Latest

ಮಹಿಳಾ ಪೊಲೀಸ್ ಪೇದೆ ಗೆ ತಾಳಿ ಕಟ್ಟಿ ದೈಹಿಕ ಶೋಷಣೆ.!: ಅಮೃತ್‌ತೂರಿನ ಇಬ್ಬರು ಪೊಲೀಸ್‌ ಪೇದೆಗಳ ಮೇಲೆ ಪ್ರಕರಣ ದಾಖಲು.

ಕುಣಿಗಲ್: ಮದುವೆಯಾಗುವುದಾಗಿ ನಂಬಿಸಿ ದೇವರ ಫೋಟೋ ಮುಂದೆ ತಾಳಿ ಕಟ್ಟಿದ ಬಳಿಕ ದೈಹಿಕ ಸಂಬಂಧ ಬೆಳೆಸಿ, ಬಳಿಕ ಮತ್ತೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಘಟನೆಯೊಂದರ ಹಿನ್ನೆಲೆಯಲ್ಲಿ ಅಮೃತ್‌ತೂರು ಠಾಣೆಯ ಇಬ್ಬರು ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಘಟನೆ ತಲುಪಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮನಾಪುರ ಗ್ರಾಮದ ಭಗವಂತರಾಯ ಬಿರಾದಾರ (34) ಹಾಗೂ ಡಿ. ನಾಗಭೂಷಣ ಎಂಬುವರ ವಿರುದ್ಧ ಅಮೃತ್‌ತೂರು ಠಾಣೆಯ ಮಹಿಳಾ ಕಾನ್ಸ್‌ಟೇಬಲ್‌ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೂರುದಾರ ಮಹಿಳಾ ಪೇದೆ ಮತ್ತು ಭಗವಂತರಾಯ ಬಿರಾದಾರ ಇಬ್ಬರೂ ಅಮೃತ್‌ತೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಬ್ಬರ ನಡುವೆ ಪ್ರೇಮ ಸಂಬಂಧವಿತ್ತು. ಈ ಸಂಬಂಧದಲ್ಲಿ 2023ರ ಫೆಬ್ರವರಿ 14ರಂದು ಭಗವಂತರಾಯ, ಮಹಿಳಾ ಪೇದೆಯ ನಿವಾಸದಲ್ಲಿರುವ ಸಾಯಿಬಾಬಾ ದೇವರ ಫೋಟೋ ಮುಂದೆ ತಾಳಿ ಕಟ್ಟಿದ್ದು, ಅದನ್ನು ಮದುವೆಯಂತೆ ಗಮನಿಸಿದ್ದೆನೆಂದು ಮಹಿಳಾ ಪೇದೆ ದೂರಿನಲ್ಲಿ ತಿಳಿಸಿದ್ದಾರೆ.

ಮದುವೆ ಕುರಿತು ಕುಟುಂಬದಿಂದ ವಿರೋಧವಿದ್ದರೂ ಬಿರಾದಾರ ನಿರಂತರವಾಗಿ ಸಾನ್ನಿಧ್ಯ ಹೊಂದಿದ್ದು, ಇಬ್ಬರೂ ಒಂದೇ ಇಲಾಖೆಯಲ್ಲಿ ಕೆಲಸ ಮಾಡುವ ಕಾರಣದಿಂದ ಮದುವೆ ವಿಷಯವನ್ನು ಗುಪ್ತವಾಗಿ ಇಡುವಂತೆ ಹೇಳಿ ದೈಹಿಕ ಸಂಪರ್ಕ ಹೊಂದಿದ ಆರೋಪವಿದೆ.

ಆದರೆ ಒಂದು ದಿನ ಮಹಿಳಾ ಪೇದೆ ತಾಳಿ ಧರಿಸಿ ಠಾಣೆಗೆ ಹೋದಾಗ, ಅದನ್ನು ನೋಡಿ ಬಿರಾದಾರ ಕೋಪಗೊಂಡು, ಇಬ್ಬರ ನಡುವೆ ಜಗಳ ನಡೆದಿದೆ. ಮಹಿಳಾ ಪೇದೆ ಈ ಸಂದರ್ಭದಲ್ಲಿ “ನಾವು ಕಾನೂನುಬದ್ಧವಾಗಿ ಮದುವೆಯಾಗೋಣ” ಎಂದು ಪ್ರಸ್ತಾಪಿಸಿದರೂ, ಬಿರಾದಾರ ತಿರಸ್ಕರಿಸಿದ್ದಾನೆ. ಬಳಿಕ, ತನ್ನ ಸಮುದಾಯದ ಹುಡುಗಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವುದನ್ನು ಮಹಿಳಾ ಪೇದೆ ತಿಳಿದಿದ್ದಾರೆ.

ಈ ವಿಷಯ ತಿಳಿದ ಮಹಿಳಾ ಪೇದೆ, ಮತ್ತೊಬ್ಬ ಪೊಲೀಸ್‌ ಸಿಬ್ಬಂದಿ ನಾಗಭೂಷಣ.ಡಿ.ಆರ್‌ಗೆ ಮಾಹಿತಿ ನೀಡಿದಾಗ, ಇಬ್ಬರೂ ಪೇದೆಯ ಕೋಣೆಗೆ ಭೇಟಿ ನೀಡಿ ಮದುವೆ ಬಗ್ಗೆ ದಾಖಲಾತಿ ಕೇಳಿದ್ದಾರೆ. ತಾನು ಸಾಕ್ಷ್ಯಗಳು ಮೊಬೈಲ್‌ನಲ್ಲಿ ಇವೆ ಎಂದು ಮಹಿಳಾ ಪೇದೆ ಹೇಳಿದಾಗ, ಬಿರಾದಾರ ಗಲಾಟೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬುದೂ ದೂರಿನಲ್ಲಿ ಉಲ್ಲೇಖವಾಗಿದೆ.

ಅಲ್ಲದೆ, ಎಸ್ಪಿಗೆ ದೂರು ನೀಡಿದರೆ ಮಾನ ಹಾನಿಯಾಗುತ್ತದೆ ಎಂದು ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳಾ ಪೇದೆ ಆರೋಪ ಮಾಡಿದ್ದಾರೆ. ಈ ಸಂಬಂಧ ತನಿಖೆ ಪ್ರಾರಂಭಿಸಲಾಗಿದ್ದು, ಸೂಕ್ತ ಕ್ರಮ ಕೈಗೊಂಡಿದ್ದಾರೆ.

 

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

5 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

5 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

5 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

5 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

5 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

5 hours ago