Categories: CrimeLatest

ಆಸ್ತಿ ಆಸೆಗೆ ತಂದೆಯನ್ನೇ ಮುಗಿಸಲು ಸಂಚು; ನಿದ್ರೆ ಮಾತ್ರೆ ಕೊಟ್ಟು ಮಗನಿಂದ ಕತ್ತು ಹಿಸುಕಿ ಕೊಲೆ!

ಕೋಲಾರ: ಹಣ-ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆ ಮಾಡಿರುವ ಆರೋಪದ ಪ್ರಕರಣ ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಚನ್ನಸಂದ್ರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಆಸ್ತಿ ವಿಚಾರದಲ್ಲಿ ನಡೆದ ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಹಾಗೂ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಚನ್ನಸಂದ್ರ ಗ್ರಾಮದ 66 ವರ್ಷದ ನಾರಾಯಣಸ್ವಾಮಿ ಅವರನ್ನು ಗಂಭೀರ ಸ್ಥಿತಿಯಲ್ಲಿ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ತಂದೆಯನ್ನು ಉಳಿಸಿಕೊಳ್ಳುವಂತೆ ಮಗ ಪ್ರಮೋದ್ ವೈದ್ಯರ ಬಳಿ ಮನವಿ ಮಾಡುತ್ತಿದ್ದ. ಇದೇ ವೇಳೆ ನಾರಾಯಣಸ್ವಾಮಿಯ ಪತ್ನಿ 58 ವರ್ಷದ ಜಗದಂಬಾ ವೇಮಗಲ್ ಪೊಲೀಸ್ ಠಾಣೆಗೆ ತೆರಳಿ, ‘ನನ್ನ ಗಂಡನನ್ನು ನಾನೇ ಕೊಲೆ ಮಾಡಿದ್ದೇನೆ, ನನ್ನನ್ನು ಬಂಧಿಸಿ’ ಎಂದು ಶರಣಾಗಿದ್ದಳು.

ಮೊದಲಿಗೆ ಪತ್ನಿಯ ಹೇಳಿಕೆ ಕೇಳಿದ ಪೊಲೀಸರಿಗೆ ಗಂಡನಿಂದ ಆಕೆಗೆ ಯಾವುದೋ ರೀತಿಯ ಕಿರುಕುಳವಾಗಿರಬಹುದು ಎಂಬ ಅನುಮಾನ ಮೂಡಿತ್ತು. ಆದರೆ ತನಿಖೆ ಮುಂದುವರಿದಂತೆ ಅಸಲಿ ಕಥೆ ಬಯಲಾಗಿದೆ.

ನಾಲ್ಕು ಎಕರೆ ಮಾರಾಟ, ಉಳಿದ ಎರಡು ಎಕರೆ ಮೇಲೆ ಕಣ್ಣು

ಪೊಲೀಸರ ಪ್ರಕಾರ, ನಾರಾಯಣಸ್ವಾಮಿ ಕಳೆದ ಸುಮಾರು 15 ವರ್ಷಗಳಿಂದ ಪತ್ನಿ ಜಗದಂಬಾ ಹಾಗೂ ಪುತ್ರ ಪ್ರಮೋದ್‌ನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ತಮ್ಮ ಬಳಿ ಇದ್ದ ನಾಲ್ಕು ಎಕರೆ ಜಮೀನನ್ನು ಅವರು ಈಗಾಗಲೇ ಮಾರಾಟ ಮಾಡಿದ್ದರು. ಉಳಿದ ಎರಡು ಎಕರೆ ಜಮೀನನ್ನೂ ಮಾರಾಟ ಮಾಡಲು ಮುಂದಾಗಿದ್ದರು ಎನ್ನಲಾಗಿದೆ.

ಇದರಿಂದ ತಾಯಿ-ಮಗ ಅಸಮಾಧಾನಗೊಂಡಿದ್ದರು. ಈಗಾಗಲೇ ಮಾರಾಟವಾಗಿದ್ದ ಜಮೀನಿನ ಹಣದಲ್ಲಿ ತಮ್ಮ ಪಾಲು ಸಿಗಲಿಲ್ಲ. ಉಳಿದ ಜಮೀನನ್ನೂ ತಂದೆ ಮಾರಾಟ ಮಾಡಿದರೆ ತಮಗೆ ಏನೂ ಉಳಿಯುವುದಿಲ್ಲ ಎಂಬ ಕಾರಣಕ್ಕೆ ನಾರಾಯಣಸ್ವಾಮಿಯನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.

ಊಟದಲ್ಲಿ ನಿದ್ರೆ ಮಾತ್ರೆ, ಬಳಿಕ ಕತ್ತು ಹಿಸುಕಿ ಕೊಲೆ!

ಯೋಜನೆಯಂತೆ ಜಗದಂಬಾ ಮತ್ತು ಪ್ರಮೋದ್ ಕೆಲ ದಿನಗಳಿಂದ ನಾರಾಯಣಸ್ವಾಮಿಯೊಂದಿಗೆ ಆತ್ಮೀಯವಾಗಿ ವರ್ತಿಸುತ್ತಿದ್ದರು ಎನ್ನಲಾಗಿದೆ. ಘಟನೆ ನಡೆದ ದಿನ ತೋಟದ ಶೆಡ್‌ನಲ್ಲಿ ನುಗ್ಗೆಕಾಯಿ ಸಾಂಬಾರ್ ಮತ್ತು ಮುದ್ದೆ ತಯಾರಿಸಿ ಕೂಲಿ ಕಾರ್ಮಿಕರಿಗೆ ಊಟ ಬಡಿಸಿದ್ದರು.

ಮಧ್ಯಾಹ್ನದ ವೇಳೆಯಲ್ಲಿ ನಾರಾಯಣಸ್ವಾಮಿಗೂ ಊಟ ನೀಡಲಾಗಿದ್ದು, ಅದರಲ್ಲಿ ನಿದ್ರೆ ಮಾತ್ರೆಗಳನ್ನು ಬೆರೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಊಟ ಮಾಡಿದ ಬಳಿಕ ನಾರಾಯಣಸ್ವಾಮಿ ನಿದ್ರೆಗೆ ಜಾರಿದಾಗ, ಪ್ರಮೋದ್ ಹಗ್ಗ ಬಳಸಿ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಗಂಭೀರ ಸ್ಥಿತಿಯಲ್ಲಿದ್ದ ನಾರಾಯಣಸ್ವಾಮಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಪ್ರಕರಣದ ತನಿಖೆ ವೇಳೆ ಪೊಲೀಸರು ತಾಯಿ-ಮಗನ ಹೇಳಿಕೆಗಳನ್ನು ಪರಿಶೀಲಿಸಿದಾಗ ಕೃತ್ಯದ ಹಿಂದಿನ ಸಂಚು ಬಯಲಾಗಿದೆ ಎಂದು ತಿಳಿದುಬಂದಿದೆ.

ತನ್ನ ಮಗನನ್ನು ರಕ್ಷಿಸುವ ಉದ್ದೇಶದಿಂದ ಜಗದಂಬಾ ಪೊಲೀಸರ ಮುಂದೆ ಶರಣಾಗಿದ್ದಳು ಎನ್ನಲಾಗಿದ್ದು, ಮತ್ತೊಂದೆಡೆ ಪ್ರಮೋದ್ ಆಸ್ಪತ್ರೆಯಲ್ಲಿ ತಂದೆಯನ್ನು ಉಳಿಸಲು ಪ್ರಯತ್ನಿಸುತ್ತಿರುವಂತೆ ವರ್ತಿಸುತ್ತಿದ್ದ ಎನ್ನಲಾಗಿದೆ.

ಪ್ರಕರಣದ ತನಿಖೆ ನಡೆಸಿದ ವೇಮಗಲ್ ಪೊಲೀಸರು ಇದೀಗ ಜಗದಂಬಾ ಹಾಗೂ ಪ್ರಮೋದ್‌ನನ್ನು ಬಂಧಿಸಿದ್ದು, ಆಸ್ತಿ ವಿಚಾರವೇ ಕೊಲೆಗೆ ಪ್ರಮುಖ ಕಾರಣವಾಗಿತ್ತೇ ಎಂಬ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಹಣ-ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆ ಮಾಡಲು ಮುಂದಾದ ತಾಯಿ-ಮಗನ ಕೃತ್ಯಕ್ಕೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಭ್ರಷ್ಟರ ಬೇಟೆ

Recent Posts

ನಾಲ್ಕನೇ ಬಾರಿಯೂ ಹೆಣ್ಣು ಮಗು: ಬಾಣಂತಿ ಮಮತಾಳ ದಾರುಣ ಅಂತ್ಯ, ಅತ್ತೆ ಮನೆಯ ಕಿರುಕುಳ ಆರೋಪ!

ನಲಗೊಂಡ: ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಮಹಿಳೆಯೊಬ್ಬರು ಕೌಟುಂಬಿಕ ಒತ್ತಡ ಹಾಗೂ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪ ಕೇಳಿಬಂದಿದ್ದು, ಕೊನೆಗೆ ಬಾಣಂತಿಯೊಬ್ಬರು…

1 hour ago

ಜೈಲಿನಲ್ಲೂ ಪ್ರಜ್ವಲ್ ರೇವಣ್ಣಗೆ ಮೊಬೈಲ್‌ ಸೌಲಭ್ಯ? ಫೋನ್‌ನಲ್ಲಿ ಅಶ್ಲೀಲ ವಿಡಿಯೋ ಪತ್ತೆ, ಅಧಿಕಾರಿಗಳ ವಿರುದ್ಧ ಗಂಭೀರ ಪ್ರಶ್ನೆ!

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೂ ಮೊಬೈಲ್ ಫೋನ್…

1 hour ago

ವಸತಿ ನಿಲಯದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ, ಉನ್ನತ ಮಟ್ಟದ ತನಿಖೆಗೆ ಆಗ್ರಹ!

ಪಾವಗಡ: ತಾಲೂಕಿನ ರಂಗಸಮುದ್ರದಲ್ಲಿರುವ ಕಸ್ತೂರಬಾ ಗಾಂಧಿ ವಸತಿ ನಿಲಯದಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕ ಎಂಬ ಬಾಲಕಿ ಅನುಮಾನಾಸ್ಪದವಾಗಿ…

3 hours ago

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

1 day ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

1 day ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

1 day ago