ಮಾಲೂರು ಠಾಣಾ ಸರಹದ್ದಿನ ಅಗ್ರಹಾರ ಗ್ರಾಮದ ಬಳಿ ಇರುವ ಮಧು ರವರ ನೀಲಗಿರಿ ತೋಪಿನಲ್ಲಿ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಹರೀಶ್ ಕುಮಾರ್, ನಾಗರಾಜ್ , ಅವಿನಾಸ್, ಮಂಜುನಾತ, ಮುನಿಯಪ್ಪ , ಮತ್ತು ವೆಂಕಟೇಶಪ್ಪ 06 ಜನರನ್ನು ವಶಕ್ಕೆ ಪಡೆದು ಅಂದರ್ ಬಾಹರ್ ಜೂಜಾಟಕ್ಕೆ ಪಣವಾಗಿಟ್ಟಿದ್ದ ರೂ. 6200/- ನಗದು. 52 ಇಸ್ಪೀಟ್ ಎಲೆಗಳನ್ನು ಮತ್ತು ಒಂದು ಪ್ಲಾಸ್ಟಿಕ್ ಟಾರ್ಪಲ್ ಅನ್ನು ವಶಕ್ಕೆ ಪಡೆದು ಒಟ್ಟು 06 ಜನರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗದೀಶ್ ಮತ್ತು ರವಿಶಂಕರ್ ರವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಎಂ.ಹೆಚ್ ನಾಗ್ತೇ ಪೊಲೀಸ್ ಉಪಾಧೀಕ್ಷಕರು, ಕೋಲಾರ ಉಪ-ವಿಭಾಗ ರವರ ನೇತೃತ್ವದಲ್ಲಿದಲ್ಲಿ ಪಿ.ಐ ವಸಂತ್ ಕುಮಾರ್ ಮಾಲೂರು ಪೊಲೀಸ್ ಠಾಣೆ ಸಿಬ್ಬಂದಿಗಳಾದ ಎ.ಎಸ್.ಐ ಶ್ರೀಮತಿ ವರಲಕ್ಷ್ಮಿ, ಕೋದಂಡಪಾಣಿ, ವೆಂಕಟೇಶ್, ರಾಜ್ ಕುಮಾರ್, ನವೀನ್ ಕುಮಾರ್, ಸಚಿನ್ ರವರು ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದು ಅಧಿಕಾರಿ ಮತ್ತು ಸಿಬ್ಬಂದಿಯವರ ಈ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ. ವರದಿ: ರೋಶನ್ ಜಮೀರ್
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…