ಚಿಕ್ಕಮಗಳೂರು, ಜುಲೈ 8: ರಾಜ್ಯದ ಪಡಿತರ ವ್ಯವಸ್ಥೆಯಲ್ಲಿ ಮತ್ತೊಮ್ಮೆ ಭಾರೀ ಅವ್ಯವಹಾರದ ಆರೋಪ ಕೇಳಿಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬೊಮ್ಮೇನಹಳ್ಳಿ ಹಾಗೂ ನೆರಲಕೆರೆ ಸೇರಿದಂತೆ ಹಲವು ಗ್ರಾಮಗಳ ನ್ಯಾಯಬೆಲೆ ಅಂಗಡಿಗಳಲ್ಲಿ ಫಲಾನುಭವಿಗಳಿಗೆ ಪ್ಲಾಸ್ಟಿಕ್ ಅಕ್ಕಿ ವಿತರಣೆ ಮಾಡಲಾಗಿದೆ ಎಂಬ ಆರೋಪಗಳು ಬೆಳಕಿಗೆ ಬಂದಿವೆ.
ಸ್ಥಳೀಯರ ಹೇಳಿಕೆಯಂತೆ, ಅಂಗಡಿಗಳಿಂದ ಪಡೆದ ಅಕ್ಕಿಯನ್ನು ನೀರಿಗೆ ಹಾಕಿದಾಗ ಅದು ಸಾಮಾನ್ಯ ಅಕ್ಕಿಯಂತೆ ನೆನೆಯದೆ ಪ್ಲಾಸ್ಟಿಕ್ ಮಾದರಿಯಲ್ಲಿ ಮೇಲಕ್ಕೆ ತೇಲುತ್ತಿದೆ. ಕೆಲವೊಂದು ಪ್ಯಾಕೆಟ್ಟಿನಲ್ಲಿ ಅಕ್ಕಿಯ ಅರ್ಧದಷ್ಟು ಭಾಗ ಈ ಶಂಕಾಸ್ಪದ ಅಂಶದಿಂದ ಕೂಡಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಮನೆಮಾಡಿದೆ.
ಪ್ಲಾಸ್ಟಿಕ್ ಅಕ್ಕಿ ಸೇವನೆಯಿಂದ ಆರೋಗ್ಯಕ್ಕೆ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ, ಪಡಿತರದಾರರು ತಕ್ಷಣವೇ ಸ್ಥಳೀಯ ತಹಶೀಲ್ದಾರ್ ಕಚೇರಿಗೆ ದೂರು ಸಲ್ಲಿಸಿದ್ದಾರೆ. ಪ್ರಾಥಮಿಕ ತನಿಖೆ ಕೈಗೊಂಡ ಅಧಿಕಾರಿಗಳು ಪ್ರಕರಣದ ಗಂಭೀರತೆಯನ್ನು ಗಮನಿಸಿ ಹೆಚ್ಚಿನ ಪರಿಶೀಲನೆ ಮಾಡಲು ಕ್ರಮ ಆರಂಭಿಸಿದ್ದಾರೆ.
ಈ ಸಂಬಂಧ ನೊಂದಿಗೆ ಮಾತನಾಡಿದ ಅಧಿಕಾರಿಯೊಬ್ಬರು, “ಆಪತ್ತಿನ ವೇಳೆ ಪಡಿತರ ವ್ಯವಸ್ಥೆ ಬಡ ಜನತೆಗೆ ಆಶಾದೀಪವಾಗಬೇಕು. ಆದರೆ ಈ ರೀತಿಯ ಅಕ್ರಮ ಘಟನೆಯು ಖಂಡನೀಯ. ನಾವು ಪ್ರಕರಣದ ಹಿನ್ನೆಲೆಯನ್ನು ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ,” ಎಂದಿದ್ದಾರೆ.
ಜನತಾ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಪಡಿತರ ಆಹಾರದ ಗುಣಮಟ್ಟದ ಬಗ್ಗೆ ಸಾರ್ವಜನಿಕರಲ್ಲಿ ಮತ್ತೆ ಅನುಮಾನಗಳು ಮೂಡಿರುವುದು ನಿಜ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜನರು ಆಗ್ರಹಿಸುತ್ತಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…