
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಚಾರ್ಮಾಡಿ ಘಾಟಿಯಲ್ಲಿ ತೀವ್ರ ಮಂಜು ಕಾರಣದಿಂದಾಗಿ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಈ ದುರ್ಘಟನೆ ಮಲೆಯಮಾರುತದ ಬಳಿ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಚಿಕ್ಕಮಗಳೂರಿನಿಂದ ಮಂಗಳೂರಿನತ್ತ ತರಕಾರಿ ಸಾಗಿಸುತ್ತಿದ್ದ ಪಿಕಪ್ ವಾಹನವು ತೀವ್ರ ಮಂಜಿನ ನಡುವೆಯೇ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗುತ್ತಿದೆ.
ವಾಹನದಲ್ಲಿ ಇದ್ದ ಚಾಲಕನು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣವೇ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಘಟನೆ ವೇಳೆ ಚಾರ್ಮಾಡಿ ಘಾಟಿ ದಟ್ಟ ಮಂಜಿನಿಂದ ಸಂಪೂರ್ಣ ಆವರಿಸಿಕೊಂಡಿದ್ದಿದ್ದು, ದೃಶ್ಯತೆ ತೀವ್ರವಾಗಿ ಕುಸಿದಿತ್ತು. ಇದರಿಂದಾಗಿ ರಸ್ತೆಯ ದೃಷ್ಟಿ ಸ್ಪಷ್ಟವಾಗದೆ, ಅಪಘಾತ ಸಂಭವಿಸಿದೆ ಎಂಬ ಪ್ರಾಥಮಿಕ ಮಾಹಿತಿ ಲಭಿಸಿದೆ.
ಬಣಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.