Latest

ಪಿರಿಯಾಪಟ್ಟಣ ಹನಿಟ್ರ್ಯಾಪ್ ಪ್ರಕರಣಕ್ಕೆ ತೆರೆ: ಕವನ–ಸೈಫ್ ಜೋಡಿ ಕೇರಳದಲ್ಲಿ ಬಂಧನ

ಮೈಸೂರು, ಜುಲೈ 20: ಪಿರಿಯಾಪಟ್ಟಣದ ಕಂಪಲಾಪುರದಲ್ಲಿ ನಡೆದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದೂರಿಗೆ ಓಡಿಹೋದ ಆರೋಪಿಗಳಿಬ್ಬರನ್ನು ಬೈಲಕುಪ್ಪೆ ಪೊಲೀಸರು ಕೇರಳದ ಕಣ್ಣೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಟ್ಟೆ ಅಂಗಡಿಯ ಮಾಲೀಕನೊಬ್ಬನನ್ನು ಬಲೆಗೆ ಎಳೆದು ಲಕ್ಷಾಂತರ ರೂಪಾಯಿ ಹಿಂಡಲು ಪ್ರಯತ್ನಿಸಿದ್ದ ಕವನ ಮತ್ತು ಸೈಫ್ ಎಂಬ ಇಬ್ಬರು ಪ್ರಮುಖ ಆರೋಪಿಗಳು ಈಗ ಪೊಲೀಸರ ವಶದಲ್ಲಿದ್ದಾರೆ.

ಈ ಇಬ್ಬರು ಆರೋಪಿಗಳು ಕೇವಲ ಸಾರ್ವಜನಿಕರನ್ನು ಮಾತ್ರವಲ್ಲ, ಪೊಲೀಸ್ ಇಲಾಖೆಯ ಕೆಲವರ ಸಹಭಾಗಿತ್ವದಿಂದ ಈ ಕೃತ್ಯ ಎಸಗಿದ ಬಗ್ಗೆ ತನಿಖೆಯಲ್ಲಿ ಗೊತ್ತಾಗಿದೆ. ಬೈಲಕುಪ್ಪೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮೊದಲು ಹುಣಸೂರಿನ ಪೊಲೀಸ್ ಕಾನ್ಸ್‌ಟೇಬಲ್ ಶಿವಣ್ಣನನ್ನು ಬಂಧಿಸಿ ಜೈಲಿಗೆ ಕಳಿಸಲಾಗಿತ್ತು.

ಘಟನೆಯ ಹಿನ್ನೆಲೆ ಹೀಗೆ: ಒಂದು ತಿಂಗಳ ಹಿಂದೆ ಕಂಪಲಾಪುರದ ಬಟ್ಟೆ ಅಂಗಡಿ ಮಾಲೀಕ ದಿನೇಶ್ ಕುಮಾರ್ ಅವರನ್ನು ಹನಿಟ್ರ್ಯಾಪ್ ಬಲೆಗೆ ಎಳೆದು, ಶಾರಿಕ ಜೋಡಿ 10 ಲಕ್ಷ ರೂಪಾಯಿ ಹಣಕ್ಕಾಗಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ದಿನೇಶ್ ಕುಮಾರ್ ಅವರು ದೂರು ನೀಡಿದ ನಂತರ, ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದರು.

ಪ್ರಾಥಮಿಕ ತನಿಖೆಯಲ್ಲಿ ಈ ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆ ಶಿವಣ್ಣ, ಆನಂದ್ ಮತ್ತು ಮೂರ್ತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಆದರೆ ಈ ಕೃತ್ಯದ ಬೆನ್ನುಹತ್ತಿದ್ದ ಕವನ ಮತ್ತು ಸೈಫ್ ಪಾರು ಆಗಿದ್ದರಿಂದ ಅವರನ್ನು ಹುಡುಕುವ ಕಾರ್ಯ ಮುಂದುವರಿದಿತ್ತು.

ಆರೋಪಿಗಳ ಪತ್ತೆಗೆ ಎಸ್ಪಿ ವಿಷ್ಣುವರ್ಧನ್ ಮಾರ್ಗದರ್ಶನದಲ್ಲಿ ಭಾರಿ ಕಾರ್ಯಾಚರಣೆ ರೂಪುಗೊಳ್ಳಿತು. ಬೈಲಕುಪ್ಪೆ ಠಾಣೆಯ ಪಿಎಸ್‌ಐ ರವಿಕುಮಾರ್ ಹಾಗೂ ಸಿಬ್ಬಂದಿಯಾದ ವಿಜಯ ಪವರ್, ಮುದ್ದುರಾಜ್, ಮತ್ತು ಮಹಿಳಾ ಪೇದೆ ಅಶ್ವಿತಾ ತಂಡದಲ್ಲಿ ಇದ್ದರು. ತಂಡವು ಕಣ್ಣೂರಿನ ಒಂದು ಲಾಡ್ಜ್‌ನಲ್ಲಿ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಯಿತು.

ಸದ್ಯ, ಹನಿಟ್ರ್ಯಾಪ್ ನಡೆದ ಸ್ಥಳಗಳ ಮೇಲೆ ಮರುಪರಿಶೀಲನೆ ನಡೆಸಿ, ಆರೋಪಿಗಳಿಂದ ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಹಸ್ತಾಂತರಿಸಿ, ಮುಂದಿನ ಹಂತದ ತನಿಖೆ ಜೋರಾಗಿದೆ.

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

7 hours ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

7 hours ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

17 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

17 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

17 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

17 hours ago