Latest

ಪಿರಿಯಾಪಟ್ಟಣ ಹನಿಟ್ರ್ಯಾಪ್ ಪ್ರಕರಣಕ್ಕೆ ತೆರೆ: ಕವನ–ಸೈಫ್ ಜೋಡಿ ಕೇರಳದಲ್ಲಿ ಬಂಧನ

ಮೈಸೂರು, ಜುಲೈ 20: ಪಿರಿಯಾಪಟ್ಟಣದ ಕಂಪಲಾಪುರದಲ್ಲಿ ನಡೆದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದೂರಿಗೆ ಓಡಿಹೋದ ಆರೋಪಿಗಳಿಬ್ಬರನ್ನು ಬೈಲಕುಪ್ಪೆ ಪೊಲೀಸರು ಕೇರಳದ ಕಣ್ಣೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಟ್ಟೆ ಅಂಗಡಿಯ ಮಾಲೀಕನೊಬ್ಬನನ್ನು ಬಲೆಗೆ ಎಳೆದು ಲಕ್ಷಾಂತರ ರೂಪಾಯಿ ಹಿಂಡಲು ಪ್ರಯತ್ನಿಸಿದ್ದ ಕವನ ಮತ್ತು ಸೈಫ್ ಎಂಬ ಇಬ್ಬರು ಪ್ರಮುಖ ಆರೋಪಿಗಳು ಈಗ ಪೊಲೀಸರ ವಶದಲ್ಲಿದ್ದಾರೆ.

ಈ ಇಬ್ಬರು ಆರೋಪಿಗಳು ಕೇವಲ ಸಾರ್ವಜನಿಕರನ್ನು ಮಾತ್ರವಲ್ಲ, ಪೊಲೀಸ್ ಇಲಾಖೆಯ ಕೆಲವರ ಸಹಭಾಗಿತ್ವದಿಂದ ಈ ಕೃತ್ಯ ಎಸಗಿದ ಬಗ್ಗೆ ತನಿಖೆಯಲ್ಲಿ ಗೊತ್ತಾಗಿದೆ. ಬೈಲಕುಪ್ಪೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮೊದಲು ಹುಣಸೂರಿನ ಪೊಲೀಸ್ ಕಾನ್ಸ್‌ಟೇಬಲ್ ಶಿವಣ್ಣನನ್ನು ಬಂಧಿಸಿ ಜೈಲಿಗೆ ಕಳಿಸಲಾಗಿತ್ತು.

ಘಟನೆಯ ಹಿನ್ನೆಲೆ ಹೀಗೆ: ಒಂದು ತಿಂಗಳ ಹಿಂದೆ ಕಂಪಲಾಪುರದ ಬಟ್ಟೆ ಅಂಗಡಿ ಮಾಲೀಕ ದಿನೇಶ್ ಕುಮಾರ್ ಅವರನ್ನು ಹನಿಟ್ರ್ಯಾಪ್ ಬಲೆಗೆ ಎಳೆದು, ಶಾರಿಕ ಜೋಡಿ 10 ಲಕ್ಷ ರೂಪಾಯಿ ಹಣಕ್ಕಾಗಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ದಿನೇಶ್ ಕುಮಾರ್ ಅವರು ದೂರು ನೀಡಿದ ನಂತರ, ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದರು.

ಪ್ರಾಥಮಿಕ ತನಿಖೆಯಲ್ಲಿ ಈ ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆ ಶಿವಣ್ಣ, ಆನಂದ್ ಮತ್ತು ಮೂರ್ತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಆದರೆ ಈ ಕೃತ್ಯದ ಬೆನ್ನುಹತ್ತಿದ್ದ ಕವನ ಮತ್ತು ಸೈಫ್ ಪಾರು ಆಗಿದ್ದರಿಂದ ಅವರನ್ನು ಹುಡುಕುವ ಕಾರ್ಯ ಮುಂದುವರಿದಿತ್ತು.

ಆರೋಪಿಗಳ ಪತ್ತೆಗೆ ಎಸ್ಪಿ ವಿಷ್ಣುವರ್ಧನ್ ಮಾರ್ಗದರ್ಶನದಲ್ಲಿ ಭಾರಿ ಕಾರ್ಯಾಚರಣೆ ರೂಪುಗೊಳ್ಳಿತು. ಬೈಲಕುಪ್ಪೆ ಠಾಣೆಯ ಪಿಎಸ್‌ಐ ರವಿಕುಮಾರ್ ಹಾಗೂ ಸಿಬ್ಬಂದಿಯಾದ ವಿಜಯ ಪವರ್, ಮುದ್ದುರಾಜ್, ಮತ್ತು ಮಹಿಳಾ ಪೇದೆ ಅಶ್ವಿತಾ ತಂಡದಲ್ಲಿ ಇದ್ದರು. ತಂಡವು ಕಣ್ಣೂರಿನ ಒಂದು ಲಾಡ್ಜ್‌ನಲ್ಲಿ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಯಿತು.

ಸದ್ಯ, ಹನಿಟ್ರ್ಯಾಪ್ ನಡೆದ ಸ್ಥಳಗಳ ಮೇಲೆ ಮರುಪರಿಶೀಲನೆ ನಡೆಸಿ, ಆರೋಪಿಗಳಿಂದ ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಹಸ್ತಾಂತರಿಸಿ, ಮುಂದಿನ ಹಂತದ ತನಿಖೆ ಜೋರಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

16 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

16 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

16 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

16 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago