಚದ ಬೇಡಿಕೆ ಇಡಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಸದಸ್ಯರೊಬ್ಬರು ವಿಡಿಯೋ ಹಂಚಿಕೊಂಡು ತೀವ್ರವಾಗಿ ಖಂಡಿಸಿ ತಮ್ಮ ಸದಸ್ಯೆತ್ವಕ್ಕೆ ಸುಧಾ ಸಿದ್ದಪ್ಪ ರವರು ರಾಜೀನಾಮೆ ಸಲ್ಲಿಸಿದ್ದಾರೆ.
ಕಚೇರಿಯಲ್ಲಿ ಈ ರೀತಿಯಾದಂತಹ ಪರ್ಸೆಂಟೇಜ್ ದಂಧೆ ನಡೆಯುತ್ತಿದ್ದು 14ನೇ ಹಣಕಾಸು, 15ನೇ ಹಣಕಾಸು ಮತ್ತು ಉದ್ಯೋಗ ಖಾತ್ರಿ ಯೋಜನೆಯ ಅನುದಾನಗಳನ್ನು ಪಡೆಯಬೇಕಾದಲ್ಲಿ ಪರ್ಸೆಂಟ್ ಕೊಡಬೇಕೆಂದು ಕೇಳುತ್ತಿದ್ದಾರೆ ಈ ರೀತಿ ಕೊಡಲು ನನಗೆ ಸಾಧ್ಯವಿಲ್ಲ. ಒಟ್ಟಾರೆಯಾಗಿ 30% ಕಮಿಷನ್ ಕೇಳುತ್ತಿದ್ದು ಅದನ್ನು ನನ್ನಿಂದ ಕೊಡಲು ಸಾಧ್ಯವಿಲ್ಲ ಅದೇ ಕಾರಣಕ್ಕಾಗಿ ನಾನು ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಹಾಗೂ ಪೂರಕವಾದ ದಾಖಲೆಗಳು ಬೇಕಿದ್ದಲ್ಲಿ ನನ್ನ ಹತ್ತಿರ ವಿಡಿಯೋ ಹಾಗೂ ಆಡಿಯೋ ರೆಕಾರ್ಡ್ಗಳು ಲಭ್ಯವಿದ್ದು ಒದಗಿಸಲು ಸಿದ್ಧನಿದ್ದೇನೆ ಎಂದು ರಾಜಿನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…
ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…