Latest

ಮಹಿಳಾ ಪೊಲೀಸ್ ಪೇದೆ ಗೆ ತಾಳಿ ಕಟ್ಟಿ ದೈಹಿಕ ಶೋಷಣೆ.!: ಅಮೃತ್‌ತೂರಿನ ಇಬ್ಬರು ಪೊಲೀಸ್‌ ಪೇದೆಗಳ ಮೇಲೆ ಪ್ರಕರಣ ದಾಖಲು.

ಕುಣಿಗಲ್: ಮದುವೆಯಾಗುವುದಾಗಿ ನಂಬಿಸಿ ದೇವರ ಫೋಟೋ ಮುಂದೆ ತಾಳಿ ಕಟ್ಟಿದ ಬಳಿಕ ದೈಹಿಕ ಸಂಬಂಧ ಬೆಳೆಸಿ, ಬಳಿಕ ಮತ್ತೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಘಟನೆಯೊಂದರ ಹಿನ್ನೆಲೆಯಲ್ಲಿ ಅಮೃತ್‌ತೂರು ಠಾಣೆಯ ಇಬ್ಬರು ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಘಟನೆ ತಲುಪಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮನಾಪುರ ಗ್ರಾಮದ ಭಗವಂತರಾಯ ಬಿರಾದಾರ (34) ಹಾಗೂ ಡಿ. ನಾಗಭೂಷಣ ಎಂಬುವರ ವಿರುದ್ಧ ಅಮೃತ್‌ತೂರು ಠಾಣೆಯ ಮಹಿಳಾ ಕಾನ್ಸ್‌ಟೇಬಲ್‌ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೂರುದಾರ ಮಹಿಳಾ ಪೇದೆ ಮತ್ತು ಭಗವಂತರಾಯ ಬಿರಾದಾರ ಇಬ್ಬರೂ ಅಮೃತ್‌ತೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಬ್ಬರ ನಡುವೆ ಪ್ರೇಮ ಸಂಬಂಧವಿತ್ತು. ಈ ಸಂಬಂಧದಲ್ಲಿ 2023ರ ಫೆಬ್ರವರಿ 14ರಂದು ಭಗವಂತರಾಯ, ಮಹಿಳಾ ಪೇದೆಯ ನಿವಾಸದಲ್ಲಿರುವ ಸಾಯಿಬಾಬಾ ದೇವರ ಫೋಟೋ ಮುಂದೆ ತಾಳಿ ಕಟ್ಟಿದ್ದು, ಅದನ್ನು ಮದುವೆಯಂತೆ ಗಮನಿಸಿದ್ದೆನೆಂದು ಮಹಿಳಾ ಪೇದೆ ದೂರಿನಲ್ಲಿ ತಿಳಿಸಿದ್ದಾರೆ.

ಮದುವೆ ಕುರಿತು ಕುಟುಂಬದಿಂದ ವಿರೋಧವಿದ್ದರೂ ಬಿರಾದಾರ ನಿರಂತರವಾಗಿ ಸಾನ್ನಿಧ್ಯ ಹೊಂದಿದ್ದು, ಇಬ್ಬರೂ ಒಂದೇ ಇಲಾಖೆಯಲ್ಲಿ ಕೆಲಸ ಮಾಡುವ ಕಾರಣದಿಂದ ಮದುವೆ ವಿಷಯವನ್ನು ಗುಪ್ತವಾಗಿ ಇಡುವಂತೆ ಹೇಳಿ ದೈಹಿಕ ಸಂಪರ್ಕ ಹೊಂದಿದ ಆರೋಪವಿದೆ.

ಆದರೆ ಒಂದು ದಿನ ಮಹಿಳಾ ಪೇದೆ ತಾಳಿ ಧರಿಸಿ ಠಾಣೆಗೆ ಹೋದಾಗ, ಅದನ್ನು ನೋಡಿ ಬಿರಾದಾರ ಕೋಪಗೊಂಡು, ಇಬ್ಬರ ನಡುವೆ ಜಗಳ ನಡೆದಿದೆ. ಮಹಿಳಾ ಪೇದೆ ಈ ಸಂದರ್ಭದಲ್ಲಿ “ನಾವು ಕಾನೂನುಬದ್ಧವಾಗಿ ಮದುವೆಯಾಗೋಣ” ಎಂದು ಪ್ರಸ್ತಾಪಿಸಿದರೂ, ಬಿರಾದಾರ ತಿರಸ್ಕರಿಸಿದ್ದಾನೆ. ಬಳಿಕ, ತನ್ನ ಸಮುದಾಯದ ಹುಡುಗಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವುದನ್ನು ಮಹಿಳಾ ಪೇದೆ ತಿಳಿದಿದ್ದಾರೆ.

ಈ ವಿಷಯ ತಿಳಿದ ಮಹಿಳಾ ಪೇದೆ, ಮತ್ತೊಬ್ಬ ಪೊಲೀಸ್‌ ಸಿಬ್ಬಂದಿ ನಾಗಭೂಷಣ.ಡಿ.ಆರ್‌ಗೆ ಮಾಹಿತಿ ನೀಡಿದಾಗ, ಇಬ್ಬರೂ ಪೇದೆಯ ಕೋಣೆಗೆ ಭೇಟಿ ನೀಡಿ ಮದುವೆ ಬಗ್ಗೆ ದಾಖಲಾತಿ ಕೇಳಿದ್ದಾರೆ. ತಾನು ಸಾಕ್ಷ್ಯಗಳು ಮೊಬೈಲ್‌ನಲ್ಲಿ ಇವೆ ಎಂದು ಮಹಿಳಾ ಪೇದೆ ಹೇಳಿದಾಗ, ಬಿರಾದಾರ ಗಲಾಟೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬುದೂ ದೂರಿನಲ್ಲಿ ಉಲ್ಲೇಖವಾಗಿದೆ.

ಅಲ್ಲದೆ, ಎಸ್ಪಿಗೆ ದೂರು ನೀಡಿದರೆ ಮಾನ ಹಾನಿಯಾಗುತ್ತದೆ ಎಂದು ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳಾ ಪೇದೆ ಆರೋಪ ಮಾಡಿದ್ದಾರೆ. ಈ ಸಂಬಂಧ ತನಿಖೆ ಪ್ರಾರಂಭಿಸಲಾಗಿದ್ದು, ಸೂಕ್ತ ಕ್ರಮ ಕೈಗೊಂಡಿದ್ದಾರೆ.

 

nazeer ahamad

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

17 minutes ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

13 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

15 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago