ಉಡುಪಿ, ಜುಲೈ 13: ಅಪ್ರಾಪ್ತ ಬಾಲಕಿಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿ, ಸ್ಥಳ ಮಹಜರು ವೇಳೆ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ 29 ವರ್ಷದ ಮುಹಮ್ಮದ್ ದಾನಿಶ್ ಎನ್ನುವ ವ್ಯಕ್ತಿ, ರವಿವಾರ ಮಣಿಪಾಲದ ಟ್ಯಾಂಗೋಡು ಹಳ್ಳಿಯಲ್ಲಿ ಮಹಜರು ವೇಳೆ ಪರಾರಿಯಾಗಲು ಯತ್ನಿಸಿದ್ದು, ಈ ಸಂದರ್ಭ ಹೊಡೆದಾಡುವ ಹಂತಕ್ಕೇರಿದಿದ್ದಾನೆ.

ಮಹಜರು ವೇಳೆ ಆತನನ್ನು ಹಿಡಿದುಕೊಂಡಿದ್ದ ಪೊಲೀಸ್ ಸಿಬ್ಬಂದಿ ರಿತೇಶ್‌ ಮೇಲೆ ದಾನಿಶ್ ದಾಳಿ ನಡೆಸಿ, ಎದೆಗೆ ತಳ್ಳಿದ ಬಳಿಕ ನೆಲಕ್ಕೆ ದೂಡಿದ್ದಾನೆ. ಹತ್ತಿರವೇ ಇದ್ದ ಕಲ್ಲನ್ನು ಎತ್ತಿ ಹೊಡೆಯಲು ಯತ್ನಿಸಿದಾಗ, ಸ್ಥಳದಲ್ಲಿದ್ದ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ್ ತಡೆದಿದ್ದಾರೆ. ಆದರೆ ದಾನಿಶ್‌ ಅವರುಗಳ ಮೇಲೆಯೂ ಹಲ್ಲೆಗೆ ಮುಂದಾಗಿದ್ದಾನೆ. ಆಗ ಪೊಲೀಸರ ಲಾಠಿಚಾರ್ಜ್‌ಗೆ ಒಳಪಟ್ಟು ಎರಡೂ ಕಾಲುಗಳಿಗೆ ಗಾಯಗೊಂಡ ದಾನಿಶ್‌ನನ್ನು ವಶಕ್ಕೆ ಪಡೆಯಲಾಗಿದೆ.

ಘಟನೆಯಲ್ಲಿ ಗಾಯಗೊಂಡ ರಿತೇಶ್ ಹಾಗೂ ದಾನಿಶ್ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಬಗ್ಗೆ ಅರಿವು ಪಡೆದ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳು ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ. ಈ ಸಂದರ್ಭ ಹೆಚ್ಚುವರಿ ಎಸ್‌ಪಿ ಸುಧಾಕರ್ ಎಸ್. ನಾಯ್ಕ್, ಡಿವೈಎಸ್‌ಪಿ ಪ್ರಭು ಡಿ.ಟಿ. ಹಾಗೂ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ್ ಉಪಸ್ಥಿತರಿದ್ದರು.

ಆರು ಮಂದಿ ಆರೋಪಿಗಳ ಬಂಧನ

ಜುಲೈ 8ರಂದು ಎಂಟು ವರ್ಷದ ಬಾಲಕಿಯ ಮೇಲೆ ಮಣಿಪಾಲದ ಟ್ಯಾಪ್ಮಿ ರಸ್ತೆಯ ಹಳ್ಳಿಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿದ್ದು, ಜುಲೈ 11ರಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯಲ್ಲಿ ಉಡುಪಿ ಪೊಲೀಸರ ತಂಡ ದಾನಿಶ್ ಸೇರಿದಂತೆ ಶಾಮಿ, ಮೌಸೀನ್ ಹಾಗೂ ಅಬಿದಾ ಎಂಬ ನಾಲ್ವರನ್ನು ಜುಲೈ 12ರಂದು ಬಂಧಿಸಿದೆ. ಅವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ಈ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಆರೋಪಿಗಳ ವಿರುದ್ಧ ಕಾನೂನು ಪ್ರಕ್ರಿಯೆ ಜಾರಿಯಲ್ಲಿದೆ.

Related News

error: Content is protected !!